<p><strong>ಚಳ್ಳಕೆರೆ</strong>: ಬೀದಿನಾಯಿಗಳು ಕುರಿಹಟ್ಟಿ ಮೇಲೆ ದಾಳಿ ಮಾಡಿದ ಪರಿಣಾಮ ಎಂಟು ಕುರಿಮರಿಗಳು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದ ಜಿ.ಪಿ.ರಂಗಪ್ಪ ಬಡಾವಣೆಯಲ್ಲಿ ಗುರುವಾರ ನಡೆದಿದೆ.</p>.<p>ಕುರಿಮರಿಗಳು ಕುರಿಗಾಹಿ ಮಾರಪ್ಪ ಅವರಿಗೆ ಸೇರಿದ್ದು, ಅವುಗಳ ಸಾವಿನಿಂದ ₹ 40,000 ನಷ್ಟ ಸಂಭವಿಸಿದೆ ಎಂದು ಆಂದಾಜಿಸಲಾಗಿದೆ.</p>.<p>ಮರಿಗಳ ಸಾವಿನ ಕುರಿತು ಪರಿಶೀಲನೆ ನಡೆಸಿ ಇಲಾಖೆಯಿಂದ ಸಿಗಬಹುದಾದ ಪರಿಹಾರ ಕೊಡಿಸಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೇವಣ್ಣ ತಿಳಿಸಿದ್ದಾರೆ. </p>.<p>ಬೀದಿನಾಯಿಗಳಿಗೆ ಕಡಿವಾಣಕ್ಕೆ ಆಗ್ರಹ: ಬೀದಿನಾಯಿಗಳ ಹಾವಳಿಯಿಂದ ಗ್ರಾಮದ ಕುರಿ, ಮೇಕೆ ಹಾಗೂ ಎಮ್ಮೆಗಳು ಆಗಿಂದಾಗ್ಗೆ ಸಾವನ್ನಪ್ಪುತ್ತಿವೆ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಗುಂಪು ಗುಂಪಾಗಾಗಿ ತಿರುಗಾಡುತ್ತಿರುವ ಬೀದಿನಾಯಿಗಳನ್ನು ಹಿಡಿದು ಬೇರೆಡೆಗೆ ಬಿಟ್ಟು ಬರಲು ಕ್ರಮ ಕೈಗೊಳ್ಳಬೇಕು ಎಂದು ಕುರಿಗಾಹಿ ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ಬೀದಿನಾಯಿಗಳು ಕುರಿಹಟ್ಟಿ ಮೇಲೆ ದಾಳಿ ಮಾಡಿದ ಪರಿಣಾಮ ಎಂಟು ಕುರಿಮರಿಗಳು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದ ಜಿ.ಪಿ.ರಂಗಪ್ಪ ಬಡಾವಣೆಯಲ್ಲಿ ಗುರುವಾರ ನಡೆದಿದೆ.</p>.<p>ಕುರಿಮರಿಗಳು ಕುರಿಗಾಹಿ ಮಾರಪ್ಪ ಅವರಿಗೆ ಸೇರಿದ್ದು, ಅವುಗಳ ಸಾವಿನಿಂದ ₹ 40,000 ನಷ್ಟ ಸಂಭವಿಸಿದೆ ಎಂದು ಆಂದಾಜಿಸಲಾಗಿದೆ.</p>.<p>ಮರಿಗಳ ಸಾವಿನ ಕುರಿತು ಪರಿಶೀಲನೆ ನಡೆಸಿ ಇಲಾಖೆಯಿಂದ ಸಿಗಬಹುದಾದ ಪರಿಹಾರ ಕೊಡಿಸಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೇವಣ್ಣ ತಿಳಿಸಿದ್ದಾರೆ. </p>.<p>ಬೀದಿನಾಯಿಗಳಿಗೆ ಕಡಿವಾಣಕ್ಕೆ ಆಗ್ರಹ: ಬೀದಿನಾಯಿಗಳ ಹಾವಳಿಯಿಂದ ಗ್ರಾಮದ ಕುರಿ, ಮೇಕೆ ಹಾಗೂ ಎಮ್ಮೆಗಳು ಆಗಿಂದಾಗ್ಗೆ ಸಾವನ್ನಪ್ಪುತ್ತಿವೆ. ಗ್ರಾಮದಲ್ಲಿ ಎಲ್ಲೆಂದರಲ್ಲಿ ಗುಂಪು ಗುಂಪಾಗಾಗಿ ತಿರುಗಾಡುತ್ತಿರುವ ಬೀದಿನಾಯಿಗಳನ್ನು ಹಿಡಿದು ಬೇರೆಡೆಗೆ ಬಿಟ್ಟು ಬರಲು ಕ್ರಮ ಕೈಗೊಳ್ಳಬೇಕು ಎಂದು ಕುರಿಗಾಹಿ ತಿಪ್ಪೇಸ್ವಾಮಿ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>