<p><strong>ಸಿರಿಗೆರೆ:</strong> ಹೆಣ್ಣುಮಕ್ಕಳು ಆಸ್ತಿಯಲ್ಲಿನ ಹಕ್ಕು ಕೇಳಬಾರದು ಎಂದು ತರಳಬಾಳು ಮಠದ ಶ್ರೀ ಶಿವಮೂರ್ತಿ ಸ್ವಾಮೀಜಿ ಕಿವಿಮಾತು ಹೇಳಿದ್ದಾರೆ.</p>.<p>ಸಿರಿಗೆರೆಯ ಸದ್ಧರ್ಮ ನ್ಯಾಯಪೀಠದ ಸಭಾಂಗಣದಲ್ಲಿ ಭದ್ರಾವತಿಯ ತರಳಬಾಳು ಹುಣ್ಣಿಮೆ ಮಹೋತ್ಸವದ ಯಶಸ್ಸಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದಿಸಲು ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.</p>.<p>ಆಸ್ತಿ ಮೇಲೆ ಹಕ್ಕು ಸಾಧಿಸುವ ಸಲುವಾಗಿ ಹೆಣ್ಣುಮಕ್ಕಳು ನ್ಯಾಯಾಲಯದ ಮೆಟ್ಟಿಲೇರುವ ಮನೋಭಾವ ನಿಲ್ಲಬೇಕು. ಕಷ್ಟಪಟ್ಟು ಶಿಕ್ಷಣ ಕೊಡಿಸಿ, ಸಾಲ ಮಾಡಿ ಮದುವೆ ಮಾಡಿಸಿ ಹೆಣ್ಣುಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವ ಪೋಷಕರಿಗೆ ಗೌರವ ನೀಡಬೇಕು. ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳಬಾರದು. ತವರು ಮನೆಯ ಗೌರವ ಉಳಿಸುವುದೇ ನಿಜವಾದ ಧರ್ಮ. ಎಲ್ಲರೂ ಕೌಟುಂಬಿಕ ಮೌಲ್ಯಗಳನ್ನು ಅರಿತು ಬದುಕು ಸಾಗಿಸಬೇಕು ಎಂದರು.</p>.<p>ರೈತರ ಹಿತಕ್ಕೆಂದು ಜಾರಿಗೊಳಿಸಿರುವ ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಹಲವು ದೋಷಗಳಿಗೆ. ೭ ವರ್ಷದ ಸರಾಸರಿ ಬೆಳೆಯನ್ನು ಲೆಕ್ಕಕ್ಕೆ ತೆಗೆದುಕೊಂಡು ಬರ ಪರಿಹಾರ ನೀಡುವ ಪದ್ಧತಿ ಸರಿಯಲ್ಲ. ಆಯಾಯಾ ವರ್ಷದ ನಷ್ಟಗಳನ್ನೇ ಗಣನೆಗೆ ತೆಗೆದುಕೊಂಡು ರೈತರಿಗೆ ಪರಿಹಾರ ನೀಡಬೇಕು. ರೈತರ ಬಹುಕನಸಿನ ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿ ಕುಂಟುತ್ತಾ ಸಾಗಿದೆ. ಇವುಗಳ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚಿಸಲು ದೆಹಲಿಗೆ ತೆರಳುವ ಉದ್ದೇಶ ಇದೆ ಎಂದು ಶ್ರೀಗಳು ಪ್ರಕಟಿಸಿದರು.</p>.<p>ದಾವಣಗೆರೆ – ಬೆಂಗಳೂರು ನೇರ ರೈಲು ಮಾರ್ಗ ನಿರ್ಮಿಸುವ ವೇಳೆ ಸಿರಿಗೆರೆಯ ಸರ್ಕಲ್ನಲ್ಲಿ ನಿಲ್ದಾಣ ನಿರ್ಮಾಣ ಆಗಬೇಕೆನ್ನುವುದು ನಮ್ಮ ಅಪೇಕ್ಷೆ. ಈ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಅವರ ಜೊತೆ ಮಾತನಾಡುತ್ತೇವೆ. ಜೊತೆಗೆ ಭದ್ರಾವತಿಯ ಉಕ್ಕು ಕಾರ್ಖಾನೆಯನ್ನು ಪುನರಾರಂಭಿಸುವ ಅಗತ್ಯವಿದೆ ಎಂದು ಶ್ರೀಗಳು ಪ್ರತಿಪಾದಿಸಿದರು.</p>.