ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಾಂಪುರ: ವ್ಯಕ್ತಿ ಕೊಲೆ

Last Updated 17 ಜನವರಿ 2021, 1:38 IST
ಅಕ್ಷರ ಗಾತ್ರ

ಶ್ರೀರಾಂಪುರ: ಹೋಬಳಿಯ ವೆಂಗಳಾಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ.

ವೆಂಗಳಾಪುರ ಗ್ರಾಮದ ಯೋಗರಾಜ್ (32) ಕೊಲೆಯಾದವರು.

ಆರೋಪಿಗಳಾದ ಚಿದಾನಂದಪ್ಪ, ವಿನಯ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಯೋಗರಾಜ್‌ಗೆ ಚಿದಾನಂದಪ್ಪ ಅವರ ಪತ್ನಿ ಜೊತೆ ಅನೈತಿಕ ಸಂಬಂಧ ಇತ್ತು ಎನ್ನಲಾಗಿದೆ. ಈ ವಿಷಯವಾಗಿ ಚಿದಾನಂದಪ್ಪ ಹಾಗೂ ಅವರ ಅಳಿಯ ವಿನಯ್‌ ಯೋಗರಾಜ್‌ ಜತೆ ಜಗಳ ಮಾಡಿ, ಹಲ್ಲೆ ನಡೆಸಿದ್ದಾರೆ. ಮರದ ಕಟ್ಟಿಗೆಯಿಂದ ತಲೆಗೆ ಹೊಡೆದ ಕಾರಣ ಯೋಗರಾಜ್‌ ಗಂಭೀರವಾಗಿಗಾಯಗೊಂಡಿದ್ದರು. ಗ್ರಾಮಸ್ಥರ ನೆರವಿನಿಂದ ಆಸ್ಪತ್ರೆಗೆ ಬಂದ ಯೋಗರಾಜ್ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ನಂದಗಾವಿ, ಡಿವೈಎಸ್‌ಪಿ ರೋಷನ್ ಜಮೀರ್, ಸಿಪಿಐ ಫೈಜುಲ್ಲಾ, ಪಿಎಸ್‌ಐ ನಾಗರಾಜ್ ಭೇಟಿ ನೀಡಿ, ಪರಿಶೀಲಿಸಿದರು. ಶ್ರೀರಾಂಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT