<p><strong>ಚಿತ್ರದುರ್ಗ:</strong> ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿದ್ದ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ವೀರಶೈವ ಆಗಮ ವೇದ ಸಂಸ್ಕೃತ ಪಾಠಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. </p>.<p>ವಿದ್ಯಾರ್ಥಿಗೆ ಥಳಿಸುವ ವಿಡಿಯೊ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ದೇವಾಲಯದ ಹೊರಗಿರುವ ಅಂಗಡಿಯೊಂದರ ಮಾಲೀಕರೊಬ್ಬರಿಂದ ಮೊಬೈಲ್ ಪಡೆದಿದ್ದ ವಿದ್ಯಾರ್ಥಿ ತನ್ನ ಅಜ್ಜಿಗೆ ಕರೆ ಮಾಡಿದ್ದ ಎಂಬ ಕಾರಣಕ್ಕೆ ಕೋಪಗೊಂಡಿದ್ದ ಶಿಕ್ಷಕ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದ.</p>.<p>‘ಬೇಡ ಗುರೂಜಿ ಹೊಡೆಯಬೇಡಿ’ ಎಂದು ಬೇಡಿಕೊಂಡರೂ ಶಿಕ್ಷಕ ಹಲವು ಬಾರಿ ಬಡಿದು, ಒದ್ದು ಹಲ್ಲೆ ಮಾಡಿದ್ದ. ಎಂಟು ತಿಂಗಳ ಹಿಂದೆ ಫೆ.11ರಂದು ನಡೆದಿತ್ತು. ವಿಡಿಯೊ ಈಗ ಜಾಲತಾಣಗಳಲ್ಲಿ ಹರಿದಾಡಿದ್ದು ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>‘ಪೊಲೀಸರು ಹಾಗೂ ದೇವಸ್ಥಾನದ ಕಾರ್ಯನಿವಾಹಕ ಅಧಿಕಾರಿಗಳಿಂದ ಮಾಹಿತಿ ಪಡೆದ ತಹಶೀಲ್ದಾರ್, ಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ. ಜೊತೆಗೆ ನಾಯಕನಹಟ್ಟಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. </p>.<p>ಈ ದೇವಾಲಯ ‘ಎ’ ಗ್ರೇಡ್ ಮಾನ್ಯತೆ ಹೊಂದಿದೆ. ದೇಗುಲ ಆಡಳಿತ ಮಂಡಳಿಯು ಆಗಮ ವೇದ ಸಂಸ್ಕೃತ ಪಾಠಶಾಲೆ ನಡೆಸುತ್ತಿದೆ. ಸದ್ಯ ಪಾಠಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿದ್ದು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿದ್ದ ನಾಯಕನಹಟ್ಟಿಯ ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ವೀರಶೈವ ಆಗಮ ವೇದ ಸಂಸ್ಕೃತ ಪಾಠಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. </p>.<p>ವಿದ್ಯಾರ್ಥಿಗೆ ಥಳಿಸುವ ವಿಡಿಯೊ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ದೇವಾಲಯದ ಹೊರಗಿರುವ ಅಂಗಡಿಯೊಂದರ ಮಾಲೀಕರೊಬ್ಬರಿಂದ ಮೊಬೈಲ್ ಪಡೆದಿದ್ದ ವಿದ್ಯಾರ್ಥಿ ತನ್ನ ಅಜ್ಜಿಗೆ ಕರೆ ಮಾಡಿದ್ದ ಎಂಬ ಕಾರಣಕ್ಕೆ ಕೋಪಗೊಂಡಿದ್ದ ಶಿಕ್ಷಕ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ್ದ.</p>.<p>‘ಬೇಡ ಗುರೂಜಿ ಹೊಡೆಯಬೇಡಿ’ ಎಂದು ಬೇಡಿಕೊಂಡರೂ ಶಿಕ್ಷಕ ಹಲವು ಬಾರಿ ಬಡಿದು, ಒದ್ದು ಹಲ್ಲೆ ಮಾಡಿದ್ದ. ಎಂಟು ತಿಂಗಳ ಹಿಂದೆ ಫೆ.11ರಂದು ನಡೆದಿತ್ತು. ವಿಡಿಯೊ ಈಗ ಜಾಲತಾಣಗಳಲ್ಲಿ ಹರಿದಾಡಿದ್ದು ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>‘ಪೊಲೀಸರು ಹಾಗೂ ದೇವಸ್ಥಾನದ ಕಾರ್ಯನಿವಾಹಕ ಅಧಿಕಾರಿಗಳಿಂದ ಮಾಹಿತಿ ಪಡೆದ ತಹಶೀಲ್ದಾರ್, ಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ. ಜೊತೆಗೆ ನಾಯಕನಹಟ್ಟಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. </p>.<p>ಈ ದೇವಾಲಯ ‘ಎ’ ಗ್ರೇಡ್ ಮಾನ್ಯತೆ ಹೊಂದಿದೆ. ದೇಗುಲ ಆಡಳಿತ ಮಂಡಳಿಯು ಆಗಮ ವೇದ ಸಂಸ್ಕೃತ ಪಾಠಶಾಲೆ ನಡೆಸುತ್ತಿದೆ. ಸದ್ಯ ಪಾಠಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿಗಳಿದ್ದು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>