<p><strong>ಸಿರಿಗೆರೆ</strong>: ‘ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತರಳಬಾಳು ಮಠದ ಆಶ್ರಯದಲ್ಲಿ ನವೆಂಬರ್ನಲ್ಲಿ ರಾಜ್ಯಮಟ್ಟದ ನುಡಿಹಬ್ಬ ಆಚರಿಸಲು ನಿರ್ಧರಿಸಲಾಗಿದೆ. ಈ ನುಡಿಹಬ್ಬಕ್ಕೆ ತರಳಬಾಳು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಕನ್ನಡ ಸಾಹಿತ್ಯ ಪರಿಷತ್ನ ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ.ಎಂ. ಶಿವಸ್ವಾಮಿ, ಬಿ.ವಾಮದೇವಪ್ಪ ಮತ್ತು ಸೂರಿ ಶ್ರೀನಿವಾಸ್ ತಿಳಿಸಿದರು.</p>.<p>ರಾಜ್ಯಮಟ್ಟದ ನುಡಿಹಬ್ಬ ಆಚರಣೆ ಸಂಬಂಧ ಸೋಮವಾರ ಸದ್ಧರ್ಮ ನ್ಯಾಯಪೀಠದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಹಲವು ವರ್ಷಗಳಿಂದ ಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ತರಳಬಾಳು ನುಡಿಹಬ್ಬವನ್ನು ಆಚರಿಸಲಾಗುತ್ತಿದೆ. ಈ ಬಾರಿ ಮಧ್ಯ ಕರ್ನಾಟಕದಲ್ಲಿ ನುಡಿಹಬ್ಬ ಆಚರಿಸಲು ಶ್ರೀಗಳಲ್ಲಿ ಮನವಿ ಮಾಡಿದ್ದೆವು. ಅದಕ್ಕೆ ಅವರು ನುಡಿಹಬ್ಬ ರಾಜ್ಯಮಟ್ಟದ್ದಾಗಿರಲಿ ಎಂದು ಹೇಳಿದ್ದರಿಂದ ಸಿರಿಗೆರೆಯಲ್ಲಿ ನುಡಿಹಬ್ಬ ಆಯೋಜಿಸಲಾಗುವುದು. ಈ ಕಾರ್ಯಕ್ರಮ ಹಿಂದಿನ ಎಲ್ಲ ಕಾರ್ಯಕ್ರಮಗಳಿಗಿಂತ ಭಿನ್ನವಾಗಿರಲಿದೆ’ ಎಂದರು.</p>.<p>‘ಮಧ್ಯಕರ್ನಾಟಕದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸಾಹಿತಿಗಳು, ಕವಿಗಳನ್ನು ಈ ನುಡಿಹಬ್ಬದಲ್ಲಿ ವಿಶೇಷವಾಗಿ ಆಹ್ವಾನಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಸಿರಿಗೆರೆ ಮಠದ ವತಿಯಿಂದ ತರಳಬಾಳು ನುಡಿಹಬ್ಬವನ್ನು ಪ್ರತಿವರ್ಷ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಈ ಬಾರಿ ಮೂರು ಜಿಲ್ಲೆಗಳ ವತಿಯಿಂದ ಜುಲೈ 27ರಂದು ಅಂತರ ಜಿಲ್ಲಾ ಕವಿಗೋಷ್ಠಿ ಏರ್ಪಡಿಸಲಾಗುವುದು’ ಎಂದರು.</p>.<p>‘ನುಡಿಹಬ್ಬದಲ್ಲಿ ಅರ್ಥಪೂರ್ಣ ಚರ್ಚೆಗಳು ನಡೆಯಬೇಕು. ನಾಡಿನ ಹಿರಿಯ ಕವಿಗಳನ್ನು ಆಹ್ವಾನಿಸಿ ಕವಿಗೋಷ್ಠಿ ಆಯೋಜಿಸಬೇಕೆಂದು ಶ್ರೀಗಳು ಸೂಚನೆ ನೀಡಿದ್ದಾರೆ’ ಎಂದರು. ಪರಿಷತ್ನ ಚಿತ್ರದುರ್ಗ ಜಿಲ್ಲಾ ಘಟಕದ ಕಾರ್ಯದರ್ಶಿ ಮಳಲಿ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ‘ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತರಳಬಾಳು ಮಠದ ಆಶ್ರಯದಲ್ಲಿ ನವೆಂಬರ್ನಲ್ಲಿ ರಾಜ್ಯಮಟ್ಟದ ನುಡಿಹಬ್ಬ ಆಚರಿಸಲು ನಿರ್ಧರಿಸಲಾಗಿದೆ. ಈ ನುಡಿಹಬ್ಬಕ್ಕೆ ತರಳಬಾಳು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಕನ್ನಡ ಸಾಹಿತ್ಯ ಪರಿಷತ್ನ ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ.ಎಂ. ಶಿವಸ್ವಾಮಿ, ಬಿ.ವಾಮದೇವಪ್ಪ ಮತ್ತು ಸೂರಿ ಶ್ರೀನಿವಾಸ್ ತಿಳಿಸಿದರು.</p>.<p>ರಾಜ್ಯಮಟ್ಟದ ನುಡಿಹಬ್ಬ ಆಚರಣೆ ಸಂಬಂಧ ಸೋಮವಾರ ಸದ್ಧರ್ಮ ನ್ಯಾಯಪೀಠದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಹಲವು ವರ್ಷಗಳಿಂದ ಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ತರಳಬಾಳು ನುಡಿಹಬ್ಬವನ್ನು ಆಚರಿಸಲಾಗುತ್ತಿದೆ. ಈ ಬಾರಿ ಮಧ್ಯ ಕರ್ನಾಟಕದಲ್ಲಿ ನುಡಿಹಬ್ಬ ಆಚರಿಸಲು ಶ್ರೀಗಳಲ್ಲಿ ಮನವಿ ಮಾಡಿದ್ದೆವು. ಅದಕ್ಕೆ ಅವರು ನುಡಿಹಬ್ಬ ರಾಜ್ಯಮಟ್ಟದ್ದಾಗಿರಲಿ ಎಂದು ಹೇಳಿದ್ದರಿಂದ ಸಿರಿಗೆರೆಯಲ್ಲಿ ನುಡಿಹಬ್ಬ ಆಯೋಜಿಸಲಾಗುವುದು. ಈ ಕಾರ್ಯಕ್ರಮ ಹಿಂದಿನ ಎಲ್ಲ ಕಾರ್ಯಕ್ರಮಗಳಿಗಿಂತ ಭಿನ್ನವಾಗಿರಲಿದೆ’ ಎಂದರು.</p>.<p>‘ಮಧ್ಯಕರ್ನಾಟಕದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸಾಹಿತಿಗಳು, ಕವಿಗಳನ್ನು ಈ ನುಡಿಹಬ್ಬದಲ್ಲಿ ವಿಶೇಷವಾಗಿ ಆಹ್ವಾನಿಸಲಾಗುವುದು’ ಎಂದು ಅವರು ಹೇಳಿದರು.</p>.<p>‘ಸಿರಿಗೆರೆ ಮಠದ ವತಿಯಿಂದ ತರಳಬಾಳು ನುಡಿಹಬ್ಬವನ್ನು ಪ್ರತಿವರ್ಷ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಈ ಬಾರಿ ಮೂರು ಜಿಲ್ಲೆಗಳ ವತಿಯಿಂದ ಜುಲೈ 27ರಂದು ಅಂತರ ಜಿಲ್ಲಾ ಕವಿಗೋಷ್ಠಿ ಏರ್ಪಡಿಸಲಾಗುವುದು’ ಎಂದರು.</p>.<p>‘ನುಡಿಹಬ್ಬದಲ್ಲಿ ಅರ್ಥಪೂರ್ಣ ಚರ್ಚೆಗಳು ನಡೆಯಬೇಕು. ನಾಡಿನ ಹಿರಿಯ ಕವಿಗಳನ್ನು ಆಹ್ವಾನಿಸಿ ಕವಿಗೋಷ್ಠಿ ಆಯೋಜಿಸಬೇಕೆಂದು ಶ್ರೀಗಳು ಸೂಚನೆ ನೀಡಿದ್ದಾರೆ’ ಎಂದರು. ಪರಿಷತ್ನ ಚಿತ್ರದುರ್ಗ ಜಿಲ್ಲಾ ಘಟಕದ ಕಾರ್ಯದರ್ಶಿ ಮಳಲಿ ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>