<p><strong>ಚಿತ್ರದುರ್ಗ: </strong>ರಾಮ ಮಂದಿರ ನಿರ್ಮಾಣದ ತಾಂತ್ರಿಕ ತಂಡದಲ್ಲಿ ಚಳ್ಳಕೆರೆಯ ಪ್ರೊ.ಟಿ.ಜಿ. ಸೀತಾರಾಮ್ ಅವರಿಗೆ ಸ್ಥಾನ ಸಿಕ್ಕಿರುವುದು ಜಿಲ್ಲೆಗೆ ಸಂದ ಗೌರವ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೆಮ್ಮೆ ವ್ಯಕ್ತಪಡಿಸಿದರು.</p>.<p>ಗಣರಾಜ್ಯೋತ್ಸವದ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಪ್ರಜಾಪ್ರಭುತ್ವ, ಸಂವಿಧಾನದ ಶಕ್ತಿ ಎಂಬಂತೆ ಸಾಮಾನ್ಯ ವ್ಯಕ್ತಿಯ ಮಕ್ಕಳು ಐಎಎಸ್ ಅಧಿಕಾರಿ ಆಗುತ್ತಾರೆ. ನಮ್ಮಂಥ ಸಾಮಾನ್ಯರು ಮಂತ್ರಿಯಾಗಿದ್ದೇವೆ. ಇದಕ್ಕೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಕಾರಣ. ಗಣರಾಜ್ಯೋತ್ಸವ ಅಂದರೆ ಜನರ ಉತ್ಸವ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಎಸ್ಪಿ ರಾಧಿಕಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ರಾಮ ಮಂದಿರ ನಿರ್ಮಾಣದ ತಾಂತ್ರಿಕ ತಂಡದಲ್ಲಿ ಚಳ್ಳಕೆರೆಯ ಪ್ರೊ.ಟಿ.ಜಿ. ಸೀತಾರಾಮ್ ಅವರಿಗೆ ಸ್ಥಾನ ಸಿಕ್ಕಿರುವುದು ಜಿಲ್ಲೆಗೆ ಸಂದ ಗೌರವ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೆಮ್ಮೆ ವ್ಯಕ್ತಪಡಿಸಿದರು.</p>.<p>ಗಣರಾಜ್ಯೋತ್ಸವದ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಪ್ರಜಾಪ್ರಭುತ್ವ, ಸಂವಿಧಾನದ ಶಕ್ತಿ ಎಂಬಂತೆ ಸಾಮಾನ್ಯ ವ್ಯಕ್ತಿಯ ಮಕ್ಕಳು ಐಎಎಸ್ ಅಧಿಕಾರಿ ಆಗುತ್ತಾರೆ. ನಮ್ಮಂಥ ಸಾಮಾನ್ಯರು ಮಂತ್ರಿಯಾಗಿದ್ದೇವೆ. ಇದಕ್ಕೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಕಾರಣ. ಗಣರಾಜ್ಯೋತ್ಸವ ಅಂದರೆ ಜನರ ಉತ್ಸವ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಎಸ್ಪಿ ರಾಧಿಕಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>