‘ಸಾಲದ ಹೊರೆ ತಾಳಲಾರದೇ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದರೂ ವಿದ್ಯಾರ್ಥಿನಿ ಶಿಕ್ಷಣ ಮುಂದುವರಿಸುವುದು ಕಷ್ಟವಾಗಬಹುದು. ಈ ವಿದ್ಯಾರ್ಥಿನಿಗೆ ಎಸ್ಆರ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಉಚಿತ ಪ್ರವೇಶ ಕಲ್ಪಿಸಲಾಗುವುದು. ಮುಂದಿನ ಎರಡು ವರ್ಷದ ಶಿಕ್ಷಣದ ಜವಾಬ್ದಾರಿಯನ್ನು ಹೊರಲಾಗುವುದು’ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.