<p><strong>ಚಿತ್ರದುರ್ಗ: </strong>ಸುಗ್ರೀವಾಜ್ಞೆ ಮೂಲಕ ಜನವಿರೋಧಿ ಕಾಯ್ದೆ ಜಾರಿಗೊಳಿಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ತೊಲಗಿಸಲು ದೇಶವಾಸಿಗಳಾದ ಜಿಲ್ಲೆಯ ಜನತೆ ರಾಜ್ಯ ಬಂದ್ಗೆ ಬೆಂಬಲಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿ.ಶಿವುಯಾದವ್ ಮನವಿ ಮಾಡಿದ್ದಾರೆ.</p>.<p>‘ಈ ಸರ್ಕಾರಗಳು ರೈತ, ಕಾರ್ಮಿಕ ಹಾಗೂ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿ, ಜನರನ್ನು ಸಂಕಷ್ಟಕ್ಕೆ ನೂಕುತ್ತಿವೆ. ಇದನ್ನು ಒಕ್ಕೊರಲಿನಿಂದ ಖಂಡಿಸಿ, ಬೀದಿಗಿಳಿದು ಪ್ರತಿಭಟಿಸುವ ಕಾಲ ಬಂದಿದೆ. ಅದಕ್ಕೆ ರೈತ ಮತ್ತು ಕಾರ್ಮಿಕ ಸಂಘಟನೆಗಳು ಉತ್ತಮ ಅವಕಾಶ ಒದಗಿಸಿಕೊಟ್ಟಿವೆ’ ಎಂದು ತಿಳಿಸಿದ್ದಾರೆ.</p>.<p>‘ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆಯಿಂದಾಗಿ ದೇಶ ಮತ್ತು ರಾಜ್ಯ ಅಸ್ಥಿರ, ಅರಾಜಕತೆಯತ್ತ ಸಾಗಿದ್ದು, ವಿನಾಶದ ಅಂಚಿಗೆ ತಳ್ಳಿವೆ. ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ರಾಷ್ಟ್ರದ ಆಸ್ತಿ-ಪಾಸ್ತಿಯನ್ನು ಕಾನೂನು ಬಾಹಿರವಾಗಿ ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ’ ಎಂದು ದೂರಿದ್ದಾರೆ.</p>.<p>‘ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಹಾಗೂ ವಿದ್ಯುಚ್ಛಕ್ತಿ ಕಾಯ್ದೆಗಳ ತಿದ್ದುಪಡಿಯನ್ನು ಚರ್ಚೆಗೆ ಅವಕಾಶ ನೀಡದೆಯೇ ಅಸಂಸದೀಯ ವ್ಯವಸ್ಥೆ ಮೂಲಕ ಸಂಸತ್ತಿನಲ್ಲಿ ಅಂಗೀಕರಿಸಿರುವ ಕ್ರಮ ಖಂಡಿಸಿ ನಡೆಯುತ್ತಿರುವ ಬಂದ್ಗೆ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಜಿಲ್ಲೆಯ ಜನತೆ ಸಹಕರಿಸುವ ಅಗತ್ಯವಿದೆ’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಸುಗ್ರೀವಾಜ್ಞೆ ಮೂಲಕ ಜನವಿರೋಧಿ ಕಾಯ್ದೆ ಜಾರಿಗೊಳಿಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ತೊಲಗಿಸಲು ದೇಶವಾಸಿಗಳಾದ ಜಿಲ್ಲೆಯ ಜನತೆ ರಾಜ್ಯ ಬಂದ್ಗೆ ಬೆಂಬಲಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿ.ಶಿವುಯಾದವ್ ಮನವಿ ಮಾಡಿದ್ದಾರೆ.</p>.<p>‘ಈ ಸರ್ಕಾರಗಳು ರೈತ, ಕಾರ್ಮಿಕ ಹಾಗೂ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿ, ಜನರನ್ನು ಸಂಕಷ್ಟಕ್ಕೆ ನೂಕುತ್ತಿವೆ. ಇದನ್ನು ಒಕ್ಕೊರಲಿನಿಂದ ಖಂಡಿಸಿ, ಬೀದಿಗಿಳಿದು ಪ್ರತಿಭಟಿಸುವ ಕಾಲ ಬಂದಿದೆ. ಅದಕ್ಕೆ ರೈತ ಮತ್ತು ಕಾರ್ಮಿಕ ಸಂಘಟನೆಗಳು ಉತ್ತಮ ಅವಕಾಶ ಒದಗಿಸಿಕೊಟ್ಟಿವೆ’ ಎಂದು ತಿಳಿಸಿದ್ದಾರೆ.</p>.<p>‘ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆಯಿಂದಾಗಿ ದೇಶ ಮತ್ತು ರಾಜ್ಯ ಅಸ್ಥಿರ, ಅರಾಜಕತೆಯತ್ತ ಸಾಗಿದ್ದು, ವಿನಾಶದ ಅಂಚಿಗೆ ತಳ್ಳಿವೆ. ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ರಾಷ್ಟ್ರದ ಆಸ್ತಿ-ಪಾಸ್ತಿಯನ್ನು ಕಾನೂನು ಬಾಹಿರವಾಗಿ ಖಾಸಗಿಯವರಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ’ ಎಂದು ದೂರಿದ್ದಾರೆ.</p>.<p>‘ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಹಾಗೂ ವಿದ್ಯುಚ್ಛಕ್ತಿ ಕಾಯ್ದೆಗಳ ತಿದ್ದುಪಡಿಯನ್ನು ಚರ್ಚೆಗೆ ಅವಕಾಶ ನೀಡದೆಯೇ ಅಸಂಸದೀಯ ವ್ಯವಸ್ಥೆ ಮೂಲಕ ಸಂಸತ್ತಿನಲ್ಲಿ ಅಂಗೀಕರಿಸಿರುವ ಕ್ರಮ ಖಂಡಿಸಿ ನಡೆಯುತ್ತಿರುವ ಬಂದ್ಗೆ ಕಾಂಗ್ರೆಸ್ ಬೆಂಬಲಿಸುತ್ತಿದ್ದು, ಜಿಲ್ಲೆಯ ಜನತೆ ಸಹಕರಿಸುವ ಅಗತ್ಯವಿದೆ’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>