<p><strong>ಮೊಳಕಾಲ್ಮುರು</strong>: ‘ಮಕ್ಕಳು ಹಾಗೂ ಕುಟುಂಬದ ಭವಿಷ್ಯದ ದೃಷ್ಟಿಯಿಂದ ಗುಳೆ ಹೋಗುವುದನ್ನು ಕೈಬಿಟ್ಟು ಸ್ಥಳೀಯವಾಗಿ ಜೀವನ ಕಟ್ಟಿಕೊಳ್ಳಲು ಕಾರ್ಮಿಕರು ಮುಂದಾಗಬೇಕು’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ತಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮದೇವರಹಳ್ಳಿಯಲ್ಲಿ ಮಂಗಳವಾರ ತಾಲ್ಲೂಕಿನ 2025– 26ನೇ ಸಾಲಿನ ಉದ್ಯೋಗಖಾತ್ರಿ ಯೋಜನೆ ಕಾಮಗಾರಿಗಳಿಗೆ ಮತ್ತು ಗ್ರಾಮದ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಳೆಯಾಶ್ರಿತ ಮತ್ತು ಕಡಿಮೆ ಮಳೆ ಬೀಳುವ ಇಲ್ಲಿ ಜಲ ಮರುಪೂರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ₹ 20 ಲಕ್ಷ ವೆಚ್ಚದಲ್ಲಿ ಈ ಕೆರೆ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ. ಇಂತಹ ಕಾರ್ಯಗಳಿಂದ ಸ್ಥಳೀಯವಾಗಿ ಕೆಲಸ ಸಿಗುವ ಜತೆಗೆ ಗ್ರಾಮಕ್ಕೂ ಅನುಕೂಲವಾಗಲಿದೆ. ಕಾರ್ಮಿಕರು ಸಹಭಾಗಿತ್ವ ವಹಿಸಬೇಕು ಮತ್ತು ಇಂತಹ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಬೇಕು’ ಎಂದು ಹೇಳಿದರು.</p>.<p>‘20 ವರ್ಷಗಳ ಹಿಂದೆ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಮಾತ್ರ ಉದ್ಯೋಗಖಾತ್ರಿ ಯೋಜನೆ ಮಂಜೂರಾಗಿತ್ತು. ಆಗ ಸಂಸತ್ ಸದಸ್ಯರಾಗಿದ್ದ ಎನ್.ವೈ. ಹನುಮಂತಪ್ಪ ಶ್ರಮದಿಂದ ಚಿತ್ರದುರ್ಗ ಜಿಲ್ಲೆ ಪ್ರಥಮ ಹಂತದಲ್ಲಿ ಸೇರ್ಪಡೆಯಾಯಿತು. ಯೋಜನೆ ದಾರಿ ತಪ್ಪದಂತೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಎಚ್.ಹನುಮಂತಪ್ಪ, ಸಹಾಯಕ ನಿರ್ದೇಶಕ ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ, ಸದಸ್ಯರಾದ ಗುರುಲಿಂಗಪ್ಪ, ನಾಗೇಂದ್ರಪ್ಪ, ಪಿಡಿಒ ನಾಗೇಂದ್ರಪ್ಪ, ರೇಷ್ಮೆ ವಿಸ್ತರಣಾಧಿಕಾರಿ ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ‘ಮಕ್ಕಳು ಹಾಗೂ ಕುಟುಂಬದ ಭವಿಷ್ಯದ ದೃಷ್ಟಿಯಿಂದ ಗುಳೆ ಹೋಗುವುದನ್ನು ಕೈಬಿಟ್ಟು ಸ್ಥಳೀಯವಾಗಿ ಜೀವನ ಕಟ್ಟಿಕೊಳ್ಳಲು ಕಾರ್ಮಿಕರು ಮುಂದಾಗಬೇಕು’ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.</p>.<p>ತಾಲ್ಲೂಕಿನ ತಮ್ಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮದೇವರಹಳ್ಳಿಯಲ್ಲಿ ಮಂಗಳವಾರ ತಾಲ್ಲೂಕಿನ 2025– 26ನೇ ಸಾಲಿನ ಉದ್ಯೋಗಖಾತ್ರಿ ಯೋಜನೆ ಕಾಮಗಾರಿಗಳಿಗೆ ಮತ್ತು ಗ್ರಾಮದ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಮಳೆಯಾಶ್ರಿತ ಮತ್ತು ಕಡಿಮೆ ಮಳೆ ಬೀಳುವ ಇಲ್ಲಿ ಜಲ ಮರುಪೂರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ₹ 20 ಲಕ್ಷ ವೆಚ್ಚದಲ್ಲಿ ಈ ಕೆರೆ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ. ಇಂತಹ ಕಾರ್ಯಗಳಿಂದ ಸ್ಥಳೀಯವಾಗಿ ಕೆಲಸ ಸಿಗುವ ಜತೆಗೆ ಗ್ರಾಮಕ್ಕೂ ಅನುಕೂಲವಾಗಲಿದೆ. ಕಾರ್ಮಿಕರು ಸಹಭಾಗಿತ್ವ ವಹಿಸಬೇಕು ಮತ್ತು ಇಂತಹ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಬೇಕು’ ಎಂದು ಹೇಳಿದರು.</p>.<p>‘20 ವರ್ಷಗಳ ಹಿಂದೆ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಮಾತ್ರ ಉದ್ಯೋಗಖಾತ್ರಿ ಯೋಜನೆ ಮಂಜೂರಾಗಿತ್ತು. ಆಗ ಸಂಸತ್ ಸದಸ್ಯರಾಗಿದ್ದ ಎನ್.ವೈ. ಹನುಮಂತಪ್ಪ ಶ್ರಮದಿಂದ ಚಿತ್ರದುರ್ಗ ಜಿಲ್ಲೆ ಪ್ರಥಮ ಹಂತದಲ್ಲಿ ಸೇರ್ಪಡೆಯಾಯಿತು. ಯೋಜನೆ ದಾರಿ ತಪ್ಪದಂತೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು’ ಎಂದು ಹೇಳಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಎಚ್.ಹನುಮಂತಪ್ಪ, ಸಹಾಯಕ ನಿರ್ದೇಶಕ ಗಣೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ, ಸದಸ್ಯರಾದ ಗುರುಲಿಂಗಪ್ಪ, ನಾಗೇಂದ್ರಪ್ಪ, ಪಿಡಿಒ ನಾಗೇಂದ್ರಪ್ಪ, ರೇಷ್ಮೆ ವಿಸ್ತರಣಾಧಿಕಾರಿ ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>