ಚಿತ್ರದುರ್ಗ: ಪರಪುರುಷನ ಲೈಂಗಿಕ ಕಿರುಕುಳದಿಂದ ಮನನೊಂದು ಸೆಲ್ಫಿ ವಿಡಿಯೊ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪತಿ ಮೈಲಾರಪ್ಪ (40) ಮೃತಪಟ್ಟಿದ್ದು, ಪತ್ನಿ ಸರೋಜಮ್ಮ (35) ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸದುರ್ಗ ತಾಲ್ಲೂಕಿನ ಕೊಂಡಾಪುರದ ದಂಪತಿ ಆತ್ಮಹತ್ಯೆಗೆ ಶರಣಾಗುವುದಾಗಿ ಸೆಲ್ಫಿ ವಿಡಿಯೊ ಮಾಡಿ ನಾಪತ್ತೆಯಾಗಿದ್ದರು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ತೋಣಚೇನಹಳ್ಳಿ ಬಳಿ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಇವರು ಪತ್ತೆಯಾಗಿದ್ದಾರೆ.
ಮೈಲಾರಪ್ಪ ಅವರು ಕೆಎಸ್ಆರ್ಟಿಸಿ ಬಸ್ ಚಾಲಕರಾಗಿದ್ದರು. ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.