<p>ಚಿತ್ರದುರ್ಗ: ‘ಬೆಂಗಳೂರಿನ ಕಾಟನ್ಪೇಟೆ ಪೊಲೀಸ್ ಠಾಣೆಯಿಂದ ಮಕ್ಕಳನ್ನು ಕರೆತಂದ ಬಳಿಕ ಪಾಲಕರ ಸುಪರ್ದಿಗೆ ಒಪ್ಪಿಸಲಾಗಿದೆ. ಮಕ್ಕಳು ಪಾಲಕರ ಜೊತೆಗೆ ಇದ್ದರು’ ಎಂದು ಮಾಜಿ ಶಾಸಕ ಎಸ್.ಕೆ. ಬಸವರಾಜನ್ ತಿಳಿಸಿದರು.</p>.<p>ಜಾಮೀನು ಪಡೆದು ನ್ಯಾಯಾಲಯದಿಂದ ಹೊರಬಂದ ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳ ಎದುರು ಮಾತನಾಡಿದರು.</p>.<p>‘ಆಪತ್ತಿನಲ್ಲಿದ್ದ ಮಕ್ಕಳನ್ನು ರಕ್ಷಣೆ ಮಾಡಿದ್ದೇನೆ. ಮಠ ಹಾಗೂ ಮುರುಘಾಶ್ರೀ ವಿರುದ್ಧ ಪಿತೂರಿ ಮಾಡಿಲ್ಲ. ಅಂತಹ ಉದ್ದೇಶ ಇದ್ದಿದ್ದರೆ 14 ವರ್ಷಗಳ ಹಿಂದೆಯೇ ಮಾಡುತ್ತಿದ್ದೆ’ ಎಂದು ಹೇಳಿದರು.</p>.<p>‘ಮಕ್ಕಳಿಬ್ಬರು ಹಾಸ್ಟೆಲ್ನಿಂದ ಹೊರಬಂದು ಬೆಂಗಳೂರು ತಲುಪಿದ್ದರು. ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿರುವ ಮಾಹಿತಿ ಲಭ್ಯವಾಗಿತ್ತು. ಆಡಳಿತಾಧಿಕಾರಿ ಹಾಗೂ ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿದ್ದರಿಂದ ಅವರನ್ನು ಕರೆತರಲು ತೆರಳಿದ್ದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಸುಳ್ಳು ಪ್ರಕರಣ ದಾಖಲಿಸಲು ಮಕ್ಕಳನ್ನು ಬಳಸಿಕೊಳ್ಳುವ ವ್ಯಕ್ತಿತ್ವ ನನ್ನದಲ್ಲ. ಮಕ್ಕಳು ದಾಖಲಿಸಿದ ಪ್ರಕರಣದಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ. ತಿಂಗಳು ಕಾಲ ಪಿತೂರಿ ನಡೆಸಿ ನನ್ನ ವಿರುದ್ಧ ದೂರು ದಾಖಲಿಸಲಾಗಿದೆ’ ಎಂದು ಆರೋಪಿಸಿದರು.</p>.<p>ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಕಿತ್ತು ಹಾಕಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಬದಲಾವಣೆ ಮಾಡುವ ಅಧಿಕಾರ ಅವರಿಗಿದೆ. ಇದನ್ನು ಪ್ರಶ್ನಿಸುವುದಿಲ್ಲ’ ಎಂದರು.</p>.<p class="Subhead">‘ತಪ್ಪು ಮಾಡಿದ್ದರೆ ಪತಿಗೂ ಶಿಕ್ಷೆಯಾಗಲಿ’: ‘ಮಕ್ಕಳು ಮಾಡಿರುವ ಆಪಾದನೆ ಕೇಳಿ ನೋವಾಗಿದೆ. ಮಕ್ಕಳಿಗೆ ನ್ಯಾಯ ಸಿಗಬೇಕು. ಪತಿ ಬಸವರಾಜನ್ ತಪ್ಪು ಮಾಡಿದ್ದರೆ ಅವರಿಗೂ ಶಿಕ್ಷೆಯಾಗಲಿ’ ಎಂದು ಸೌಭಾಗ್ಯ ಬಸವರಾಜನ್ ತಿಳಿಸಿದರು.</p>.