<p>ಧರ್ಮಪುರ: ಹಾವು ಕಚ್ಚಿದ ಬಾಲಕನಿಗೆ ತಜ್ಞ ವೈದ್ಯರಿಲ್ಲದ ಕಾರಣ ಸೂಕ್ತ ಚಿಕಿತ್ಸೆ ದೊರೆಯಲಿಲ್ಲ ಎಂದು ಆರೋಪಿಸಿ ಸಮೀಪದ ಬೆನಕನಹಳ್ಳಿ ಗ್ರಾಮಸ್ಥರು ಬುಧವಾರ ಆಸ್ಪತ್ರೆ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದರು. </p>.<p>ಮೃತ ಬಾಲಕ ಶಶಾಂಕ (11) ತಂದೆಯ ಜೊತೆ ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಬುಧವಾರ ಬೆಳಗಿನ ಜಾವ 3 ಗಂಟೆಗೆ ಹಾವು ಕಚ್ಚಿದೆ. ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದು, ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹಿರಿಯೂರಿಗೆ ಹೋಗಲು ಸೂಚಿಸಿದ್ದಾರೆ. ನಂತರ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ನಂತರ ಚಿತ್ರದುರ್ಗಕ್ಕೆ ಹೋಗುವಾಗ ದಾರಿ ಮಧ್ಯದಲ್ಲಿ ಬಾಲಕ ಮೃತಪಟ್ಟಿದ್ದಾನೆ.</p>.<p>ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರ ಕೊರತೆಯಿಂದಾಗಿ ಶಶಾಂಕ ಸಾವನ್ನಪ್ಪಲು ಕಾರಣವಾಗಿದೆ. ಅಧಿಕಾರಿಗಳು ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಮೃತ ಬಾಲಕನ ತಂದೆ ಬಸವರಾಜು ಒತ್ತಾಯಿಸಿದ್ದಾರೆ. </p>.<p>ಶಶಾಂಕ ಬಾಲಕನಾಗಿದ್ದರಿಂದ ತಜ್ಞ ವೈದ್ಯರು ಇಲ್ಲದೆ ಇದ್ದುದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದೊಯ್ಯಲು ಸಲಹೆ ನೀಡಲಾಗಿತ್ತು ಎಂದು ವೈದ್ಯ ಸಿ.ಹನುಮಂತರಾಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧರ್ಮಪುರ: ಹಾವು ಕಚ್ಚಿದ ಬಾಲಕನಿಗೆ ತಜ್ಞ ವೈದ್ಯರಿಲ್ಲದ ಕಾರಣ ಸೂಕ್ತ ಚಿಕಿತ್ಸೆ ದೊರೆಯಲಿಲ್ಲ ಎಂದು ಆರೋಪಿಸಿ ಸಮೀಪದ ಬೆನಕನಹಳ್ಳಿ ಗ್ರಾಮಸ್ಥರು ಬುಧವಾರ ಆಸ್ಪತ್ರೆ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದರು. </p>.<p>ಮೃತ ಬಾಲಕ ಶಶಾಂಕ (11) ತಂದೆಯ ಜೊತೆ ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಬುಧವಾರ ಬೆಳಗಿನ ಜಾವ 3 ಗಂಟೆಗೆ ಹಾವು ಕಚ್ಚಿದೆ. ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದು, ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹಿರಿಯೂರಿಗೆ ಹೋಗಲು ಸೂಚಿಸಿದ್ದಾರೆ. ನಂತರ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ನಂತರ ಚಿತ್ರದುರ್ಗಕ್ಕೆ ಹೋಗುವಾಗ ದಾರಿ ಮಧ್ಯದಲ್ಲಿ ಬಾಲಕ ಮೃತಪಟ್ಟಿದ್ದಾನೆ.</p>.<p>ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯರ ಕೊರತೆಯಿಂದಾಗಿ ಶಶಾಂಕ ಸಾವನ್ನಪ್ಪಲು ಕಾರಣವಾಗಿದೆ. ಅಧಿಕಾರಿಗಳು ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಮೃತ ಬಾಲಕನ ತಂದೆ ಬಸವರಾಜು ಒತ್ತಾಯಿಸಿದ್ದಾರೆ. </p>.<p>ಶಶಾಂಕ ಬಾಲಕನಾಗಿದ್ದರಿಂದ ತಜ್ಞ ವೈದ್ಯರು ಇಲ್ಲದೆ ಇದ್ದುದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದೊಯ್ಯಲು ಸಲಹೆ ನೀಡಲಾಗಿತ್ತು ಎಂದು ವೈದ್ಯ ಸಿ.ಹನುಮಂತರಾಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>