<p><strong>ಮೊಳಕಾಲ್ಮುರು</strong>: ಧಾರ್ಮಿಕ ಆಚರಣೆಗಳನ್ನು ಜನರಿಗೆ ಆರ್ಥಿಕವಾಗಿ ಹೊರೆಯಾಗದಂತೆ ನಡೆಸಬೇಕು ಎಂದು ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ್ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ತಾಲ್ಲೂಕಿನ ಚಿಕ್ಕೋಬನಹಳ್ಳಿಯಲ್ಲಿ ಭಾನುವಾರ ನಡೆದ ಕೆಂಚೋಬಳೇಶ್ವರ ಸ್ವಾಮಿ ನೂತನ ದೇವಸ್ಥಾನ ಲೋಕಾರ್ಪಣೆ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ದಲಿತ ಸಮುದಾಯಕ್ಕೆ ಸರ್ಕಾರ ಆರ್ಥಿಕ, ಸಾಮಾಜಿಕವಾಗಿ ಸಾಕಷ್ಟು ಪ್ರೋತ್ಸಾಹ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳದ ಕಾರಣ ಹಿಂದುಳಿದಿದೆ. ಬೇರೆ ಸಮುದಾಯಗಳು ಶಿಕ್ಷಣದಲ್ಲಿ ಮುಖ್ಯವಾಹಿನಿಗೆ ಬರುವ ಜೊತೆಗೆ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಹೊಂದುತ್ತಿವೆ. ಇದನ್ನು ಅರ್ಥ ಮಾಡಿಕೊಂಡು ಮುಖ್ಯವಾಹಿನಿಗೆ ಬರಬೇಕು. ದುಶ್ಚಟಗಳಿಂದ ದೂರ ಉಳಿಯಬೇಕು ಎಂದು ಹೇಳಿದರು.</p>.<p>ಸಿದ್ದಯ್ಯನಕೋಟೆ ಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ದೇಶದ ಪ್ರಗತಿಗೆ ಧರ್ಮವು ಮುಖ್ಯ ಅಸ್ತ್ರವಾಗಿದೆ. ಹಾಗೆಯೇ ಶಿಕ್ಷಣವು ಮನುಷ್ಯನ ವೈಯಕ್ತಿಕ ಅಭಿವೃದ್ಧಿಗೆ ಬುನಾದಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಅದ್ಯತೆ ನೀಡಬೇಕು ಎಂದು ಹೇಳಿದರು.</p>.<p>ಚಿಕ್ಕುಂತಿ ಬೋರೇಶ್ ಗುರೂಜಿ ಆಶ್ರಮದ ಶಿವಮೂರ್ತಿ ಸ್ವಾಮೀಜಿ ಮಾತನಾಡಿದರು.</p>.<p>ಗ್ಯಾರಂಟಿ ಯೋಜನೆ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ವೈ.ಪಿ. ಚೇತನ್, ಬಿಡಿಸಿಸಿ ಅಧ್ಯಕ್ಷ ಗುಂಡುಮಣುಗು ತಿಪ್ಪೇಸ್ವಾಮಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಿ.ಬಿ.ಕೊಲ್ಲಪ್ಪ, ಮುಖಂಡರಾದ ಎಚ್.ಗಂಗಣ್ಣ, ಮಹಾಂತೇಶ್, ಹೂಡೇಂ ಕೃಷ್ಣಮೂರ್ತಿ, ಡಿ.ಒ.ಮೊರಾರ್ಜಿ, ಡಿ.ಒ.ಕರಿಬಸಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕುಂತಿ ಓಬಣ್ಣ, ಪತ್ರಕರ್ತದ ಸಂಘದ ಅಧ್ಯಕ್ಷ ಜಿ.