<p><strong>ಚಿತ್ರದುರ್ಗ:</strong> ಆಶ್ರಯ ಸಮಿತಿ ನಿರ್ಮಿಸಲು ಉದ್ದೇಶಿಸಿರುವ 1,800 ಮನೆಗಳಲ್ಲಿ ಪೌರಕಾರ್ಮಿಕರ ವಸತಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಶ್ವಾಸನೆ ನೀಡಿದರು.</p>.<p>ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ನಗರಸಭೆ ಗುರುವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪೌರಕಾರ್ಮಿಕರ ವಸತಿ ವ್ಯವಸ್ಥೆಗೆ ನಗರಸಭೆಯಲ್ಲಿ ₹ 48 ಲಕ್ಷ ಅನುದಾನ ಮೀಸಲಿಡಲಾಗಿದೆ. ಆದರೆ, ಈ ಹಣದಲ್ಲಿ ಕನಿಷ್ಠ 30 ಜನರಿಗೂ ಸೌಲಭ್ಯ ಒದಿಗಿಸುವುದು ಕಷ್ಟ. ಆಶ್ರಯ ಸಮಿತಿಯ ವ್ಯಾಪ್ತಿಯಲ್ಲಿ ವಸತಿ ವ್ಯವಸ್ಥೆ ಮಾಡಿಕೊಡಲಾಗುವುದು. ಮನೆ ನೀಡಲು ಈ ಹಿಂದೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ’ ಎಂದು ಹೇಳಿದರು.</p>.<p>‘ವಸತಿ ರಹಿತರ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಮಾಡುವುದು ನಿಯಮ. ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ, ಪೌರಕಾರ್ಮಿಕರಿಗೆ ಲಾಟರಿ ಪದ್ಧತಿಯ ಆಯ್ಕೆಯಿಂದ ವಿನಾಯಿತಿ ನೀಡಲು ಚರ್ಚಿಸಲಾಗುವುದು’ ಎಂದರು.</p>.<p>‘ನಗರವನ್ನು ಶುಚಿಗೊಳಿಸುವ ಪೌರಕಾರ್ಮಿಕರದು ಘನತೆಯ ಕೆಲಸ. ಆದರೆ, ಅವರ ಮಕ್ಕಳು ಈ ಕೆಲಸ ಮುಂದುವರಿಸುವುದು ಬೇಡ. ಉನ್ನತ ವ್ಯಾಸಂಗ ಮಾಡುವ ಪೌರಕಾರ್ಮಿಕರ ಮಕ್ಕಳಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತಿದೆ’ ಎಂದು ಹೇಳಿದರು.</p>.<p>‘ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರೇ ಹೆಚ್ಚಾಗಿ ಪೌರಕಾರ್ಮಿಕರಾಗುತ್ತಿದ್ದಾರೆ. ದಲಿತರೇ ಹೆಚ್ಚಾಗಿ ಈ ಕೆಲಸ ಆಯ್ಕೆ ಮಾಡಿಕೊಳ್ಳುವುದು ಏಕೆ ಎಂಬ ಪ್ರಶ್ನೆ ಕಾಡುತ್ತಿದೆ. ಮಲ ಹೊರುವ ಪದ್ಧತಿಯನ್ನು ನಿಷೇಧಿಸಿದ್ದರೂ, ಅನೇಕ ಭಾಗಗಳಲ್ಲಿ ಇದು ಜೀವಂತವಾಗಿರುವುದು ದುರಂತ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪೌರಕಾರ್ಮಿಕರಿಗೆ ನೀರು ಶುದ್ಧೀಕರಣ ಯಂತ್ರ ಹಾಗೂ ಮಂಚಗಳನ್ನು ವಿತರಣೆ ಮಾಡಲಾಯಿತು. ಕಾರ್ಯನಿರ್ವಾಹಕ ಎಂಜಿನಿಯರ್ ರವಿಶಂಕರ್, ಪೌರಕಾರ್ಮಿಕ ಸಂಘದ ಮುಖಂಡರಾದ ಡಿ.ದುರ್ಗೇಶ್, ರಾಮಚಂದ್ರಪ್ಪ, ಮಹಾಂತೇಶ್, ತಿಮ್ಮಕ್ಕ, ಪಾರ್ವತಮ್ಮ, ಮೈಲಾರಪ್ಪ ಇದ್ದರು.</p>.