ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ ಮಂದಿರ ನಿರ್ಮಾಣ ತಂಡದಲ್ಲಿ ಚಳ್ಳಕೆರೆಯ ಸೀತಾರಾಂ : ಶ್ರೀರಾಮುಲು ಸಂತಸ

Last Updated 26 ಜನವರಿ 2021, 4:39 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಮ ಮಂದಿರ ನಿರ್ಮಾಣದ ತಾಂತ್ರಿಕ ತಂಡದಲ್ಲಿ ಚಳ್ಳಕೆರೆಯ ಪ್ರೊ.ಟಿ.ಜಿ. ಸೀತಾರಾಮ್ ಅವರಿಗೆ ಸ್ಥಾನ ಸಿಕ್ಕಿರುವುದು ಜಿಲ್ಲೆಗೆ ಸಂದ ಗೌರವ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೆಮ್ಮೆ ವ್ಯಕ್ತಪಡಿಸಿದರು.

ಗಣರಾಜ್ಯೋತ್ಸವದ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ, ಸಂವಿಧಾನದ ಶಕ್ತಿ ಎಂಬಂತೆ ಸಾಮಾನ್ಯ ವ್ಯಕ್ತಿಯ ಮಕ್ಕಳು ಐಎಎಸ್‌ ಅಧಿಕಾರಿ ಆಗುತ್ತಾರೆ. ನಮ್ಮಂಥ ಸಾಮಾನ್ಯರು ಮಂತ್ರಿಯಾಗಿದ್ದೇವೆ. ಇದಕ್ಕೆ ಸಂವಿಧಾನ ನೀಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಕಾರಣ. ಗಣರಾಜ್ಯೋತ್ಸವ ಅಂದರೆ ಜನರ ಉತ್ಸವ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಎಸ್ಪಿ ರಾಧಿಕಾ ಮತ್ತಿತರರು ಇದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT