‘ಶಿಕ್ಷಕರಿಲ್ಲದೇ ಯಾವುದೇ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಗುರುವಿನ ಮಾರ್ಗದರ್ಶನ ಎಲ್ಲಾ ಸತ್ಕಾರ್ಯಗಳಿಗೂ ಅಗತ್ಯವಿದೆ. ಆದ್ದರಿಂದ ಪ್ರತಿ ವಿದ್ಯಾರ್ಥಿಯ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ’ ಎಂದು ಸಲಹೆ ನೀಡಿದರು.
‘ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಬಾರದು ಎಂಬ ಸದುದ್ದೇಶದಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆಯೂ ಸರ್ಕಾರ ಅನೇಕ ಕಾರ್ಯಕ್ರಮ, ಯೋಜನೆ ಜಾರಿಗೊಳಿಸುವ ಮೂಲಕ ವಿನೂತನವಾಗಿ ಶಿಕ್ಷಣ ನೀಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ’ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ‘ವಿಶ್ವದಲ್ಲೇ ಗುರುವಿಗೆ ಮಹತ್ತರವಾದ ಸ್ಥಾನ ನೀಡಲಾಗಿದೆ. ಕೊರೊನಾ ಸಂದರ್ಭದಲ್ಲೂ ಶಿಕ್ಷಕರು ಮನೆಮನೆ ಸಮೀಕ್ಷೆ, ಜನಗಣತಿ, ಮತಪಟ್ಟಿ ಪರಿಷ್ಕರಣೆ ಸೇರಿ ಅನೇಕ ಕೆಲಸಗಳಲ್ಲಿ ತೊಡಗಿ, ಕೊರೊನಾ ವಾರಿಯರ್ಗಳಾಗಿ ಸೇವೆ ಸಲ್ಲಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.