<p>ಗರ್ಭಕೋಶದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ತಡೆಗಟ್ಟುವ ಲಸಿಕೆಗಳನ್ನು ಸಂಸ್ಥೆಯ ಶಾಲೆಗಳಲ್ಲಿ ಓದುತ್ತಿರುವ ೧೪ ವರ್ಷದ ಹೆಣ್ಣುಮಕ್ಕಳಿಗೆ ನೀಡುವ ಉದ್ದೇಶವನ್ನು ಸಂಸ್ಥೆಯು ಹೊಂದಿತ್ತು. ಅದಕ್ಕಾಗಿ ೨ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಆದರೆ ಇಡೀ ದೇಶದಾದ್ಯಂತ ಇರುವ ಎಲ್ಲ ಹೆಣ್ಣುಮಕ್ಕಳಿಗೆ ಪ್ರಧಾನಿ ಮೋದಿಯವರು ಈ ಲಸಿಕೆ ನೀಡಲು ಮುಂದಾಗಿರುವುದು ನಮಗೆ ಹೆಮ್ಮೆ ತಂದಿದೆ ಎಂದರು.</p>.<p>ತರಳಬಾಳು ಹುಣ್ಣಿಮೆ ಯಶಸ್ವಿಯಾಗಲು ಮಠದ ಭಕ್ತರು, ಕಾರ್ಯಕರ್ತರು ಸಂಸ್ಥೆಯ ನೌಕರರು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಅವರ ಸೇವೆ ಸ್ತುತ್ಯಾರ್ಹ ಎಂದರು.</p>.<p>ಆಡಳಿತಾಧಿಕಾರಿ ಡಾ. ಎಚ್. ವಿ. ವಾಮದೇವಪ್ಪ ಮಾತನಾಡಿ ಸಂಸ್ಥೆಯ ಶಿಕ್ಷಕರು ಶ್ರದ್ಧೆಯಿಂದ ದುಡಿದದ್ದರ ಪರಿಣಾಮ ಮಹೋತ್ಸವ ವಿಜೃಂಬಣೆಯಿಂದ ನಡೆಯಿತು ಎಂದರು.</p>.<p>ಕಾರ್ಯನಿರ್ವಹಣಾಧಿಕಾರಿ ವೀರಣ್ಣ ಎಸ್. ಜತ್ತಿ ಮಾತನಾಡಿ ದೈಹಿಕ ಶಿಕ್ಷಣ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತೋರಿದ ಸೃಜನಾತ್ಮಕತೆ ಮತ್ತು ಸಂಶೋಧನಾ ಮನೋಭಾವ ಶ್ಲಾಘನೀಯವಾಗಿದೆ. ಸರ್ವಧರ್ಮಗಳ ಚಿಹ್ನೆಗಳ ಹೆಸರುಗಳನ್ನು ಪ್ರದರ್ಶಿಸುವ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಈ ಸಂದರ್ಭದಲ್ಲಿ ಭದ್ರಾವತಿ ತರಳಬಾಳು ಹುಣ್ಣಿಮೆಯ ಯಶಸ್ಸಿಗೆ ಶ್ರಮಿಸಿದ ಶ್ರೀಮಠದ ಎಲ್ಲಾ ನೌಕರರಿಗೆ ನೆನಪಿನ ಕಾಣಿಕೆಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್. ಮರುಳಸಿದ್ದಯ್ಯ, ಕಚೇರಿಯ ಮುರುಗೇಂದ್ರಯ್ಯ, ಶ್ರೀಸಂಸ್ಥೆಯ ಶಾಲಾ-ಕಾಲೇಜುಗಳ ಸಿಬ್ಬಂದಿ, ತರಳಬಾಳು ಹುಣ್ಣಿಮೆ ಸಮಿತಿ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<p><strong>ಕೈಗಾರಿಕೆಗೆ ಅನ್ನದಾತರ ಭೂಮಿ ಬೇಡ: ಶ್ರೀ</strong><br> </p><p>ಸಿರಿಗೆರೆ: ಕೈಗಾರಿಕಾ ವಲಯ ವಿಸ್ತರಿಸಲು ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದರು.</p>.<p>ಖಾಸಗಿ ಉದ್ದಿಮೆದಾರರು ರೈತರಿಗೆ ಆಸೆ ಹುಟ್ಟಿಸಿ ಭೂಮಿ ಖರೀದಿಸುವ ಪದ್ಧತಿಗೆ ತಿಲಾಂಜಲಿ ಹೇಳಬೇಕು. ಉದ್ದಿಮೆಗೆ ವಶಪಡಿಸಿಕೊಳ್ಳುವ ಭೂಮಿಯ ಹಕ್ಕು ರೈತನಲ್ಲಿಯೇ ಉಳಿಯುವಂತಾಗಬೇಕು ಎಂದು ಶ್ರೀಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ಹೆಣ್ಣುಮಕ್ಕಳು ಆಸ್ತಿಯಲ್ಲಿನ ಹಕ್ಕು ಕೇಳಬಾರದು ಎಂದು ತರಳಬಾಳು ಮಠದ ಶ್ರೀ ಶಿವಮೂರ್ತಿ ಸ್ವಾಮೀಜಿ ಕಿವಿಮಾತು ಹೇಳಿದ್ದಾರೆ.</p>.<p>ಸಿರಿಗೆರೆಯ ಸದ್ಧರ್ಮ ನ್ಯಾಯಪೀಠದ ಸಭಾಂಗಣದಲ್ಲಿ ಭದ್ರಾವತಿಯ ತರಳಬಾಳು ಹುಣ್ಣಿಮೆ ಮಹೋತ್ಸವದ ಯಶಸ್ಸಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದಿಸಲು ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.</p>.<p>ಆಸ್ತಿ ಮೇಲೆ ಹಕ್ಕು ಸಾಧಿಸುವ ಸಲುವಾಗಿ ಹೆಣ್ಣುಮಕ್ಕಳು ನ್ಯಾಯಾಲಯದ ಮೆಟ್ಟಿಲೇರುವ ಮನೋಭಾವ ನಿಲ್ಲಬೇಕು. ಕಷ್ಟಪಟ್ಟು ಶಿಕ್ಷಣ ಕೊಡಿಸಿ, ಸಾಲ ಮಾಡಿ ಮದುವೆ ಮಾಡಿಸಿ ಹೆಣ್ಣುಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವ ಪೋಷಕರಿಗೆ ಗೌರವ ನೀಡಬೇಕು. ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳಬಾರದು. ತವರು ಮನೆಯ ಗೌರವ ಉಳಿಸುವುದೇ ನಿಜವಾದ ಧರ್ಮ. ಎಲ್ಲರೂ ಕೌಟುಂಬಿಕ ಮೌಲ್ಯಗಳನ್ನು ಅರಿತು ಬದುಕು ಸಾಗಿಸಬೇಕು ಎಂದರು.</p>.<p>ರೈತರ ಹಿತಕ್ಕೆಂದು ಜಾರಿಗೊಳಿಸಿರುವ ಪ್ರಧಾನಮಂತ್ರಿ ಫಸಲು ಭಿಮಾ ಯೋಜನೆಯಲ್ಲಿ ಹಲವು ದೋಷಗಳಿಗೆ. ೭ ವರ್ಷದ ಸರಾಸರಿ ಬೆಳೆಯನ್ನು ಲೆಕ್ಕಕ್ಕೆ ತೆಗೆದುಕೊಂಡು ಬರ ಪರಿಹಾರ ನೀಡುವ ಪದ್ಧತಿ ಸರಿಯಲ್ಲ. ಆಯಾಯಾ ವರ್ಷದ ನಷ್ಟಗಳನ್ನೇ ಗಣನೆಗೆ ತೆಗೆದುಕೊಂಡು ರೈತರಿಗೆ ಪರಿಹಾರ ನೀಡಬೇಕು. ರೈತರ ಬಹುಕನಸಿನ ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿ ಕುಂಟುತ್ತಾ ಸಾಗಿದೆ. ಇವುಗಳ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚಿಸಲು ದೆಹಲಿಗೆ ತೆರಳುವ ಉದ್ದೇಶ ಇದೆ ಎಂದು ಶ್ರೀಗಳು ಪ್ರಕಟಿಸಿದರು.</p>.<p>ದಾವಣಗೆರೆ – ಬೆಂಗಳೂರು ನೇರ ರೈಲು ಮಾರ್ಗ ನಿರ್ಮಿಸುವ ವೇಳೆ ಸಿರಿಗೆರೆಯ ಸರ್ಕಲ್ನಲ್ಲಿ ನಿಲ್ದಾಣ ನಿರ್ಮಾಣ ಆಗಬೇಕೆನ್ನುವುದು ನಮ್ಮ ಅಪೇಕ್ಷೆ. ಈ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಅವರ ಜೊತೆ ಮಾತನಾಡುತ್ತೇವೆ. ಜೊತೆಗೆ ಭದ್ರಾವತಿಯ ಉಕ್ಕು ಕಾರ್ಖಾನೆಯನ್ನು ಪುನರಾರಂಭಿಸುವ ಅಗತ್ಯವಿದೆ ಎಂದು ಶ್ರೀಗಳು ಪ್ರತಿಪಾದಿಸಿದರು.</p>.