ಚಿತ್ರದುರ್ಗ: ಜಾತ್ರೆಗೆ ತಂದಿದ್ದ ದೇವರ ಕೋಣ ತಿವಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಮದಕರಿಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ನಿವಾಸಿ ಕೊಲ್ಲರಪ್ಪ (65) ಮೃತರು. ಗ್ರಾಮದೇವತೆ ಕೊಲ್ಲಾಪುರದಮ್ಮ ಜಾತ್ರೆ ನಡೆಯುತ್ತಿದ್ದು, ಸಂಪ್ರದಾಯದಂತೆ ಬುಧವಾರ ಬೆಳಗಿನಜಾವ ಕೋಣವನ್ನು ದೇವಸ್ಥಾನದ ಬಳಿ ಕಟ್ಟಲು ಕೊಲ್ಲರಪ್ಪ ಹಿಡಿದುಕೊಂಡು ಹೊರಟಿದ್ದಾರೆ. ಈ ವೇಳೆ ಕೋಣ ಅವರ ತೊಡೆಯ
ಭಾಗಕ್ಕೆ ತಿವಿದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು ಎಂದು ವೈದ್ಯರು ತಿಳಿಸಿದ್ದರೆ. ಈ ಕುರಿತು ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.