<p><strong>ಹೊಸದುರ್ಗ:</strong> ತಾಲ್ಲೂಕಿನ ಕಬ್ಬಳ ಗ್ರಾಮದ ಸರ್ವೆ ನಂಬರ್ 19ರಲ್ಲಿ ಯಾವುದೇ ಕಾರಣಕ್ಕೂ ಕಲ್ಲು ಗಣಿಗಾರಿಕೆ ಮಾಡಲು ಅವಕಾಶ ನೀಡಬಾರದು ಎಂದು ಗುರುವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಆಲಿಕೆ ಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು.</p>.<p>ಖಾಸಗಿ ಕ್ರಷರ್ ಮಾಲೀಕರ ಕ್ರಷರ್ನಲ್ಲಿ ವಾರ್ಷಿಕ 2,50,000 ಟನ್ ಉತ್ಪಾದನಾ ಸಾಮರ್ಥ್ಯದ ಕಟ್ಟಡ ಕಲ್ಲು (ಎಂ ಸ್ಯಾಂಡ್) ಹಾಗೂ 5,102 ಟನ್ ಅಂತರಸ್ಥಿತ ತ್ಯಾಜ್ಯ, 38,090 ಟನ್ ಮುರಂ ಗಣಿಗಾರಿಕೆ ಮಾಡುವ ಯೋಜನೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.</p>.<p>ರೈತರ ಜಮೀನುಗಳಿಗೆ ಹೊಂದಿಕೊಂಡಿರುವ ಜಾಗದಲ್ಲಿ ಕಲ್ಲುಗಣಿಗಾರಿಕೆ ಆರಂಭಿಸಲು ಅನುಮತಿ ನೀಡಿದರೆ ರೈತರು ಸರಣಿಯಾಗಿ ತಾಲ್ಲೂಕು ಕಛೇರಿಯ ಮುಂದೆ ನೇಣುಬಿಗಿದುಕೊಂಡು ಸಾಯುತ್ತೇವೆ. ಈ ಜಾಗದಲ್ಲಿ ಯಾವುದೇ ಕಾರಣಕ್ಕೂ ಕಲ್ಲುಗಣಿಗಾರಿಗೆ ಆರಂಭಿಸಲು ಬಿಡುವುದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಉದ್ದೇಶಿತ ಗಣಿಗಾರಿಕೆ ಸ್ಥಳದಿಂದ ಕೇವಲ 500 ಮೀ. ದೂರದಲ್ಲಿ ಇತಿಹಾಸ ಪ್ರಸಿದ್ಧ ರಂಗನಾಥಸ್ವಾಮಿ ದೇಗುಲವಿದೆ. ಈ ಪ್ರದೇಶದಲ್ಲಿ ನೂರಾರು ಕೃಷ್ಣಮೃಗಗಳು ನವಿಲುಗಳು ಸೇರಿದಂತೆ ಇತರೆ ಪ್ರಾಣಿಗಳು ವಾಸವಾಗಿವೆ. ಈ ಸ್ಥಳಕ್ಕೆ ಹೊಂದಿಕೊಂಡಂತೆ ನೂರಾರು ರೈತರ ಜಮೀನು, ತೋಟಗಳಿದ್ದು, ಗಣಿಗಾರಿಕೆಯಿಂದ ಬರುವ ಧೂಳಿನಿಂದ ಬೆಳೆಗಳು ಹಾಳಾಗುತ್ತವೆ ಎಂದರು.</p>.<p>30-40 ವರ್ಷಗಳಿಂದ ಜಮೀನಿನಲ್ಲಿನ ಕಲ್ಲುಗಳನ್ನು ತೆಗೆದು, ಹದ ಮಾಡಿ, ಲಕ್ಷಾಂತರ ರೂಪಾಯಿ ಸಾಲ ಮಾಡಿ ಕೊಳವೆ ಬಾವಿ ಕೊರೆಸಿ, ಟಿಸಿ ಇಟ್ಟು ತೆಂಗಿನ ಸಸಿಗಳನ್ನು ನೆಟ್ಟಿದ್ದೇವೆ. ಇದರಿಂದ ನಮ್ಮ ಬದುಕು ಭವಿಷ್ಯದಲ್ಲಿ ಚೆನ್ನಾಗಿರುತ್ತದೆ ಎಂದು ಭಾವಿಸಿದ್ದೇವೆ. ಈಗ ಈ ಜಾಗದಲ್ಲಿ ಕಲ್ಲುಗಣಿಗಾರಿಕೆ ಆರಂಭಿಸಲು ಅವಕಾಶ ನೀಡಿದರೆ ನಮ್ಮೆಲ್ಲರ ಬದುಕು ಬೀದಿಗೆ ಬರುತ್ತದೆ ಎಂದರು. ಜಿಲ್ಲಾಧಿಕಾರಿಗಳು ಇಲ್ಲಿಯೇ ತಮ್ಮ ತೀರ್ಮಾನವನ್ನು ತಿಳಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಕೆ.