<p><strong>ಸಾಸ್ವೆಹಳ್ಳಿ:</strong> ಸಮೀಪದ ಕುಳಗಟ್ಟೆಯ ನ್ಯಾಯಬೆಲೆ ಅಂಗಡಿಯಲ್ಲಿ ಜೂನ್ ತಿಂಗಳ ಪಡಿತರ ವಿತರಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.</p>.<p>‘ಜೂನ್ ತಿಂಗಳ ರಾಗಿಯನ್ನು ಕೆಲವರಿಗೆ ಮಾತ್ರ ವಿತರಿಸಲಾಗಿದ್ದು, ಉಳಿದವರಿಗೆ ರಾಗಿ ಇಲ್ಲ ಎಂದು ಹೇಳಿ ಕೇವಲ ಅಕ್ಕಿಯನ್ನು ನೀಡಲಾಗುತ್ತಿದೆ. ಇದು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿದೆ’ ಎಂದು ಹಾಲೇಶ್ ಗೌಡ್ರು ಆರೋಪಿಸಿದ್ದಾರೆ.</p>.<p>‘ಪಡಿತರ ವಿತರಣೆ ಮಾಡಿದರೂ ಯಾವುದೇ ರೀತಿಯ ಬಿಲ್ಗಳನ್ನು ನೀಡುತ್ತಿಲ್ಲ. ತೂಕದಲ್ಲಿ ಮೋಸ, ಪ್ರತಿ ಕುಟುಂಬದ ಪಡಿತರ ನೀಡುವಾಗ ಒಂದರಿಂದ ಎರಡು ಕೆ.ಜಿ ಕಡಿತಗೊಳಿಸಿ ಪಡಿತರ ನೀಡುತ್ತಾರೆ. ತಿಂಗಳಲ್ಲಿ ಕೇವಲ 2ರಿಂದ 3 ದಿನ ಮಾತ್ರ ನ್ಯಾಯಬೆಲೆ ಅಂಗಡಿಯನ್ನು ತೆರೆಯಲಾಗುತ್ತದೆ. ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಇದರಿಂದ ಗ್ರಾಹಕರಿಗೆ ಬಹಳ ತೊಂದರೆಯಾಗುತ್ತಿದೆ’ ಎಂದು ದೂರಿದ್ದಾರೆ.</p>.<p>‘ಜೂನ್ ತಿಂಗಳ ರಾಗಿಯನ್ನು ಮಾರಿಕೊಂಡಿರುವ ಬಗ್ಗೆ ಅನುಮಾನಗಳಿವೆ. ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ ರೀತಿಯ ಮಾಹಿತಿ ಫಲಕಗಳನ್ನು ಹಾಕಿರುವುದಿಲ್ಲ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಈ ಸಂದರ್ಭದಲ್ಲಿ ಆಂಜನೇಯ, ಹನುಮಂತ, ಲೋಕೇಶ್ ಮತ್ತು ಯೋಗೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ:</strong> ಸಮೀಪದ ಕುಳಗಟ್ಟೆಯ ನ್ಯಾಯಬೆಲೆ ಅಂಗಡಿಯಲ್ಲಿ ಜೂನ್ ತಿಂಗಳ ಪಡಿತರ ವಿತರಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.</p>.<p>‘ಜೂನ್ ತಿಂಗಳ ರಾಗಿಯನ್ನು ಕೆಲವರಿಗೆ ಮಾತ್ರ ವಿತರಿಸಲಾಗಿದ್ದು, ಉಳಿದವರಿಗೆ ರಾಗಿ ಇಲ್ಲ ಎಂದು ಹೇಳಿ ಕೇವಲ ಅಕ್ಕಿಯನ್ನು ನೀಡಲಾಗುತ್ತಿದೆ. ಇದು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿದೆ’ ಎಂದು ಹಾಲೇಶ್ ಗೌಡ್ರು ಆರೋಪಿಸಿದ್ದಾರೆ.</p>.<p>‘ಪಡಿತರ ವಿತರಣೆ ಮಾಡಿದರೂ ಯಾವುದೇ ರೀತಿಯ ಬಿಲ್ಗಳನ್ನು ನೀಡುತ್ತಿಲ್ಲ. ತೂಕದಲ್ಲಿ ಮೋಸ, ಪ್ರತಿ ಕುಟುಂಬದ ಪಡಿತರ ನೀಡುವಾಗ ಒಂದರಿಂದ ಎರಡು ಕೆ.ಜಿ ಕಡಿತಗೊಳಿಸಿ ಪಡಿತರ ನೀಡುತ್ತಾರೆ. ತಿಂಗಳಲ್ಲಿ ಕೇವಲ 2ರಿಂದ 3 ದಿನ ಮಾತ್ರ ನ್ಯಾಯಬೆಲೆ ಅಂಗಡಿಯನ್ನು ತೆರೆಯಲಾಗುತ್ತದೆ. ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಇದರಿಂದ ಗ್ರಾಹಕರಿಗೆ ಬಹಳ ತೊಂದರೆಯಾಗುತ್ತಿದೆ’ ಎಂದು ದೂರಿದ್ದಾರೆ.</p>.<p>‘ಜೂನ್ ತಿಂಗಳ ರಾಗಿಯನ್ನು ಮಾರಿಕೊಂಡಿರುವ ಬಗ್ಗೆ ಅನುಮಾನಗಳಿವೆ. ನ್ಯಾಯಬೆಲೆ ಅಂಗಡಿಯ ಮುಂದೆ ಯಾವುದೇ ರೀತಿಯ ಮಾಹಿತಿ ಫಲಕಗಳನ್ನು ಹಾಕಿರುವುದಿಲ್ಲ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಈ ಸಂದರ್ಭದಲ್ಲಿ ಆಂಜನೇಯ, ಹನುಮಂತ, ಲೋಕೇಶ್ ಮತ್ತು ಯೋಗೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>