<p><strong>ಸಿರಿಗೆರೆ: </strong>ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಸಾಧನೆಗೆ ತೋರುವ ಗೌರವ. ಅವರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಮಂಜುನಾಥ್ ತಿಳಿಸಿದರು.</p>.<p>ಸಮೀಪದ ಕಡ್ಲೆಗುದ್ದು ಗ್ರಾಮದಲ್ಲಿನ ಆಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ದಿ. ಕೆಂಚಮ್ಮ ದಿ. ವೀರಬಸಪ್ಪ ಸ್ಮರಣಾರ್ಥವಾಗಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳೇ ಸಮಾಜದ ಆಸ್ತಿ ಎಂದು ಭಾವಿಸಿ ಸಂಗೀತ ಕಲಾವಿದರಾದ ಗುರುಮೂರ್ತಿಯವರು ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. </p>.<p>ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಲಿದೆ ಎಂದು ಡಯಟ್ನ ಹಿರಿಯ ಉಪನ್ಯಾಸಕ ನಾಗರಾಜ್ ಅಭಿಪ್ರಾಯಪಟ್ಟರು. </p>.<p>ಹಿರಿಯ ಸಂಗೀತ ಕಲಾವಿದ ಗುರುಮೂರ್ತಿ, ಮುಖ್ಯ ಶಿಕ್ಷಕ ಮಹೇಶ್ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಆನಂದ್ ರೆಡ್ಡಿ, ಅರುಣ್ ಕುಮಾರ್, ಮಜಾಹರ್ ಉಲ್ಲಾ, ವೀರೇಶ್, ಶಿಕ್ಷಕರಾದ ಮಂಜುನಾಥ್, ಮಂಜಪ್ಪ, ನಾಗರಾಜ್, ನಟರಾಜ್, ಕರಿಬಸಪ್ಪ ಹಾಗೂ ಮಹಾಂತೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ: </strong>ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಸಾಧನೆಗೆ ತೋರುವ ಗೌರವ. ಅವರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಮಂಜುನಾಥ್ ತಿಳಿಸಿದರು.</p>.<p>ಸಮೀಪದ ಕಡ್ಲೆಗುದ್ದು ಗ್ರಾಮದಲ್ಲಿನ ಆಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ದಿ. ಕೆಂಚಮ್ಮ ದಿ. ವೀರಬಸಪ್ಪ ಸ್ಮರಣಾರ್ಥವಾಗಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳೇ ಸಮಾಜದ ಆಸ್ತಿ ಎಂದು ಭಾವಿಸಿ ಸಂಗೀತ ಕಲಾವಿದರಾದ ಗುರುಮೂರ್ತಿಯವರು ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. </p>.<p>ಪ್ರತಿಭಾ ಪುರಸ್ಕಾರದಿಂದ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಲಿದೆ ಎಂದು ಡಯಟ್ನ ಹಿರಿಯ ಉಪನ್ಯಾಸಕ ನಾಗರಾಜ್ ಅಭಿಪ್ರಾಯಪಟ್ಟರು. </p>.<p>ಹಿರಿಯ ಸಂಗೀತ ಕಲಾವಿದ ಗುರುಮೂರ್ತಿ, ಮುಖ್ಯ ಶಿಕ್ಷಕ ಮಹೇಶ್ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯ ಆನಂದ್ ರೆಡ್ಡಿ, ಅರುಣ್ ಕುಮಾರ್, ಮಜಾಹರ್ ಉಲ್ಲಾ, ವೀರೇಶ್, ಶಿಕ್ಷಕರಾದ ಮಂಜುನಾಥ್, ಮಂಜಪ್ಪ, ನಾಗರಾಜ್, ನಟರಾಜ್, ಕರಿಬಸಪ್ಪ ಹಾಗೂ ಮಹಾಂತೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>