ವೆಂಕಟೇಶ್ ಮಾತನಾಡಿ ‘ಇಲ್ಲಿ ಯಾವುದೇ ತೀರ್ಮಾನವನ್ನು ಮಾಡುವುದಿಲ್ಲ. ಸಾರ್ವಜನಿಕರು, ರೈತರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲರ ಅಹವಾಲುಗಳನ್ನು ವರದಿ ಮಾಡಿಕೊಳ್ಳಲಾಗಿದೆ. ಅದನ್ನು ಯಥಾವತ್ತಾಗಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಶೀಘ್ರದಲ್ಲಿಯೇ ಸರ್ಕಾರ ಈ ಕುರಿತು ಪ್ರಕಟಣೆ ಹೊರಡಿಸಲಿದೆ’ ಎಂದು ಹೇಳಿದರು.</p>.<p>‘ನಾವು 40 ವರ್ಷಗಳಿಂದ ತೋಟ ಮಾಡುತ್ತಿದ್ದೇವೆ. ಇಲ್ಲಿ ಭೂಮಿಯನ್ನು ನಂಬಿಕೊಂಡು ಸುತ್ತಮುತ್ತ 5 ಸಾವಿರ ಜನ ಇದ್ದಾರೆ ಕಂಪನಿಯವರು ಇವರನ್ನು ಸಾಕುತ್ತಾರೆಯೇ’ ಎಂದು ಕಬ್ಬಳ ಗ್ರಾಮದ ರೇಣುಕಮ್ಮ ಪ್ರಶ್ನಿಸಿದರು.</p>.<p>ಹಿರಿಯ ಪರಿಸರ ಅಧಿಕಾರಿ ದಾವಣಗೆರೆ ವಲಯ ರಮೇಶ್ ಡಿ ನಾಯಕ್, ತಹಶೀಲ್ದಾರ್ ತಿರುಪತಿ ಪಾಟೀಲ್, ಕಬ್ಬಳ, ಬೊಮ್ಮೇನಹಳ್ಳಿ, ಮಲ್ಲೇನಹಳ್ಳಿ, ಹೊಸಹಟ್ಟಿ, ತುಂಬಿನಕೆರೆ, ತುಂಬಿನಕೆರೆ ಭೋವಿಹಟ್ಟಿ, ತೊಣಚೇನಹಳ್ಳಿ ಗ್ರಾಮಗಳ ನೂರಾರು ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ತಾಲ್ಲೂಕಿನ ಕಬ್ಬಳ ಗ್ರಾಮದ ಸರ್ವೆ ನಂಬರ್ 19ರಲ್ಲಿ ಯಾವುದೇ ಕಾರಣಕ್ಕೂ ಕಲ್ಲು ಗಣಿಗಾರಿಕೆ ಮಾಡಲು ಅವಕಾಶ ನೀಡಬಾರದು ಎಂದು ಗುರುವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಆಲಿಕೆ ಸಭೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದರು.</p>.<p>ಖಾಸಗಿ ಕ್ರಷರ್ ಮಾಲೀಕರ ಕ್ರಷರ್ನಲ್ಲಿ ವಾರ್ಷಿಕ 2,50,000 ಟನ್ ಉತ್ಪಾದನಾ ಸಾಮರ್ಥ್ಯದ ಕಟ್ಟಡ ಕಲ್ಲು (ಎಂ ಸ್ಯಾಂಡ್) ಹಾಗೂ 5,102 ಟನ್ ಅಂತರಸ್ಥಿತ ತ್ಯಾಜ್ಯ, 38,090 ಟನ್ ಮುರಂ ಗಣಿಗಾರಿಕೆ ಮಾಡುವ ಯೋಜನೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.</p>.<p>ರೈತರ ಜಮೀನುಗಳಿಗೆ ಹೊಂದಿಕೊಂಡಿರುವ ಜಾಗದಲ್ಲಿ ಕಲ್ಲುಗಣಿಗಾರಿಕೆ ಆರಂಭಿಸಲು ಅನುಮತಿ ನೀಡಿದರೆ ರೈತರು ಸರಣಿಯಾಗಿ ತಾಲ್ಲೂಕು ಕಛೇರಿಯ ಮುಂದೆ ನೇಣುಬಿಗಿದುಕೊಂಡು ಸಾಯುತ್ತೇವೆ. ಈ ಜಾಗದಲ್ಲಿ ಯಾವುದೇ ಕಾರಣಕ್ಕೂ ಕಲ್ಲುಗಣಿಗಾರಿಗೆ ಆರಂಭಿಸಲು ಬಿಡುವುದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಉದ್ದೇಶಿತ ಗಣಿಗಾರಿಕೆ ಸ್ಥಳದಿಂದ ಕೇವಲ 500 ಮೀ. ದೂರದಲ್ಲಿ ಇತಿಹಾಸ ಪ್ರಸಿದ್ಧ ರಂಗನಾಥಸ್ವಾಮಿ ದೇಗುಲವಿದೆ. ಈ ಪ್ರದೇಶದಲ್ಲಿ ನೂರಾರು ಕೃಷ್ಣಮೃಗಗಳು ನವಿಲುಗಳು ಸೇರಿದಂತೆ ಇತರೆ ಪ್ರಾಣಿಗಳು ವಾಸವಾಗಿವೆ. ಈ ಸ್ಥಳಕ್ಕೆ ಹೊಂದಿಕೊಂಡಂತೆ ನೂರಾರು ರೈತರ ಜಮೀನು, ತೋಟಗಳಿದ್ದು, ಗಣಿಗಾರಿಕೆಯಿಂದ ಬರುವ ಧೂಳಿನಿಂದ ಬೆಳೆಗಳು ಹಾಳಾಗುತ್ತವೆ ಎಂದರು.</p>.<p>30-40 ವರ್ಷಗಳಿಂದ ಜಮೀನಿನಲ್ಲಿನ ಕಲ್ಲುಗಳನ್ನು ತೆಗೆದು, ಹದ ಮಾಡಿ, ಲಕ್ಷಾಂತರ ರೂಪಾಯಿ ಸಾಲ ಮಾಡಿ ಕೊಳವೆ ಬಾವಿ ಕೊರೆಸಿ, ಟಿಸಿ ಇಟ್ಟು ತೆಂಗಿನ ಸಸಿಗಳನ್ನು ನೆಟ್ಟಿದ್ದೇವೆ. ಇದರಿಂದ ನಮ್ಮ ಬದುಕು ಭವಿಷ್ಯದಲ್ಲಿ ಚೆನ್ನಾಗಿರುತ್ತದೆ ಎಂದು ಭಾವಿಸಿದ್ದೇವೆ. ಈಗ ಈ ಜಾಗದಲ್ಲಿ ಕಲ್ಲುಗಣಿಗಾರಿಕೆ ಆರಂಭಿಸಲು ಅವಕಾಶ ನೀಡಿದರೆ ನಮ್ಮೆಲ್ಲರ ಬದುಕು ಬೀದಿಗೆ ಬರುತ್ತದೆ ಎಂದರು. ಜಿಲ್ಲಾಧಿಕಾರಿಗಳು ಇಲ್ಲಿಯೇ ತಮ್ಮ ತೀರ್ಮಾನವನ್ನು ತಿಳಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಕೆ.ವೆಂಕಟೇಶ್ ಮಾತನಾಡಿ ‘ಇಲ್ಲಿ ಯಾವುದೇ ತೀರ್ಮಾನವನ್ನು ಮಾಡುವುದಿಲ್ಲ. ಸಾರ್ವಜನಿಕರು, ರೈತರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲರ ಅಹವಾಲುಗಳನ್ನು ವರದಿ ಮಾಡಿಕೊಳ್ಳಲಾಗಿದೆ. ಅದನ್ನು ಯಥಾವತ್ತಾಗಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಶೀಘ್ರದಲ್ಲಿಯೇ ಸರ್ಕಾರ ಈ ಕುರಿತು ಪ್ರಕಟಣೆ ಹೊರಡಿಸಲಿದೆ’ ಎಂದು ಹೇಳಿದರು.</p>.<p>‘ನಾವು 40 ವರ್ಷಗಳಿಂದ ತೋಟ ಮಾಡುತ್ತಿದ್ದೇವೆ. ಇಲ್ಲಿ ಭೂಮಿಯನ್ನು ನಂಬಿಕೊಂಡು ಸುತ್ತಮುತ್ತ 5 ಸಾವಿರ ಜನ ಇದ್ದಾರೆ ಕಂಪನಿಯವರು ಇವರನ್ನು ಸಾಕುತ್ತಾರೆಯೇ’ ಎಂದು ಕಬ್ಬಳ ಗ್ರಾಮದ ರೇಣುಕಮ್ಮ ಪ್ರಶ್ನಿಸಿದರು.</p>.<p>ಹಿರಿಯ ಪರಿಸರ ಅಧಿಕಾರಿ ದಾವಣಗೆರೆ ವಲಯ ರಮೇಶ್ ಡಿ ನಾಯಕ್, ತಹಶೀಲ್ದಾರ್ ತಿರುಪತಿ ಪಾಟೀಲ್, ಕಬ್ಬಳ, ಬೊಮ್ಮೇನಹಳ್ಳಿ, ಮಲ್ಲೇನಹಳ್ಳಿ, ಹೊಸಹಟ್ಟಿ, ತುಂಬಿನಕೆರೆ, ತುಂಬಿನಕೆರೆ ಭೋವಿಹಟ್ಟಿ, ತೊಣಚೇನಹಳ್ಳಿ ಗ್ರಾಮಗಳ ನೂರಾರು ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>