<p class="Subhead">ಭಾವುಕರಾದ ಶಾಸಕ:ಮ್ಯಾನ್ಹೋಲ್ಗೆ ಬಿದ್ದು ಮೃತಪಡುವ ಪೌರಕಾರ್ಮಿಕರ ಕುರಿತು ಮಾತನಾಡುವ ವೇಳೆ ಶಾಸಕ ತಿಪ್ಪಾರೆಡ್ಡಿ ಭಾವುಕರಾದರು.</p>.<p>‘ಮ್ಯಾನ್ಹೋಲ್ ಶುಚಿಗೊಳಿಸುವ ವೇಳೆ ಮೃತಪಡುವವರ ಸಂಖ್ಯೆ ಹೆಚ್ಚಾಗಿದೆ. ಈಚೆಗೆ ಉತ್ತರ ಭಾರತದಲ್ಲಿ ಪೌರ್ಕಾರ್ಮಿಕರೊಬ್ಬರು ಹಗ್ಗ ಕಟ್ಟಿಕೊಂಡು ಮ್ಯಾನ್ಹೋಲ್ಗೆ ಇಳಿದರು. ಹಗ್ಗ ತುಂಡಾದ ಪರಿಣಾಮ ಮೃತಪಟ್ಟರು. ಮಾಧ್ಯಮಗಳಲ್ಲಿ ಇದನ್ನು ನೋಡಿದಾಗ ಕಣ್ಣಲ್ಲಿ ನೀರು ಬಂದಿತು..’ ಎಂದು ಭಾವುಕರಾಗಿ ಮಾತು ನಿಲ್ಲಿಸಿದರು.</p>.<p class="Subhead"><strong>ಬಾಕಿ ವೇತನಕ್ಕೆ ಮನವಿ:</strong>5 ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಸುವಂತೆ ಪೌರ ಕಾರ್ಮಿಕರು ಶಾಸಕ ತಿಪ್ಪಾರೆಡ್ಡಿ ಅವರನ್ನು ಮನವಿ ಮಾಡಿಕೊಂಡರು.</p>.<p>ಶಾಸಕರು ಭಾಷಣ ಮಾಡುತ್ತಿದ್ದಾಗ ಎದ್ದುನಿಂತ ಪೌರಕಾರ್ಮಿಕರೊಬ್ಬರು, ‘ಮೊದಲು ವೇತನ ಕೊಡಿಸಿ ಸ್ವಾಮಿ..’ ಎಂದು ಕೇಳಿದರು. ಇದಕ್ಕೆ ಮಹಿಳೆಯರೂ ಧ್ವನಿಗೂಡಿಸಿದರು. ‘ವೇತನ ನೀಡದಿದ್ದರೆ ಕುಟುಂಬ ನಿರ್ವಹಣೆ ಮಾಡುವುದು ಹೇಗೆ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಆಶ್ರಯ ಸಮಿತಿ ನಿರ್ಮಿಸಲು ಉದ್ದೇಶಿಸಿರುವ 1,800 ಮನೆಗಳಲ್ಲಿ ಪೌರಕಾರ್ಮಿಕರ ವಸತಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಶ್ವಾಸನೆ ನೀಡಿದರು.</p>.<p>ಅಂಬೇಡ್ಕರ್ ಕಲ್ಯಾಣ ಮಂಟಪದಲ್ಲಿ ನಗರಸಭೆ ಗುರುವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪೌರಕಾರ್ಮಿಕರ ವಸತಿ ವ್ಯವಸ್ಥೆಗೆ ನಗರಸಭೆಯಲ್ಲಿ ₹ 48 ಲಕ್ಷ ಅನುದಾನ ಮೀಸಲಿಡಲಾಗಿದೆ. ಆದರೆ, ಈ ಹಣದಲ್ಲಿ ಕನಿಷ್ಠ 30 ಜನರಿಗೂ ಸೌಲಭ್ಯ ಒದಿಗಿಸುವುದು ಕಷ್ಟ. ಆಶ್ರಯ ಸಮಿತಿಯ ವ್ಯಾಪ್ತಿಯಲ್ಲಿ ವಸತಿ ವ್ಯವಸ್ಥೆ ಮಾಡಿಕೊಡಲಾಗುವುದು. ಮನೆ ನೀಡಲು ಈ ಹಿಂದೆ ಇದ್ದ ಅಡೆತಡೆಗಳು ನಿವಾರಣೆಯಾಗಿವೆ’ ಎಂದು ಹೇಳಿದರು.</p>.<p>‘ವಸತಿ ರಹಿತರ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಮಾಡುವುದು ನಿಯಮ. ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ, ಪೌರಕಾರ್ಮಿಕರಿಗೆ ಲಾಟರಿ ಪದ್ಧತಿಯ ಆಯ್ಕೆಯಿಂದ ವಿನಾಯಿತಿ ನೀಡಲು ಚರ್ಚಿಸಲಾಗುವುದು’ ಎಂದರು.</p>.<p>‘ನಗರವನ್ನು ಶುಚಿಗೊಳಿಸುವ ಪೌರಕಾರ್ಮಿಕರದು ಘನತೆಯ ಕೆಲಸ. ಆದರೆ, ಅವರ ಮಕ್ಕಳು ಈ ಕೆಲಸ ಮುಂದುವರಿಸುವುದು ಬೇಡ. ಉನ್ನತ ವ್ಯಾಸಂಗ ಮಾಡುವ ಪೌರಕಾರ್ಮಿಕರ ಮಕ್ಕಳಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತಿದೆ’ ಎಂದು ಹೇಳಿದರು.</p>.<p>‘ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರೇ ಹೆಚ್ಚಾಗಿ ಪೌರಕಾರ್ಮಿಕರಾಗುತ್ತಿದ್ದಾರೆ. ದಲಿತರೇ ಹೆಚ್ಚಾಗಿ ಈ ಕೆಲಸ ಆಯ್ಕೆ ಮಾಡಿಕೊಳ್ಳುವುದು ಏಕೆ ಎಂಬ ಪ್ರಶ್ನೆ ಕಾಡುತ್ತಿದೆ. ಮಲ ಹೊರುವ ಪದ್ಧತಿಯನ್ನು ನಿಷೇಧಿಸಿದ್ದರೂ, ಅನೇಕ ಭಾಗಗಳಲ್ಲಿ ಇದು ಜೀವಂತವಾಗಿರುವುದು ದುರಂತ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಪೌರಕಾರ್ಮಿಕರಿಗೆ ನೀರು ಶುದ್ಧೀಕರಣ ಯಂತ್ರ ಹಾಗೂ ಮಂಚಗಳನ್ನು ವಿತರಣೆ ಮಾಡಲಾಯಿತು. ಕಾರ್ಯನಿರ್ವಾಹಕ ಎಂಜಿನಿಯರ್ ರವಿಶಂಕರ್, ಪೌರಕಾರ್ಮಿಕ ಸಂಘದ ಮುಖಂಡರಾದ ಡಿ.ದುರ್ಗೇಶ್, ರಾಮಚಂದ್ರಪ್ಪ, ಮಹಾಂತೇಶ್, ತಿಮ್ಮಕ್ಕ, ಪಾರ್ವತಮ್ಮ, ಮೈಲಾರಪ್ಪ ಇದ್ದರು.</p>.<p class="Subhead">ಭಾವುಕರಾದ ಶಾಸಕ:ಮ್ಯಾನ್ಹೋಲ್ಗೆ ಬಿದ್ದು ಮೃತಪಡುವ ಪೌರಕಾರ್ಮಿಕರ ಕುರಿತು ಮಾತನಾಡುವ ವೇಳೆ ಶಾಸಕ ತಿಪ್ಪಾರೆಡ್ಡಿ ಭಾವುಕರಾದರು.</p>.<p>‘ಮ್ಯಾನ್ಹೋಲ್ ಶುಚಿಗೊಳಿಸುವ ವೇಳೆ ಮೃತಪಡುವವರ ಸಂಖ್ಯೆ ಹೆಚ್ಚಾಗಿದೆ. ಈಚೆಗೆ ಉತ್ತರ ಭಾರತದಲ್ಲಿ ಪೌರ್ಕಾರ್ಮಿಕರೊಬ್ಬರು ಹಗ್ಗ ಕಟ್ಟಿಕೊಂಡು ಮ್ಯಾನ್ಹೋಲ್ಗೆ ಇಳಿದರು. ಹಗ್ಗ ತುಂಡಾದ ಪರಿಣಾಮ ಮೃತಪಟ್ಟರು. ಮಾಧ್ಯಮಗಳಲ್ಲಿ ಇದನ್ನು ನೋಡಿದಾಗ ಕಣ್ಣಲ್ಲಿ ನೀರು ಬಂದಿತು..’ ಎಂದು ಭಾವುಕರಾಗಿ ಮಾತು ನಿಲ್ಲಿಸಿದರು.</p>.<p class="Subhead"><strong>ಬಾಕಿ ವೇತನಕ್ಕೆ ಮನವಿ:</strong>5 ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಸುವಂತೆ ಪೌರ ಕಾರ್ಮಿಕರು ಶಾಸಕ ತಿಪ್ಪಾರೆಡ್ಡಿ ಅವರನ್ನು ಮನವಿ ಮಾಡಿಕೊಂಡರು.</p>.<p>ಶಾಸಕರು ಭಾಷಣ ಮಾಡುತ್ತಿದ್ದಾಗ ಎದ್ದುನಿಂತ ಪೌರಕಾರ್ಮಿಕರೊಬ್ಬರು, ‘ಮೊದಲು ವೇತನ ಕೊಡಿಸಿ ಸ್ವಾಮಿ..’ ಎಂದು ಕೇಳಿದರು. ಇದಕ್ಕೆ ಮಹಿಳೆಯರೂ ಧ್ವನಿಗೂಡಿಸಿದರು. ‘ವೇತನ ನೀಡದಿದ್ದರೆ ಕುಟುಂಬ ನಿರ್ವಹಣೆ ಮಾಡುವುದು ಹೇಗೆ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>