<p>ಶ್ರೀರಾಂಪುರ: ಕುರಿ ಹಿಂಡೊಂದು ರಸ್ತೆ ದಾಟುವ ವೇಳೆ ಲಾರಿ ಹರಿದು 10 ಕುರಿಗಳು ಸಾವಿಗೀಡಾಗಿರುವ ಘಟನೆ ಸಮೀಪದ ಮಾಳಪ್ಪನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.</p>.<p>ಕುರಿಗಳು ಹಿರಿಯೂರು ತಾಲ್ಲೂಕು ಬಡಗೊಲ್ಲರಹಟ್ಟಿ ಗ್ರಾಮದ ಬಾಲರಾಜ್ ಅವರಿಗೆ ಸೇರಿದವು ಎಂದು ತಿಳಿದು ಬಂದಿದೆ.</p>.<p>ಮಾಳಪ್ಪನಹಳ್ಳಿ ಗೇಟ್ ಹಾಗೂ ಅರಲಹಳ್ಳಿ ಮಧ್ಯೆ ರಸ್ತೆ ಬದಿಯ ಹೊಲಗಳಲ್ಲಿ ಮೇಯುತ್ತಿದ್ದ ಕುರಿಗಳು ರಸ್ತೆ ದಾಟುವ ವೇಳೆ ಅರಲಹಳ್ಳಿ ಕಡೆಯಿಂದ ಬಂದ ಲಾರಿಯೊಂದು ಕುರಿಗಳ ಮೇಲೆ ಹರಿದಿದೆ. ಪರಿಣಾಮ 10 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಾಂಪುರ: ಕುರಿ ಹಿಂಡೊಂದು ರಸ್ತೆ ದಾಟುವ ವೇಳೆ ಲಾರಿ ಹರಿದು 10 ಕುರಿಗಳು ಸಾವಿಗೀಡಾಗಿರುವ ಘಟನೆ ಸಮೀಪದ ಮಾಳಪ್ಪನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.</p>.<p>ಕುರಿಗಳು ಹಿರಿಯೂರು ತಾಲ್ಲೂಕು ಬಡಗೊಲ್ಲರಹಟ್ಟಿ ಗ್ರಾಮದ ಬಾಲರಾಜ್ ಅವರಿಗೆ ಸೇರಿದವು ಎಂದು ತಿಳಿದು ಬಂದಿದೆ.</p>.<p>ಮಾಳಪ್ಪನಹಳ್ಳಿ ಗೇಟ್ ಹಾಗೂ ಅರಲಹಳ್ಳಿ ಮಧ್ಯೆ ರಸ್ತೆ ಬದಿಯ ಹೊಲಗಳಲ್ಲಿ ಮೇಯುತ್ತಿದ್ದ ಕುರಿಗಳು ರಸ್ತೆ ದಾಟುವ ವೇಳೆ ಅರಲಹಳ್ಳಿ ಕಡೆಯಿಂದ ಬಂದ ಲಾರಿಯೊಂದು ಕುರಿಗಳ ಮೇಲೆ ಹರಿದಿದೆ. ಪರಿಣಾಮ 10 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>