ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ಕರ | ನಗರ ಸ್ಥಳೀಯ ಸಂಸ್ಥೆ ನೌಕರರೊಂದಿಗೆ ಚರ್ಚೆ: ಸಿಎಂ ಬೊಮ್ಮಾಯಿ

Last Updated 19 ಮಾರ್ಚ್ 2023, 9:49 IST
ಅಕ್ಷರ ಗಾತ್ರ

ಚಿತ್ರದುರ್ಗ: ನಗರ ಸ್ಥಳೀಯ ಸಂಸ್ಥೆಗಳ ನೀರಗಂಟಿ ಹಾಗೂ ಸ್ವಚ್ಛತಾ ಸಿಬ್ಬಂದಿ ಸಮಸ್ಯೆ ಗಮನಕ್ಕೆ ಬಂದಿದೆ. ಮುಷ್ಕರಕ್ಕೆ ಮುಂದಾಗಿರುವ ಅವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹೊಳಲ್ಕೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರತಿಭಟನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇಂತಹ ಹೋರಾಟವನ್ನು ನಾವೂ ನೋಡುತ್ತಿದ್ದೇವೆ. ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಲಿದ್ದೇವೆ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

'ತೋಟಗಾರಿಕಾ ಬೆಳೆಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಉತ್ತೇಜನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಗಡದ ರೈತರಿಗೆ ಶೇ 90 ಸಬ್ಸಿಡಿ ಹಾಗೂ ಉಳಿದ ವರ್ಗಕ್ಕೆ ಶೇ 75ರಷ್ಟು ಸಬ್ಸಿಡಿ ಸಿಗುತ್ತಿದೆ. ಈ ಸಹಾಯಧನವನ್ನು ಬಯಲುಸೀಮೆ ಅಡಿಕೆ ಬೆಳೆಗೂ ವಿಸ್ತರಣೆ ಮಾಡುವ ಕುರಿತು ಪರಿಶೀಲನೆ ನಡೆಸಲಾಗುವುದು' ಎಂದು ಮಾಹಿತಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT