<p><strong>ಸಿರಿಗೆರೆ</strong>: ವಿದ್ಯಾರ್ಥಿಗಳು ಮೊಬೈಲ್ ಆಟಗಳನ್ನು ಕಡಿಮೆ ಮಾಡಿ, ಕ್ರೀಡಾಂಗಣಕ್ಕೆ ಇಳಿದು ಆಟವಾಗಿ ತಮ್ಮೊಳಗಿನ ಪ್ರತಿಭೆ ಪ್ರದರ್ಶಿಸಬೇಕು ಎಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕಿವಿಮಾತು ಹೇಳಿದರು.</p>.<p>ಇಲ್ಲಿನ ಬಿ. ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ತರಳಬಾಳು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ತರಳಬಾಳು ಕ್ರೀಡಾಮೇಳ, ಕ್ರೀಡಾ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಶರೀರವನ್ನು ಸದೃಢಗೊಳಿಸುವುದರ ಜೊತೆಗೆ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಯೋಗ ಹಾಗೂ ಮಲ್ಲಕಂಬ ಪ್ರದರ್ಶನ ವೀಕ್ಷಿಸಿದಾಗ ಬಾಲ್ಯದ ನೆನಪು ಮರುಕಳಿಸಿದವು. ವಿದ್ಯಾರ್ಥಿಗಳ ಸಾಧನೆ ಅದ್ಭುತ ಎಂದು ಶ್ಲಾಘಿಸಿದರು.</p>.<p>ಅರ್ಜುನ ಪ್ರಶಸ್ತಿ ವಿಜೇತ ಹಾಗೂ ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಹೊನ್ನಪ್ಪ ಗೌಡ ಮಾತನಾಡಿ, ‘ಶಾಲಾ ಮೈದಾನದಲ್ಲಿ ಪಟ್ಟ ಪರಿಶ್ರಮವೇ ರಾಷ್ಟ್ರಮಟ್ಟದ ಸಾಧನೆ ಮಾಡಲು ಕಾರಣವಾಗಿದೆ’ ಎಂದರು.</p>.<p>ಕ್ರೀಡಾ ವಸ್ತುಪ್ರದರ್ಶನ ಹಾಗೂ ಕ್ರೀಡೆಗೆ ಸಂಬಂಧಿಸಿದ ರಂಗೋಲಿ ಪ್ರದರ್ಶನ ನಡೆಯಿತು. ಎನ್ಸಿಸಿ ಕೆಡೆಟ್ಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಭಿ ಎಲ್.ಹೆಚ್ ಹಾಗೂ ಚಂದನ ಎಲ್.ಕೆ ಕ್ರೀಡಾಜ್ಯೋತಿ ಬೆಳಗಿಸಿದರು.</p>.<p>ವಿದ್ಯಾಸಂಸ್ಥೆಯ ವಿಶೇಷಾಧಿಕಾರಿ ವೀರಣ್ಣ ಎಸ್.ಜತ್ತಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ ಮಾತನಾಡಿದರು. ನಿವೃತ್ತ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಿ.ಎಂ. ಚನ್ನಬಸಪ್ಪ, ಪ್ರಾದೇಶಿಕ ಅಧಿಕಾರಿ ಕೆ.ಇ. ಬಸವರಾಜಪ್ಪ, ಉಮೇಶ್, ಸೋಮಶೇಖರ್ ಇದ್ದರು.</p>.<p>ಪಥ ಸಂಚಲನ ಬಹುಮನ ವಿಜೇತರು: ವಿದ್ಯಾರ್ಥಿನಿಯರ ವಿಭಾಗ: ಶ್ರೀ ತ.ಜ. ನರ್ಸರಿ ಮತ್ತು ಪ್ರೈಮರಿ ಶಾಲೆ, ಸಿರಿಗೆರೆ (ಪ್ರಥಮ), ತರಳಬಾಳು ಅನುಭವ ಮಂಟಪ ಶಾಲೆ, ಚನ್ನಗಿರಿ (ದ್ವಿತೀಯ). ಬಾಲಕರ ವಿಭಾಗ: ಅನುಭವ ಮಂಟಪ, ದಾವಣಗೆರೆ (ಪ್ರಥಮ), ಶ್ರೀ ತ.ಜ. ನರ್ಸರಿ ಮತ್ತು ಪ್ರೈಮರಿ ಶಾಲೆ, ಸಿರಿಗೆರೆ (ದ್ವಿತೀಯ) </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ವಿದ್ಯಾರ್ಥಿಗಳು ಮೊಬೈಲ್ ಆಟಗಳನ್ನು ಕಡಿಮೆ ಮಾಡಿ, ಕ್ರೀಡಾಂಗಣಕ್ಕೆ ಇಳಿದು ಆಟವಾಗಿ ತಮ್ಮೊಳಗಿನ ಪ್ರತಿಭೆ ಪ್ರದರ್ಶಿಸಬೇಕು ಎಂದು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕಿವಿಮಾತು ಹೇಳಿದರು.</p>.<p>ಇಲ್ಲಿನ ಬಿ. ಲಿಂಗಯ್ಯ ವಸತಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ತರಳಬಾಳು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ತರಳಬಾಳು ಕ್ರೀಡಾಮೇಳ, ಕ್ರೀಡಾ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ಯಾರ್ಥಿಗಳು ಶರೀರವನ್ನು ಸದೃಢಗೊಳಿಸುವುದರ ಜೊತೆಗೆ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಯೋಗ ಹಾಗೂ ಮಲ್ಲಕಂಬ ಪ್ರದರ್ಶನ ವೀಕ್ಷಿಸಿದಾಗ ಬಾಲ್ಯದ ನೆನಪು ಮರುಕಳಿಸಿದವು. ವಿದ್ಯಾರ್ಥಿಗಳ ಸಾಧನೆ ಅದ್ಭುತ ಎಂದು ಶ್ಲಾಘಿಸಿದರು.</p>.<p>ಅರ್ಜುನ ಪ್ರಶಸ್ತಿ ವಿಜೇತ ಹಾಗೂ ಭಾರತ ಕಬಡ್ಡಿ ತಂಡದ ಮಾಜಿ ನಾಯಕ ಹೊನ್ನಪ್ಪ ಗೌಡ ಮಾತನಾಡಿ, ‘ಶಾಲಾ ಮೈದಾನದಲ್ಲಿ ಪಟ್ಟ ಪರಿಶ್ರಮವೇ ರಾಷ್ಟ್ರಮಟ್ಟದ ಸಾಧನೆ ಮಾಡಲು ಕಾರಣವಾಗಿದೆ’ ಎಂದರು.</p>.<p>ಕ್ರೀಡಾ ವಸ್ತುಪ್ರದರ್ಶನ ಹಾಗೂ ಕ್ರೀಡೆಗೆ ಸಂಬಂಧಿಸಿದ ರಂಗೋಲಿ ಪ್ರದರ್ಶನ ನಡೆಯಿತು. ಎನ್ಸಿಸಿ ಕೆಡೆಟ್ಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಭಿ ಎಲ್.ಹೆಚ್ ಹಾಗೂ ಚಂದನ ಎಲ್.ಕೆ ಕ್ರೀಡಾಜ್ಯೋತಿ ಬೆಳಗಿಸಿದರು.</p>.<p>ವಿದ್ಯಾಸಂಸ್ಥೆಯ ವಿಶೇಷಾಧಿಕಾರಿ ವೀರಣ್ಣ ಎಸ್.ಜತ್ತಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ ಮಾತನಾಡಿದರು. ನಿವೃತ್ತ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಿ.ಎಂ. ಚನ್ನಬಸಪ್ಪ, ಪ್ರಾದೇಶಿಕ ಅಧಿಕಾರಿ ಕೆ.ಇ. ಬಸವರಾಜಪ್ಪ, ಉಮೇಶ್, ಸೋಮಶೇಖರ್ ಇದ್ದರು.</p>.<p>ಪಥ ಸಂಚಲನ ಬಹುಮನ ವಿಜೇತರು: ವಿದ್ಯಾರ್ಥಿನಿಯರ ವಿಭಾಗ: ಶ್ರೀ ತ.ಜ. ನರ್ಸರಿ ಮತ್ತು ಪ್ರೈಮರಿ ಶಾಲೆ, ಸಿರಿಗೆರೆ (ಪ್ರಥಮ), ತರಳಬಾಳು ಅನುಭವ ಮಂಟಪ ಶಾಲೆ, ಚನ್ನಗಿರಿ (ದ್ವಿತೀಯ). ಬಾಲಕರ ವಿಭಾಗ: ಅನುಭವ ಮಂಟಪ, ದಾವಣಗೆರೆ (ಪ್ರಥಮ), ಶ್ರೀ ತ.ಜ. ನರ್ಸರಿ ಮತ್ತು ಪ್ರೈಮರಿ ಶಾಲೆ, ಸಿರಿಗೆರೆ (ದ್ವಿತೀಯ) </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>