<p><strong>ಮೊಳಕಾಲ್ಮುರು:</strong> ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ವ್ಯವಹಾರ ಜ್ಞಾನ ಮತ್ತು ಸ್ವ–ಉದ್ಯೋಗ ಚಟುವಟಿಕೆಗಳ ಅರಿವು ಹೊಂದುವ ಅಗತ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ನಿರ್ಮಲಾದೇವಿ ಸಲಹೆ ಮಾಡಿದರು.</p>.<p>ಪಟ್ಟಣದ ಪಿಎಂಶ್ರೀ ಆದರ್ಶ ಕೇಂದ್ರೀಯ ವಿದ್ಯಾಲಯದಲ್ಲಿ ಶನಿವಾರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಆಹಾರ ಮತ್ತು ವಾಣಿಜ್ಯ ಮೇಳದಲ್ಲಿ ಮಾತನಾಡಿದರು.</p>.<p>ವ್ಯಾಪಾರ ಕ್ಷೇತ್ರದಲ್ಲಿ ವಿಪುಲ ಅವಕಾಶಗಳು ಇದೆ. ವಿದ್ಯೆ ಜತೆಯಲ್ಲಿ ಈ ಜ್ಞಾನವನ್ನು ಅಳವಡಿಸಿಕೊಂಡಲ್ಲಿ ಸದೃಢ ಜೀವನ ಕಟ್ಟಿಕೊಳ್ಳಲು ಅನುಕೂಲವಾಗಲಿದೆ. ಜಂಕ್ ಆಹಾರ ತಿನ್ನುವುದರಿಂದ ಅನೇಕ ಅನಾರೋಗ್ಯ ಸಮಸ್ಯೆಗಳು ಮಕ್ಕಳನ್ನು ಕಾಡುತ್ತಿವೆ. ಪೋಷಕರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದರು. </p>.<p>400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು.</p>.<p>ಉಪ ಪ್ರಾಂಶುಪಾಲ ಎಂ. ಮಲ್ಲಿಕಾರ್ಜುನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್. ನಾಗರಾಜ್, ಉಪಾಧ್ಯಕ್ಷೆ ಎಸ್. ನಾಗವೇಣಿ, ಸದಸ್ಯೆ ಶಿಲ್ಪಾ, ಶಿಕ್ಷಕರಾದ ರೂಪಾ, ನಂದೀಶ್, ಎ. ಅನಿತಾ, ಡಿ. ವಿಜಯಲಕ್ಷ್ಮಿ, ವಿಜಯ್ ಕುಮಾರ್, ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ವಿದ್ಯಾರ್ಥಿಗಳು ವಿದ್ಯೆ ಜೊತೆಗೆ ವ್ಯವಹಾರ ಜ್ಞಾನ ಮತ್ತು ಸ್ವ–ಉದ್ಯೋಗ ಚಟುವಟಿಕೆಗಳ ಅರಿವು ಹೊಂದುವ ಅಗತ್ಯವಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ನಿರ್ಮಲಾದೇವಿ ಸಲಹೆ ಮಾಡಿದರು.</p>.<p>ಪಟ್ಟಣದ ಪಿಎಂಶ್ರೀ ಆದರ್ಶ ಕೇಂದ್ರೀಯ ವಿದ್ಯಾಲಯದಲ್ಲಿ ಶನಿವಾರ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಆಹಾರ ಮತ್ತು ವಾಣಿಜ್ಯ ಮೇಳದಲ್ಲಿ ಮಾತನಾಡಿದರು.</p>.<p>ವ್ಯಾಪಾರ ಕ್ಷೇತ್ರದಲ್ಲಿ ವಿಪುಲ ಅವಕಾಶಗಳು ಇದೆ. ವಿದ್ಯೆ ಜತೆಯಲ್ಲಿ ಈ ಜ್ಞಾನವನ್ನು ಅಳವಡಿಸಿಕೊಂಡಲ್ಲಿ ಸದೃಢ ಜೀವನ ಕಟ್ಟಿಕೊಳ್ಳಲು ಅನುಕೂಲವಾಗಲಿದೆ. ಜಂಕ್ ಆಹಾರ ತಿನ್ನುವುದರಿಂದ ಅನೇಕ ಅನಾರೋಗ್ಯ ಸಮಸ್ಯೆಗಳು ಮಕ್ಕಳನ್ನು ಕಾಡುತ್ತಿವೆ. ಪೋಷಕರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದರು. </p>.<p>400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು.</p>.<p>ಉಪ ಪ್ರಾಂಶುಪಾಲ ಎಂ. ಮಲ್ಲಿಕಾರ್ಜುನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್. ನಾಗರಾಜ್, ಉಪಾಧ್ಯಕ್ಷೆ ಎಸ್. ನಾಗವೇಣಿ, ಸದಸ್ಯೆ ಶಿಲ್ಪಾ, ಶಿಕ್ಷಕರಾದ ರೂಪಾ, ನಂದೀಶ್, ಎ. ಅನಿತಾ, ಡಿ. ವಿಜಯಲಕ್ಷ್ಮಿ, ವಿಜಯ್ ಕುಮಾರ್, ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>