ಈ ಬಗ್ಗೆ ಉಮೇಶ್ ಮಾತನಾಡಿ, ‘ನಾನು ಓದಿದ ಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆ ಇತ್ತು. ನಂತರ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಮೈಸೂರು, ಮಂಗಳೂರಿಗೆ ತೆರಳಿದಾಗ ಅಲ್ಲಿನ ಶಾಲಾ–ಕಾಲೇಜುಗಳ ಸ್ಥಿತಿಗತಿ ಅರ್ಥವಾಯಿತು. ನಮ್ಮ ಗ್ರಾಮದ ಮಕ್ಕಳಿಗೂ ಶಾಲೆಯಲ್ಲಿ ಹೈಟೆಕ್ ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ, ಗ್ರಂಥಾಲಯ, ಕಂಪ್ಯೂಟರ್ ಮತ್ತು ಉಚಿತ ವೈ-ಫೈ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಘಟಕ, ಶಾಲಾ ಕಟ್ಟಡಕ್ಕೆ ಬಣ್ಣ ಬಳಿಸುವುದು, ಗ್ರೀನ್ಬೋರ್ಡ್, ಶಾಲಾ ಆವರಣದಲ್ಲಿ ಸಸಿ ನೆಡುಸುವುದು, ಯೋಗ ಶಿಬಿರ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಬೇಕು ಎಂಬ ಉದ್ದೇಶದಿಂದ ಶಾಲೆಯನ್ನು ದತ್ತು ಪಡೆದಿದ್ದೇನೆ’ ಎಂದು ಹೇಳಿದರು.