<p><strong>ಶ್ರೀರಾಂಪುರ:</strong> ಸಮೀಪದ ಕಂಚೀನಗರ ಗುಡ್ಡಗಾಡು ಪ್ರದೇಶದಲ್ಲಿ ನಕ್ಷತ್ರ ಆಮೆಗಳನ್ನು ಬೇಟೆಯಾಡಿದ ಸಂಬಂಧ ದಾಳಿ ನಡೆಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.</p>.<p>ಕಂಚೀನಗರ ಗ್ರಾಮದ ಹೊರವಲಯದಲ್ಲಿ ವಾಹನವನ್ನು ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ಓಡಾಡುತ್ತಿದ್ದ ಅಪರಿಚಿತರನ್ನು ಗಮನಿಸಿದ ಸ್ಥಳೀಯರು ಶ್ರೀರಾಂಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು.</p>.<p>ದಾಳಿ ನಡೆಸಿದ ಪೊಲೀಸರು ಬೇಟೆಗಾರರಿಂದ 35 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡು, ಚಿಕ್ಕಬಳ್ಳಾಪುರ ಮೂಲದ ಮೂವರು ಹಾಗೂ ಕೋಲಾರ ಮೂಲದ ಒಬ್ಬ ಆರೋಪಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. </p>.<p>ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಈ ನಕ್ಷತ್ರ ಆಮೆಗಳಿದ್ದು, ಅಳಿವಿನ ಅಂಚಿನಲ್ಲಿವೆ. ಇವು ವಿಷ್ಣುವಿನ ವಾಹನಗಳು ಎಂಬ ನಂಬಿಕೆ ಜನರಲ್ಲಿದ್ದು, ಮನೆಯಲ್ಲಿಟ್ಟು ಪೂಜಿಸಿದರೆ ಒಳ್ಳೆಯದಾಗುವುದೆಂಬ ನಂಬಿಕೆ ಇದೆ. ಇದರಿಂದ ಹಿಡಿದು ಮಾರಾಟ ಮಾಡಲಾಗುತ್ತದೆ’ ಎಂದು ವಲಯ ಅರಣ್ಯಧಿಕಾರಿ ಸುನೀಲ್ಕುಮಾರ್ ಹೇಳಿದರು.</p>.<p>ಈ ಪ್ರಭೇದದ ಪ್ರಾಣಿಗಳು ಅಳಿವಿನ ಅಂಚಿನಲ್ಲಿರುವುದರಿಂದ ಇವುಗಳನ್ನು ಸಂರಕ್ಷಿಸುವುದು ಎಲ್ಲರ ಹೊಣೆ ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಾಂಪುರ:</strong> ಸಮೀಪದ ಕಂಚೀನಗರ ಗುಡ್ಡಗಾಡು ಪ್ರದೇಶದಲ್ಲಿ ನಕ್ಷತ್ರ ಆಮೆಗಳನ್ನು ಬೇಟೆಯಾಡಿದ ಸಂಬಂಧ ದಾಳಿ ನಡೆಸಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.</p>.<p>ಕಂಚೀನಗರ ಗ್ರಾಮದ ಹೊರವಲಯದಲ್ಲಿ ವಾಹನವನ್ನು ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ಓಡಾಡುತ್ತಿದ್ದ ಅಪರಿಚಿತರನ್ನು ಗಮನಿಸಿದ ಸ್ಥಳೀಯರು ಶ್ರೀರಾಂಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು.</p>.<p>ದಾಳಿ ನಡೆಸಿದ ಪೊಲೀಸರು ಬೇಟೆಗಾರರಿಂದ 35 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡು, ಚಿಕ್ಕಬಳ್ಳಾಪುರ ಮೂಲದ ಮೂವರು ಹಾಗೂ ಕೋಲಾರ ಮೂಲದ ಒಬ್ಬ ಆರೋಪಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. </p>.<p>ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಈ ನಕ್ಷತ್ರ ಆಮೆಗಳಿದ್ದು, ಅಳಿವಿನ ಅಂಚಿನಲ್ಲಿವೆ. ಇವು ವಿಷ್ಣುವಿನ ವಾಹನಗಳು ಎಂಬ ನಂಬಿಕೆ ಜನರಲ್ಲಿದ್ದು, ಮನೆಯಲ್ಲಿಟ್ಟು ಪೂಜಿಸಿದರೆ ಒಳ್ಳೆಯದಾಗುವುದೆಂಬ ನಂಬಿಕೆ ಇದೆ. ಇದರಿಂದ ಹಿಡಿದು ಮಾರಾಟ ಮಾಡಲಾಗುತ್ತದೆ’ ಎಂದು ವಲಯ ಅರಣ್ಯಧಿಕಾರಿ ಸುನೀಲ್ಕುಮಾರ್ ಹೇಳಿದರು.</p>.<p>ಈ ಪ್ರಭೇದದ ಪ್ರಾಣಿಗಳು ಅಳಿವಿನ ಅಂಚಿನಲ್ಲಿರುವುದರಿಂದ ಇವುಗಳನ್ನು ಸಂರಕ್ಷಿಸುವುದು ಎಲ್ಲರ ಹೊಣೆ ಎಂದು ಅವರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>