ಎತ್ತಿನಹೊಳೆ, ಕೆಸಿ ವ್ಯಾಲಿ, ಎಚ್.ಎನ್.ವ್ಯಾಲಿ ಯೋಜನೆ ಇದುವರೆಗೂ ಅನುಷ್ಠಾನಗೊಂಡಿಲ್ಲ. ಸಂಸದ ಎಂ.ವೀರಪ್ಪ ಮೊಯಿಲಿ ಎರಡು ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಆರೇಳು ವರ್ಷಗಳಿಂದಲೂ ಹೇಳುತ್ತಲೇ ಇದ್ದಾರೆ. ಬೆಂಗಳೂರಿನ ತ್ಯಾಜ್ಯ ನೀರನ್ನು 2 ಹಂತಗಳಲ್ಲಿ ಶುದ್ಧೀಕರಿಸಿ, ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆಗೆ ಈ ಭಾಗದ ಜನರಿಂದ ವಿರೋಧ ವ್ಯಕ್ತವಾಗಿದೆ.