<p><strong>ಚಿತ್ರದುರ್ಗ:</strong> ತಾಲ್ಲೂಕಿನ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಗುರುವಾರ ಬೆಳಿಗ್ಗೆ ಇನ್ನೊವಾ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡು ಮೂಲದ ಮೂವರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ.</p>.ಅಪಘಾತ: ಗಾಯಾಳುಗಳ ಆಸ್ಪತ್ರೆಗೆ ತಲುಪಿಸಿದ ಶಾಸಕ ಎ.ಆರ್ ಕೃಷ್ಣಮೂರ್ತಿ .<p>ತಮಿಳುನಾಡು, ಕೃಷ್ಣಗಿರಿ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಅರ್ಜುನ್ (35), ಶರಣ್ (28), ಶ್ರೀಧರ್ (28) ಮೃತಪಟ್ಟವರು. ಐವರು ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಅಪಾಯದಿಂದ ಪಾರಾಗಿದ್ದಾರೆ.</p><p>9 ಜನರ ತಂಡ ಗೋವಾಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಅರ್ಜುನ್ ಕಾರು ಚಾಲನೆ ಮಾಡುತ್ತಿದ್ದರು. ಸೀಬಾರ ಬಳಿಯ ಗೋಶಾಲೆ ಮುಂಭಾಗದಲ್ಲೇ ಘಟನೆ ನಡೆದಿದೆ. ಟೈರ್ ಸ್ಫೋಟಗೊಂಡ ಕೂಡಲೇ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಉರುಳಿದೆ. ಈ ವೇಳೆ ಪಕ್ಕದ ರಸ್ತೆಯಲ್ಲಿ ಯಾವುದೇ ವಾಹನ ಬರುತ್ತಿರಲಿಲ್ಲ, ಹೀಗಾಗಿ ಹೆಚ್ಚಿನ ಅಪಾಯ ತಪ್ಪಿದೆ.</p>.ತಿರುಪತಿ ಬಳಿ ಅಪಘಾತ: ಹಾಸನದ ಸಬ್ಬನಹಳ್ಳಿಯ ಒಂದೇ ಕುಟುಂಬದ ಮೂವರು ಸಾವು .<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p> .ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಜೈಲಿನಿಂದ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ತಾಲ್ಲೂಕಿನ ಸೀಬಾರ ಬಳಿ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಗುರುವಾರ ಬೆಳಿಗ್ಗೆ ಇನ್ನೊವಾ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ತಮಿಳುನಾಡು ಮೂಲದ ಮೂವರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ.</p>.ಅಪಘಾತ: ಗಾಯಾಳುಗಳ ಆಸ್ಪತ್ರೆಗೆ ತಲುಪಿಸಿದ ಶಾಸಕ ಎ.ಆರ್ ಕೃಷ್ಣಮೂರ್ತಿ .<p>ತಮಿಳುನಾಡು, ಕೃಷ್ಣಗಿರಿ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಅರ್ಜುನ್ (35), ಶರಣ್ (28), ಶ್ರೀಧರ್ (28) ಮೃತಪಟ್ಟವರು. ಐವರು ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಅಪಾಯದಿಂದ ಪಾರಾಗಿದ್ದಾರೆ.</p><p>9 ಜನರ ತಂಡ ಗೋವಾಕ್ಕೆ ಪ್ರವಾಸಕ್ಕೆಂದು ತೆರಳುತ್ತಿದ್ದರು. ಅರ್ಜುನ್ ಕಾರು ಚಾಲನೆ ಮಾಡುತ್ತಿದ್ದರು. ಸೀಬಾರ ಬಳಿಯ ಗೋಶಾಲೆ ಮುಂಭಾಗದಲ್ಲೇ ಘಟನೆ ನಡೆದಿದೆ. ಟೈರ್ ಸ್ಫೋಟಗೊಂಡ ಕೂಡಲೇ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಉರುಳಿದೆ. ಈ ವೇಳೆ ಪಕ್ಕದ ರಸ್ತೆಯಲ್ಲಿ ಯಾವುದೇ ವಾಹನ ಬರುತ್ತಿರಲಿಲ್ಲ, ಹೀಗಾಗಿ ಹೆಚ್ಚಿನ ಅಪಾಯ ತಪ್ಪಿದೆ.</p>.ತಿರುಪತಿ ಬಳಿ ಅಪಘಾತ: ಹಾಸನದ ಸಬ್ಬನಹಳ್ಳಿಯ ಒಂದೇ ಕುಟುಂಬದ ಮೂವರು ಸಾವು .<p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p> .ಪೋಶೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ತಾಯಿ ಜೈಲಿನಿಂದ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>