ಇದರಿಂದ ಗಾಬರಿಗೊಂಡ ಮನೆಯ ಇತರೆ ಸದಸ್ಯರು ಲೋಕೇಶನನ್ನು ಹಿಡಿದು ಮರಕ್ಕೆ ಕಟ್ಟಿಹಾಕಿ ಮಂಗಳವಾರ ಬೆಳಿಗ್ಗೆ ನಾಯಕನಹಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಿಪಿಐ ರಮಾಕಾಂತ್, ಪಿಎಸ್ ಐ ಮಹೇಶ ಲಕ್ಷ್ಮಣ ಹೊಸಪೇಟೆ, ಎಎಸ್ ಐ ನಾಗರಾಜ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.