‘ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವೆಂದರೆ ಅದನ್ನು ಇನ್ನೆಲ್ಲಿಂದ ತರುವುದು? ಭಗವಾನ್ ಅವರ ವಿಚಾರಗಳು ಒಪ್ಪಿಗೆ ಆಗದಿದ್ದರೆ ಅವರ ವಿಚಾರಗಳನ್ನು ಮಾತು ಮತ್ತು ಬರಹದ ಮೂಲಕ ಪ್ರತಿಭಟಿಸಬೇಕು. ಅದು ಬಿಟ್ಟು ಅಡ್ಡದಾರಿ ಹಿಡಿದಿರುವುದು ಅಮಾನವೀಯ ಮತ್ತು ಖಂಡನಾರ್ಹ. ಇಂತಹವರ ಮೇಲೆ ಸರ್ಕಾರ ಶಿಸ್ತಿನ ಕ್ರಮ ಜರುಗಿಸಬೇಕು’ ಎಂದು ಸ್ವಾಮೀಜಿ ಒತ್ತಾಯಿಸಿದ್ದಾರೆ.