<p>ಗರ್ಭಕೋಶದ ಕ್ಯಾನ್ಸರ್ ಹಾಗೂ ಸ್ತನ ಕ್ಯಾನ್ಸರ್ ತಡೆಗಟ್ಟುವ ಲಸಿಕೆಗಳನ್ನು ಸಂಸ್ಥೆಯ ಶಾಲೆಗಳಲ್ಲಿ ಓದುತ್ತಿರುವ ೧೪ ವರ್ಷದ ಹೆಣ್ಣುಮಕ್ಕಳಿಗೆ ನೀಡುವ ಉದ್ದೇಶವನ್ನು ಸಂಸ್ಥೆಯು ಹೊಂದಿತ್ತು. ಅದಕ್ಕಾಗಿ ೨ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಆದರೆ ಇಡೀ ದೇಶದಾದ್ಯಂತ ಇರುವ ಎಲ್ಲ ಹೆಣ್ಣುಮಕ್ಕಳಿಗೆ ಪ್ರಧಾನಿ ಮೋದಿಯವರು ಈ ಲಸಿಕೆ ನೀಡಲು ಮುಂದಾಗಿರುವುದು ನಮಗೆ ಹೆಮ್ಮೆ ತಂದಿದೆ ಎಂದರು.</p>.<p>ತರಳಬಾಳು ಹುಣ್ಣಿಮೆ ಯಶಸ್ವಿಯಾಗಲು ಮಠದ ಭಕ್ತರು, ಕಾರ್ಯಕರ್ತರು ಸಂಸ್ಥೆಯ ನೌಕರರು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ಅವರ ಸೇವೆ ಸ್ತುತ್ಯಾರ್ಹ ಎಂದರು.</p>.<p>ಆಡಳಿತಾಧಿಕಾರಿ ಡಾ. ಎಚ್. ವಿ. ವಾಮದೇವಪ್ಪ ಮಾತನಾಡಿ ಸಂಸ್ಥೆಯ ಶಿಕ್ಷಕರು ಶ್ರದ್ಧೆಯಿಂದ ದುಡಿದದ್ದರ ಪರಿಣಾಮ ಮಹೋತ್ಸವ ವಿಜೃಂಬಣೆಯಿಂದ ನಡೆಯಿತು ಎಂದರು.</p>.<p>ಕಾರ್ಯನಿರ್ವಹಣಾಧಿಕಾರಿ ವೀರಣ್ಣ ಎಸ್. ಜತ್ತಿ ಮಾತನಾಡಿ ದೈಹಿಕ ಶಿಕ್ಷಣ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತೋರಿದ ಸೃಜನಾತ್ಮಕತೆ ಮತ್ತು ಸಂಶೋಧನಾ ಮನೋಭಾವ ಶ್ಲಾಘನೀಯವಾಗಿದೆ. ಸರ್ವಧರ್ಮಗಳ ಚಿಹ್ನೆಗಳ ಹೆಸರುಗಳನ್ನು ಪ್ರದರ್ಶಿಸುವ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಈ ಸಂದರ್ಭದಲ್ಲಿ ಭದ್ರಾವತಿ ತರಳಬಾಳು ಹುಣ್ಣಿಮೆಯ ಯಶಸ್ಸಿಗೆ ಶ್ರಮಿಸಿದ ಶ್ರೀಮಠದ ಎಲ್ಲಾ ನೌಕರರಿಗೆ ನೆನಪಿನ ಕಾಣಿಕೆಗಳನ್ನು ವಿತರಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್. ಮರುಳಸಿದ್ದಯ್ಯ, ಕಚೇರಿಯ ಮುರುಗೇಂದ್ರಯ್ಯ, ಶ್ರೀಸಂಸ್ಥೆಯ ಶಾಲಾ-ಕಾಲೇಜುಗಳ ಸಿಬ್ಬಂದಿ, ತರಳಬಾಳು ಹುಣ್ಣಿಮೆ ಸಮಿತಿ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.</p>.<p><strong>ಕೈಗಾರಿಕೆಗೆ ಅನ್ನದಾತರ ಭೂಮಿ ಬೇಡ: ಶ್ರೀ</strong><br> </p><p>ಸಿರಿಗೆರೆ: ಕೈಗಾರಿಕಾ ವಲಯ ವಿಸ್ತರಿಸಲು ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದರು.</p>.<p>ಖಾಸಗಿ ಉದ್ದಿಮೆದಾರರು ರೈತರಿಗೆ ಆಸೆ ಹುಟ್ಟಿಸಿ ಭೂಮಿ ಖರೀದಿಸುವ ಪದ್ಧತಿಗೆ ತಿಲಾಂಜಲಿ ಹೇಳಬೇಕು. ಉದ್ದಿಮೆಗೆ ವಶಪಡಿಸಿಕೊಳ್ಳುವ ಭೂಮಿಯ ಹಕ್ಕು ರೈತನಲ್ಲಿಯೇ ಉಳಿಯುವಂತಾಗಬೇಕು ಎಂದು ಶ್ರೀಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>