<p><strong>ಹೊಸದುರ್ಗ</strong>: ಸಿರಿಗೆರೆ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಠ ಹಾಗೂ ಸಮಾಜದ ಘನತೆ ಹೆಚ್ಚಿಸಿದವರು ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸ್ಮರಿಸಿದರು.</p>.<p>ತಾಲ್ಲೂಕಿನ ಸಾಣೇಹಳ್ಳಿಯ ಗುರುಬಸವ ಮಹಾಮನೆಯಲ್ಲಿ ಭಾನುವಾರ ಆಯೋಜಿಸಿದ್ದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳ 18ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಮಲಿಕಾರ್ಜುನ ಶ್ರೀಗಳು ಅಪ್ಪಟ ಕೃಷಿಕರಾಗಿದ್ದರು. ಒಣ ಬೇಸಾಯಗಾರರನ್ನು ತೋಟಗಾರಿಕೆ ಬೆಳೆಗಾರರನ್ನಾಗಿ ಮಾಡುವಂತೆ ಪ್ರೇರೇಪಿಸಿದವರು. ಇಷ್ಟಲಿಂಗ ಪೂಜೆ ಮಾಡುವುದರ ಜೊತೆಗೆ ಲಕ್ಷಾಂತರ ಜನರಿಗೆ ಇಷ್ಟಲಿಂಗ ದೀಕ್ಷೆ ನೀಡಿ ಲಿಂಗವಂತ ಧರ್ಮ ಪಾಲಿಸುವಂತೆ ಮಾಡಿದ ಆಧ್ಯಾತ್ಮ ಗುರುಗಳಾಗಿದ್ದರು ಎಂದು ತಿಳಿಸಿದರು.</p>.<p>ಸಾಧು ವೀರಶೈವ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಸಿದ್ದಪ್ಪ, ಸ್ಥಳೀಯ ಸಲಹಾ ಸಮಿತಿ ಉಪಾಧ್ಯಕ್ಷ ಎಸ್.ಆರ್. ಚಂದ್ರಶೇಖರಯ್ಯ, ಮುಖ್ಯೋಪಾಧ್ಯಾಯ ಶಿವಕುಮಾರ್ ಬಿ.ಎಸ್ ಸೇರಿದಂತೆ ಗ್ರಾಮಸ್ಥರು ಹಾಗೂ ಶ್ರೀಮಠದ ಭಕ್ತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಸಿರಿಗೆರೆ ಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಠ ಹಾಗೂ ಸಮಾಜದ ಘನತೆ ಹೆಚ್ಚಿಸಿದವರು ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸ್ಮರಿಸಿದರು.</p>.<p>ತಾಲ್ಲೂಕಿನ ಸಾಣೇಹಳ್ಳಿಯ ಗುರುಬಸವ ಮಹಾಮನೆಯಲ್ಲಿ ಭಾನುವಾರ ಆಯೋಜಿಸಿದ್ದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳ 18ನೇ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>ಮಲಿಕಾರ್ಜುನ ಶ್ರೀಗಳು ಅಪ್ಪಟ ಕೃಷಿಕರಾಗಿದ್ದರು. ಒಣ ಬೇಸಾಯಗಾರರನ್ನು ತೋಟಗಾರಿಕೆ ಬೆಳೆಗಾರರನ್ನಾಗಿ ಮಾಡುವಂತೆ ಪ್ರೇರೇಪಿಸಿದವರು. ಇಷ್ಟಲಿಂಗ ಪೂಜೆ ಮಾಡುವುದರ ಜೊತೆಗೆ ಲಕ್ಷಾಂತರ ಜನರಿಗೆ ಇಷ್ಟಲಿಂಗ ದೀಕ್ಷೆ ನೀಡಿ ಲಿಂಗವಂತ ಧರ್ಮ ಪಾಲಿಸುವಂತೆ ಮಾಡಿದ ಆಧ್ಯಾತ್ಮ ಗುರುಗಳಾಗಿದ್ದರು ಎಂದು ತಿಳಿಸಿದರು.</p>.<p>ಸಾಧು ವೀರಶೈವ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಸಿದ್ದಪ್ಪ, ಸ್ಥಳೀಯ ಸಲಹಾ ಸಮಿತಿ ಉಪಾಧ್ಯಕ್ಷ ಎಸ್.ಆರ್. ಚಂದ್ರಶೇಖರಯ್ಯ, ಮುಖ್ಯೋಪಾಧ್ಯಾಯ ಶಿವಕುಮಾರ್ ಬಿ.ಎಸ್ ಸೇರಿದಂತೆ ಗ್ರಾಮಸ್ಥರು ಹಾಗೂ ಶ್ರೀಮಠದ ಭಕ್ತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>