<p><strong>ಸಿರಿಗೆರೆ</strong>: ಸ್ಥಳೀಯರಿಗೆ ಉದ್ಯೋಗಾವ ಕಾಶ ನೀಡದ, ಜನರ ಆರೋಗ್ಯ, ಶಿಕ್ಷಣಕ್ಕೆ ಒತ್ತು ಕೊಡದ ಗಣಿ ಉದ್ದಿಮೆದಾರರ ವಿರುದ್ಧ ಭೀಮಸಮುದ್ರದ ಕರ್ನಾಟಕ ರಾಜ್ಯ ರೈತ ಸಂಘದ ಸ್ಥಳೀಯ ಘಟಕ ಹಾಗೂ ಪರಿಸರ ಮತ್ತು ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.</p>.<p>ಭೀಮಸಮುದ್ರದ ಪಾಳ್ಯ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದ ಪಾದಯಾತ್ರೆಯಲ್ಲಿ ಗಣಿಬಾಧಿತ ಗ್ರಾಮಗಳ 500ಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಪಾದಯಾತ್ರೆ ಬೆಳಿಗ್ಗೆ 7 ಗಂಟೆಗೆ ಆರಂಭವಾಯಿತು.</p>.<p>‘ಗಣಿ ಕಂಪನಿಯವರು ಸ್ಥಳೀಯರ ಉದ್ಯೋಗದ ಅವಕಾಶಗಳನ್ನು ಕಿತ್ತುಕೊಂಡಿದ್ದಾರೆ. ಹೊರ ರಾಜ್ಯಗಳ ಜನರಿಗೆ ಇಲ್ಲಿ ವಿಪುಲ ಅವಕಾಶಗಳನ್ನು ನೀಡಲಾಗುತ್ತಿದೆ. ಗಣಿಬಾಧಿತ ಸುಮಾರು 35 ಹಳ್ಳಿಗಳ ಜನರ ಬದುಕು ಸಂಕಷ್ಟಮಯವಾಗಿದೆ. ಬೆಳೆ ಹಾಗೂ ಜನರ ಆರೋಗ್ಯದ ಮೇಲೆ ಗಣಿ ದೂಳು ದುಷ್ಪರಿಣಾಮ ಉಂಟು ಮಾಡುತ್ತಿದೆ. ಆದ್ದರಿಂದ ಅದಿರು ಸಾಗಣೆಗೆ ನಮ್ಮೂರಿನ ರಸ್ತೆಗಳನ್ನು ಬಳಸಿಕೊಳ್ಳದೆ ಅವರು ಪ್ರತ್ಯೇಕ ರೈಲು ಮಾರ್ಗ ಮಾಡಿಕೊಳ್ಳಲಿ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ ಹೇಳಿದರು.</p>.<p>‘ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಒತ್ತು ಕೊಡದೆ ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಮಕ್ಕಳು, ವೃದ್ಧರು ಆರೋಗ್ಯ ಸಮಸ್ಯೆಯಿಂದ ನರಳುತ್ತಿದ್ದಾರೆ’ ಎಂದು ಪುನಶ್ಚೇತನ ಹೋರಾಟ ಸಮಿತಿಯ ಸದಸ್ಯ ವಸಂತ್ ಕುಮಾರ್ ದೂರಿದರು.</p>.<p>‘21 ಹಕ್ಕುಗಳನ್ನು ಮಂಡಿಸಿದ್ದೇವೆ. ಸರ್ಕಾರ ಅವುಗಳ ಈಡೇರಿಕೆಗೆ ಮುಂದಾಗಬೇಕು. ನಾವು ಗಣಿಗಾರಿಕೆಯನ್ನು ವಿರೋಧಿಸುತ್ತಿಲ್ಲ. ಇದು ಸಾರ್ವಜನಿಕರ ಹಿತಾಶಕ್ತಿಯನ್ನು ಕಿತ್ತುಕೊಳ್ಳುವ ಗಣಿ ಕಂಪನಿಗಳ ವಿರುದ್ಧದ ಹೋರಾಟವಷ್ಟೇ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-44-1936693717</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ಸ್ಥಳೀಯರಿಗೆ ಉದ್ಯೋಗಾವ ಕಾಶ ನೀಡದ, ಜನರ ಆರೋಗ್ಯ, ಶಿಕ್ಷಣಕ್ಕೆ ಒತ್ತು ಕೊಡದ ಗಣಿ ಉದ್ದಿಮೆದಾರರ ವಿರುದ್ಧ ಭೀಮಸಮುದ್ರದ ಕರ್ನಾಟಕ ರಾಜ್ಯ ರೈತ ಸಂಘದ ಸ್ಥಳೀಯ ಘಟಕ ಹಾಗೂ ಪರಿಸರ ಮತ್ತು ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.</p>.<p>ಭೀಮಸಮುದ್ರದ ಪಾಳ್ಯ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದ ಪಾದಯಾತ್ರೆಯಲ್ಲಿ ಗಣಿಬಾಧಿತ ಗ್ರಾಮಗಳ 500ಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಪಾದಯಾತ್ರೆ ಬೆಳಿಗ್ಗೆ 7 ಗಂಟೆಗೆ ಆರಂಭವಾಯಿತು.</p>.<p>‘ಗಣಿ ಕಂಪನಿಯವರು ಸ್ಥಳೀಯರ ಉದ್ಯೋಗದ ಅವಕಾಶಗಳನ್ನು ಕಿತ್ತುಕೊಂಡಿದ್ದಾರೆ. ಹೊರ ರಾಜ್ಯಗಳ ಜನರಿಗೆ ಇಲ್ಲಿ ವಿಪುಲ ಅವಕಾಶಗಳನ್ನು ನೀಡಲಾಗುತ್ತಿದೆ. ಗಣಿಬಾಧಿತ ಸುಮಾರು 35 ಹಳ್ಳಿಗಳ ಜನರ ಬದುಕು ಸಂಕಷ್ಟಮಯವಾಗಿದೆ. ಬೆಳೆ ಹಾಗೂ ಜನರ ಆರೋಗ್ಯದ ಮೇಲೆ ಗಣಿ ದೂಳು ದುಷ್ಪರಿಣಾಮ ಉಂಟು ಮಾಡುತ್ತಿದೆ. ಆದ್ದರಿಂದ ಅದಿರು ಸಾಗಣೆಗೆ ನಮ್ಮೂರಿನ ರಸ್ತೆಗಳನ್ನು ಬಳಸಿಕೊಳ್ಳದೆ ಅವರು ಪ್ರತ್ಯೇಕ ರೈಲು ಮಾರ್ಗ ಮಾಡಿಕೊಳ್ಳಲಿ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹಂಪಯ್ಯನ ಮಾಳಿಗೆ ಧನಂಜಯ ಹೇಳಿದರು.</p>.<p>‘ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಒತ್ತು ಕೊಡದೆ ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಮಕ್ಕಳು, ವೃದ್ಧರು ಆರೋಗ್ಯ ಸಮಸ್ಯೆಯಿಂದ ನರಳುತ್ತಿದ್ದಾರೆ’ ಎಂದು ಪುನಶ್ಚೇತನ ಹೋರಾಟ ಸಮಿತಿಯ ಸದಸ್ಯ ವಸಂತ್ ಕುಮಾರ್ ದೂರಿದರು.</p>.<p>‘21 ಹಕ್ಕುಗಳನ್ನು ಮಂಡಿಸಿದ್ದೇವೆ. ಸರ್ಕಾರ ಅವುಗಳ ಈಡೇರಿಕೆಗೆ ಮುಂದಾಗಬೇಕು. ನಾವು ಗಣಿಗಾರಿಕೆಯನ್ನು ವಿರೋಧಿಸುತ್ತಿಲ್ಲ. ಇದು ಸಾರ್ವಜನಿಕರ ಹಿತಾಶಕ್ತಿಯನ್ನು ಕಿತ್ತುಕೊಳ್ಳುವ ಗಣಿ ಕಂಪನಿಗಳ ವಿರುದ್ಧದ ಹೋರಾಟವಷ್ಟೇ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-44-1936693717</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>