ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಯ ವಾರ್ಷಿಕ ಮಹಾಜಾತ್ರೆಯು ಮಾರ್ಚ್ ತಿಂಗಳ ಮೂರು ಅಥವಾ ನಾಲ್ಕನೇ ವಾರದಲ್ಲಿ ನಡೆಯುತ್ತದೆ. ಸುಮಾರು 78 ಅಡಿ ಎತ್ತರದ 70 ಟನ್ ತೂಕದ ಐದು ಚಕ್ರಗಳುಳ್ಳ ಬೃಹತ್ ರಥ ಈ ಜಾತ್ರೆಯ ವಿಶೇಷ ಆಕರ್ಷಣೆ. ಜಾತ್ರೆಗೆ ಜಿಲ್ಲೆ ಸೇರಿದಂತೆ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು, ರಾಮನಗರ, ಬಳ್ಳಾರಿ, ರಾಯಚೂರು, ಕೊಪ್ಪಳ ಸೇರಿದಂತೆ ನೆರೆಯ ಸೀಮಾಂಧ್ರ ಪ್ರದೇಶದ ಕಲ್ಯಾಣದುರ್ಗ, ರಾಯದುರ್ಗ, ಅನಂತಪುರ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ರಥವನ್ನು ಎಳೆಯುತ್ತಾರೆ.