ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಹಮ್ಮಿಕೊಂಡಿದ್ದರು. ಜಿಲ್ಲಾಧಿಕಾರಿ ಸೇರಿದಂತೆ ಬಹುತೇಕ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜಿಲ್ಲಾ ಪಂಚಾಯಿತಿಯಲ್ಲಿ ಇದ್ದಿದ್ದರಿಂದ ಪ್ರತಿಭಟನಾಕಾರರು ಇಲ್ಲಿಗೆ ಧಾವಿಸಿದರು.