<p><strong>ಹೊಸದುರ್ಗ</strong>: ತಾಲ್ಲೂಕಿನ ಮಾಡದಕೆರೆ ಹೋಬಳಿಯ ಸಣ್ಣಕಿಟ್ಟದಹಳ್ಳಿ ಗ್ರಾಮದ ಹೊರವಲಯದ ನಿಂಗಪ್ಪನ ಗುಡ್ಡದಲ್ಲಿರುವ ಈಶ್ವರಸ್ವಾಮಿ ದೇವಸ್ಥಾನದಲ್ಲಿ ನಿಧಿ ಆಸೆಗಾಗಿ ದುಷ್ಕರ್ಮಿಗಳು ಶಿವಲಿಂಗವನ್ನೇ ಕಿತ್ತೊಗೆದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಗೊತ್ತಾಗಿದೆ. </p>.<p>ನಿಂಗಪ್ಪನ ಗುಡ್ಡದಲ್ಲಿರುವ ಈಶ್ವರ ಸ್ವಾಮಿ ಸುತ್ತಮುತ್ತಲ ಗ್ರಾಮಗಳ ಭಕ್ತರ ಆರಾಧ್ಯ ದೈವವಾಗಿದ್ದು, ವಿಶೇಷ ದಿನಗಳಲ್ಲಿ ದೇವಾಲಯದಲ್ಲಿ ಭಕ್ತರಿಂದ ಪೂಜಾ ಕಾರ್ಯಗಳು, ಅನ್ನಸಂತರ್ಪಣೆ ನಡೆಯುತ್ತದೆ. </p>.<p>ಕಿಡಿಗೇಡಿಗಳು ನಿಧಿ ಆಸೆಗಾಗಿ ದೇವಾಲಯದ ಬಾಗಿಲು ತೆರೆದು ಗರ್ಭಗುಡಿಯಲ್ಲಿದ್ದ ಬಸವಣ್ಣ ದೇವರ ಪ್ರತಿಮೆ, ಈಶ್ವರಸ್ವಾಮಿಯ ಶಿವಲಿಂಗವನ್ನು ಕಿತ್ತು ಪಕ್ಕಕ್ಕೆ ಸರಿಸಿ, 3-4 ಅಡಿ ಗುಂಡಿ ತೆಗೆದಿದ್ದಾರೆ. ಬೆಳಿಗ್ಗೆ ಅರ್ಚಕರು ದೇವಾಲಯದ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ತಾಲ್ಲೂಕಿನ ಮಾಡದಕೆರೆ ಹೋಬಳಿಯ ಸಣ್ಣಕಿಟ್ಟದಹಳ್ಳಿ ಗ್ರಾಮದ ಹೊರವಲಯದ ನಿಂಗಪ್ಪನ ಗುಡ್ಡದಲ್ಲಿರುವ ಈಶ್ವರಸ್ವಾಮಿ ದೇವಸ್ಥಾನದಲ್ಲಿ ನಿಧಿ ಆಸೆಗಾಗಿ ದುಷ್ಕರ್ಮಿಗಳು ಶಿವಲಿಂಗವನ್ನೇ ಕಿತ್ತೊಗೆದಿರುವ ಘಟನೆ ಶುಕ್ರವಾರ ಬೆಳಿಗ್ಗೆ ಗೊತ್ತಾಗಿದೆ. </p>.<p>ನಿಂಗಪ್ಪನ ಗುಡ್ಡದಲ್ಲಿರುವ ಈಶ್ವರ ಸ್ವಾಮಿ ಸುತ್ತಮುತ್ತಲ ಗ್ರಾಮಗಳ ಭಕ್ತರ ಆರಾಧ್ಯ ದೈವವಾಗಿದ್ದು, ವಿಶೇಷ ದಿನಗಳಲ್ಲಿ ದೇವಾಲಯದಲ್ಲಿ ಭಕ್ತರಿಂದ ಪೂಜಾ ಕಾರ್ಯಗಳು, ಅನ್ನಸಂತರ್ಪಣೆ ನಡೆಯುತ್ತದೆ. </p>.<p>ಕಿಡಿಗೇಡಿಗಳು ನಿಧಿ ಆಸೆಗಾಗಿ ದೇವಾಲಯದ ಬಾಗಿಲು ತೆರೆದು ಗರ್ಭಗುಡಿಯಲ್ಲಿದ್ದ ಬಸವಣ್ಣ ದೇವರ ಪ್ರತಿಮೆ, ಈಶ್ವರಸ್ವಾಮಿಯ ಶಿವಲಿಂಗವನ್ನು ಕಿತ್ತು ಪಕ್ಕಕ್ಕೆ ಸರಿಸಿ, 3-4 ಅಡಿ ಗುಂಡಿ ತೆಗೆದಿದ್ದಾರೆ. ಬೆಳಿಗ್ಗೆ ಅರ್ಚಕರು ದೇವಾಲಯದ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>