<p><strong>ಹೊಸದುರ್ಗ (ಚಿತ್ರದುರ್ಗ ಜಿಲ್ಲೆ):</strong> ‘ಒಲಿದಂತೆ ಹಾಡುವೆ’ ವಚನ ಕಂಠಪಾಠ ಸ್ಪರ್ಧೆಯನ್ನು ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಜೂನ್ 15ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಾಣೇಹಳ್ಳಿಯ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಲಿಂಗ, ಜಾತಿ, ವಯಸ್ಸಿನ ಭೇದವಿಲ್ಲದೆ ಯಾರೂ ಬೇಕಾದರೂ ಸ್ಪರ್ಧೆಯಲ್ಲಿ ಭಾಗವಹಿಸಬಹುದು. 500 ವಚನಗಳನ್ನು ತಪ್ಪಿಲ್ಲದೆ ಸ್ಪಷ್ಟವಾಗಿ, ವ್ಯಾಕರಣ ದೋಷವಿಲ್ಲದೇ ಭಾವಪೂರ್ಣವಾಗಿ ಹೇಳಬೇಕು. ಬಸವಣ್ಣ, ಚನ್ನಬಸವಣ್ಣ, ಅಲ್ಲಮಪ್ರಭು,ಸೇರಿದಂತೆ ಪ್ರಮುಖ ವಚನಕಾರರ ಕನಿಷ್ಠ 20 ವಚನಗಳನ್ನಾದರೂ ಹೇಳಬೇಕು.</p>.<p>ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ‘ಸಮಗ್ರ ವಚನ ಸಂಪುಟ’ದ ವಚನಗಳನ್ನು ಮಾತ್ರ ಹೇಳಬೇಕು. ಸ್ಪರ್ಧಿಗಳು ವಚನ ಕಂಠಪಾಠಕ್ಕೆ ಆನ್ಲೈನ್ನಲ್ಲಿ ಸಿಗುವ ‘ವಚನ ಸಂಪುಟ’ ಮತ್ತು ‘ವಚನ ಸಂಚಯ’ ಜಾಲತಾಣ ಬಳಕೆ ಮಾಡಿಕೊಳ್ಳಬಹುದು.</p>.<p>ಪ್ರಥಮ ಬಹುಮಾನ ₹ 30,000, ದ್ವಿತೀಯ ₹ 25,000, ತೃತೀಯ ₹ 20,000, ನಾಲ್ಕನೇ ₹ 15,000 ಹಾಗೂ ಐದನೇ ಬಹುಮಾನ ₹ 10,000 ಹಾಗೂ ಪ್ರಶಸ್ತಿ ಪತ್ರ, ಪುಸ್ತಕ ನೀಡಿ ಗೌರವಿಸಲಾಗುವುದು. 200 ವಚನಗಳನ್ನು ಹೇಳಿದವರಿಗೆ ಪ್ರಶಸ್ತಿಪತ್ರ, ಪುಸ್ತಕ ನೀಡಲಾಗುವುದು.</p>.<p>ಮಠಾಧೀಶರಿಗೂ ಅವಕಾಶ: ಸ್ಪರ್ಧೆಗೆ ಮಠಾಧೀಶರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ವಚನ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದ ಮಠಾಧೀಶರಿಗೆ ಪ್ರಥಮ ಬಹುಮಾನ ₹ 40,000 ನೀಡಲಾಗುವುದು ಎಂದು ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಜೂನ್ 10ರ ಒಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಟಿ.ಎಂ ಮರುಳಸಿದ್ದಯ್ಯ, ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ, ಮೊಬೈಲ್: 9663177254 ಸಂಪರ್ಕಿಸಬಹುದು ಎಂದು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ (ಚಿತ್ರದುರ್ಗ ಜಿಲ್ಲೆ):</strong> ‘ಒಲಿದಂತೆ ಹಾಡುವೆ’ ವಚನ ಕಂಠಪಾಠ ಸ್ಪರ್ಧೆಯನ್ನು ತಾಲ್ಲೂಕಿನ ಸಾಣೇಹಳ್ಳಿಯಲ್ಲಿ ಜೂನ್ 15ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಾಣೇಹಳ್ಳಿಯ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಲಿಂಗ, ಜಾತಿ, ವಯಸ್ಸಿನ ಭೇದವಿಲ್ಲದೆ ಯಾರೂ ಬೇಕಾದರೂ ಸ್ಪರ್ಧೆಯಲ್ಲಿ ಭಾಗವಹಿಸಬಹುದು. 500 ವಚನಗಳನ್ನು ತಪ್ಪಿಲ್ಲದೆ ಸ್ಪಷ್ಟವಾಗಿ, ವ್ಯಾಕರಣ ದೋಷವಿಲ್ಲದೇ ಭಾವಪೂರ್ಣವಾಗಿ ಹೇಳಬೇಕು. ಬಸವಣ್ಣ, ಚನ್ನಬಸವಣ್ಣ, ಅಲ್ಲಮಪ್ರಭು,ಸೇರಿದಂತೆ ಪ್ರಮುಖ ವಚನಕಾರರ ಕನಿಷ್ಠ 20 ವಚನಗಳನ್ನಾದರೂ ಹೇಳಬೇಕು.</p>.<p>ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ‘ಸಮಗ್ರ ವಚನ ಸಂಪುಟ’ದ ವಚನಗಳನ್ನು ಮಾತ್ರ ಹೇಳಬೇಕು. ಸ್ಪರ್ಧಿಗಳು ವಚನ ಕಂಠಪಾಠಕ್ಕೆ ಆನ್ಲೈನ್ನಲ್ಲಿ ಸಿಗುವ ‘ವಚನ ಸಂಪುಟ’ ಮತ್ತು ‘ವಚನ ಸಂಚಯ’ ಜಾಲತಾಣ ಬಳಕೆ ಮಾಡಿಕೊಳ್ಳಬಹುದು.</p>.<p>ಪ್ರಥಮ ಬಹುಮಾನ ₹ 30,000, ದ್ವಿತೀಯ ₹ 25,000, ತೃತೀಯ ₹ 20,000, ನಾಲ್ಕನೇ ₹ 15,000 ಹಾಗೂ ಐದನೇ ಬಹುಮಾನ ₹ 10,000 ಹಾಗೂ ಪ್ರಶಸ್ತಿ ಪತ್ರ, ಪುಸ್ತಕ ನೀಡಿ ಗೌರವಿಸಲಾಗುವುದು. 200 ವಚನಗಳನ್ನು ಹೇಳಿದವರಿಗೆ ಪ್ರಶಸ್ತಿಪತ್ರ, ಪುಸ್ತಕ ನೀಡಲಾಗುವುದು.</p>.<p>ಮಠಾಧೀಶರಿಗೂ ಅವಕಾಶ: ಸ್ಪರ್ಧೆಗೆ ಮಠಾಧೀಶರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ವಚನ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದ ಮಠಾಧೀಶರಿಗೆ ಪ್ರಥಮ ಬಹುಮಾನ ₹ 40,000 ನೀಡಲಾಗುವುದು ಎಂದು ಚಿತ್ರದುರ್ಗ ಮಾದಾರ ಚನ್ನಯ್ಯ ಗುರುಪೀಠದ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದ್ದಾರೆ.</p>.<p>ಜೂನ್ 10ರ ಒಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಟಿ.ಎಂ ಮರುಳಸಿದ್ದಯ್ಯ, ತರಳಬಾಳು ಜಗದ್ಗುರು ಶಾಖಾಮಠ, ಸಾಣೇಹಳ್ಳಿ, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ, ಮೊಬೈಲ್: 9663177254 ಸಂಪರ್ಕಿಸಬಹುದು ಎಂದು ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>