ಬಿ. ಮಲ್ಲಿಕಾರ್ಜುನ್, ಶಿಕ್ಷಕ ವಸಂತ್ ಕುಮಾರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಧಾರ್ಮಿಕ ಆಚರಣೆಗಳನ್ನು ಜನರಿಗೆ ಆರ್ಥಿಕವಾಗಿ ಹೊರೆಯಾಗದಂತೆ ನಡೆಸಬೇಕು ಎಂದು ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ್ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.</p>.<p>ತಾಲ್ಲೂಕಿನ ಚಿಕ್ಕೋಬನಹಳ್ಳಿಯಲ್ಲಿ ಭಾನುವಾರ ನಡೆದ ಕೆಂಚೋಬಳೇಶ್ವರ ಸ್ವಾಮಿ ನೂತನ ದೇವಸ್ಥಾನ ಲೋಕಾರ್ಪಣೆ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ದಲಿತ ಸಮುದಾಯಕ್ಕೆ ಸರ್ಕಾರ ಆರ್ಥಿಕ, ಸಾಮಾಜಿಕವಾಗಿ ಸಾಕಷ್ಟು ಪ್ರೋತ್ಸಾಹ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳದ ಕಾರಣ ಹಿಂದುಳಿದಿದೆ. ಬೇರೆ ಸಮುದಾಯಗಳು ಶಿಕ್ಷಣದಲ್ಲಿ ಮುಖ್ಯವಾಹಿನಿಗೆ ಬರುವ ಜೊತೆಗೆ ಎಲ್ಲಾ ರಂಗದಲ್ಲೂ ಅಭಿವೃದ್ಧಿ ಹೊಂದುತ್ತಿವೆ. ಇದನ್ನು ಅರ್ಥ ಮಾಡಿಕೊಂಡು ಮುಖ್ಯವಾಹಿನಿಗೆ ಬರಬೇಕು. ದುಶ್ಚಟಗಳಿಂದ ದೂರ ಉಳಿಯಬೇಕು ಎಂದು ಹೇಳಿದರು.</p>.<p>ಸಿದ್ದಯ್ಯನಕೋಟೆ ಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ದೇಶದ ಪ್ರಗತಿಗೆ ಧರ್ಮವು ಮುಖ್ಯ ಅಸ್ತ್ರವಾಗಿದೆ. ಹಾಗೆಯೇ ಶಿಕ್ಷಣವು ಮನುಷ್ಯನ ವೈಯಕ್ತಿಕ ಅಭಿವೃದ್ಧಿಗೆ ಬುನಾದಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಅದ್ಯತೆ ನೀಡಬೇಕು ಎಂದು ಹೇಳಿದರು.</p>.<p>ಚಿಕ್ಕುಂತಿ ಬೋರೇಶ್ ಗುರೂಜಿ ಆಶ್ರಮದ ಶಿವಮೂರ್ತಿ ಸ್ವಾಮೀಜಿ ಮಾತನಾಡಿದರು.</p>.<p>ಗ್ಯಾರಂಟಿ ಯೋಜನೆ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ವೈ.ಪಿ. ಚೇತನ್, ಬಿಡಿಸಿಸಿ ಅಧ್ಯಕ್ಷ ಗುಂಡುಮಣುಗು ತಿಪ್ಪೇಸ್ವಾಮಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಿ.ಬಿ.ಕೊಲ್ಲಪ್ಪ, ಮುಖಂಡರಾದ ಎಚ್.ಗಂಗಣ್ಣ, ಮಹಾಂತೇಶ್, ಹೂಡೇಂ ಕೃಷ್ಣಮೂರ್ತಿ, ಡಿ.ಒ.ಮೊರಾರ್ಜಿ, ಡಿ.ಒ.ಕರಿಬಸಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕುಂತಿ ಓಬಣ್ಣ, ಪತ್ರಕರ್ತದ ಸಂಘದ ಅಧ್ಯಕ್ಷ ಜಿ.ಬಿ. ಮಲ್ಲಿಕಾರ್ಜುನ್, ಶಿಕ್ಷಕ ವಸಂತ್ ಕುಮಾರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>