‘ನೀರಾವರಿ, ಪರಿಸರ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾಡಿದ ಕಾರ್ಯ ಅನನ್ಯ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಹಲವು ಕೆರೆ ತುಂಬಿಸುವ ಯೋಜನೆಗಳು ಅನುಷ್ಠಾನಕ್ಕೆ ಬರುವಲ್ಲಿ ಸ್ವಾಮೀಜಿ ಅವರ ಶ್ರಮವಿದೆ. ರಾಜ್ಯದ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಲು ಸ್ವಾಮೀಜಿ ಸ್ಫೂರ್ತಿ ತುಂಬಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಎಲ್ಲ ಕೆರೆ ಮತ್ತು ಕಲ್ಯಾಣಿಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಈಶ್ವರಪ್ಪ ಘೋಷಣೆ ಮಾಡಿದರು.