ಕಳೆದ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಈ ವರ್ಷವೂ ಅದೇ ಗುರಿ ಸಾಧನೆಯ ಉದ್ದೇಶದೊಂದಿಗೆ ಕಾರ್ಯ
ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಕಡಿಮೆ ಮಾಡಲಾಗಿದೆ. ಒಂದಷ್ಟು ಮಾರ್ಪಾಡು ಮಾಡಲಾಗಿದ್ದು ಇದೇ ಮೊದಲ ಬಾರಿಗೆ ಸಿ.ಸಿ. ಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ
–ಕೆ.ರವಿಶಂಕರ ರೆಡ್ಡಿ ಉಪನಿರ್ದೇಶಕ ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ
5 ಸೂಕ್ಷ್ಮ ಪರೀಕ್ಷಾ ಕೇಂದ್ರ
ಜಿಲ್ಲೆಯಲ್ಲಿ ಗುರುತಿಸಲಾಗಿರುವ 5 ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಚಳ್ಳಕೆರೆಯ ಆದರ್ಶ ವಿದ್ಯಾಲಯ ಭೀಮಸಮುದ್ರದ ಭೀಮೇಶ್ವರ ಪದವಿಪೂರ್ವ ಕಾಲೇಜು ಯಳಗೋಡು ಸರ್ಕಾರಿ ಪದವಿಪೂರ್ವ ಕಾಲೇಜು ಯರಬಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಹಾನಗಲ್ ನುಂಕೆಮಲೆ ಸಿದ್ದೇಶ್ವರ ಪ್ರೌಢಶಾಲೆಗಳು ಸೂಕ್ಷ್ಮ ಪರೀಕ್ಷಾ ಕೇಂದ್ರಗಳಾಗಿವೆ. ಈ ಐದು ಕೇಂದ್ರಗಳಲ್ಲಿ 1277 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಉಚಿತ ಪ್ರಯಾಣಕ್ಕೆ ಅವಕಾಶ
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್.ಹೆಬ್ಬಾಳ್ ತಿಳಿಸಿದ್ದಾರೆ. ‘ಬೆಳಿಗ್ಗೆ 10 ರಿಂದ 10.15 ರೊಳಗೆ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳಿರಬೇಕು. 10.15ಕ್ಕೆ ಪ್ರಶ್ನೆ ಪತ್ರಿಕೆ ವಿತರಣೆ ಮಾಡಲಾಗುತ್ತದೆ. ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಸಮಯ ನೀಡಲಾಗುತ್ತದೆ. ಈ ನಡುವೆ ಉತ್ತರ ಪತ್ರಿಕೆ ನೀಡಿದರೂ ಸಹ 10.30ಕ್ಕೆ ಉತ್ತರ ಬರೆಯಲು ವಿದ್ಯಾರ್ಥಿಗಳು ಪ್ರಾರಂಭಿಸಬೇಕು. ಮಧ್ಯಾಹ್ನ 1.30ಕ್ಕೆ ಪರೀಕ್ಷೆ ಅವಧಿ ಪೂರ್ಣಗೊಳ್ಳಲಿದೆ’ ಎಂದು ನೋಡಲ್ ಅಧಿಕಾರಿ ಎನ್.ಆರ್. ತಿಪ್ಪೇಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.