<p>ಜಾಮೀನು ಪಡೆದು ನ್ಯಾಯಾಲಯದಿಂದ ಹೊರಬಂದ ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳ ಎದುರು ಮಾತನಾಡಿದರು.</p>.<p>‘ಮಕ್ಕಳು ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿದ್ದಾಗ ಪತಿ ಜೊತೆ ತೆರಳಿದ್ದೆ. ಅದರಹೊರತಾಗಿ ಮಠದ ಯಾವ ವ್ಯವಹಾರಗಳೂ ಗೊತ್ತಿಲ್ಲ. ಮುರುಘಾಶ್ರೀ ಪ್ರಕರಣದಲ್ಲಿ ನಿರಪರಾಧಿಯಾಗಿ ಹೊರಬಂದರೆ ಸಂತೋಷವಾಗಲಿದೆ. ಸತ್ಯಕ್ಕೆ ಎಂದಿಗೂ ಜಯ ಸಿಗಬೇಕು’ ಎಂದು ತಿಳಿಸಿದರು.</p>.<p>‘ಹಿರಿಯ ಗುರುಗಳ ಗದ್ದುಗೆ ಪೂಜೆಗೆ ಪ್ರತಿ ಸೋಮವಾರ ಮುರುಘಾ ಮಠಕ್ಕೆ ಭೇಟಿ ನೀಡುತ್ತಿದ್ದೆ. ಗದ್ದುಗೆ ಪೂಜೆ ಮುಗಿಸಿ ಮರಳುತ್ತಿದ್ದ ನನಗೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರ ಪರಿಚಯ ಇಲ್ಲ’ ಎಂದು ತಿಳಿಸಿದರು.</p>.<p class="Briefhead">‘ಮುರುಘಾಶ್ರೀ ತಪ್ಪು ಮಾಡಿಲ್ಲ’</p>.<p>ಚಿತ್ರದುರ್ಗ: ‘ಭವ್ಯ ಪರಂಪರೆಯ ಮಠದ ಪೀಠಾಧ್ಯಕ್ಷರಾದ ಶಿವಮೂರ್ತಿ ಮುರುಘಾ ಶರಣರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ನಂಬಿಕೆ ನಮಗಿಲ್ಲ’ ಎಂದು ಜೆಡಿಎಸ್ ಮುಖಂಡ ಕೆ.ಸಿ.ವೀರೇಂದ್ರ (ಪಪ್ಪಿ) ತಿಳಿಸಿದರು.</p>.<p>ಬುಧವಾರ ಮಠಕ್ಕೆ ಬಂದ ಅವರು ಮುರುಘಾ ಶರಣರನ್ನು ಭೇಟಿ ಮಾಡಿ ಸುದ್ದಿಗಾರರ ಜತೆ ಮಾತನಾಡಿದರು.</p>.<p>‘ವಿದ್ಯಾಪೀಠದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು ಅನ್ಯಾಯವಾದವರಿಗೆ ನ್ಯಾಯ ಸಿಗುತ್ತದೆ’ ಎಂದರು.</p>.<p>‘ವಿದ್ಯಾಪೀಠದ ನಿರ್ದೇಶಕನಾಗಿರುವ ನಾನು ಕಳೆದ ಐದು ದಿನದಿಂದ ನಿತ್ಯವು ಶರಣರನ್ನು ಭೇಟಿಯಾಗುತ್ತಿದ್ದೇನೆ. ಇಂದು ಸಹ ಶರಣರು ನಿತ್ಯದ ಚಟುವಟಿಕೆಯಲ್ಲಿದ್ದಾರೆ. ಕಾನೂನು ಬಲಿಷ್ಠವಾಗಿದ್ದು ತಪ್ಪಿಸ್ಥರಿಗೆ ಶಿಕ್ಷೆಯಾಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ’ ಎಂದರು.</p>.<p class="Briefhead">ವಿದ್ಯಾರ್ಥಿನಿಯರ ಸ್ಥಳಾಂತರ</p>.<p>ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಶಿವಮೂರ್ತಿಮುರುಘಾ ಶರಣರ ವಿರುದ್ಧ ಪೋಕ್ಸೊ ಪ್ರಕರಣ<br />ದಾಖಲಾದ ಕಾರಣ ಮಠದ ಆವರಣದಲ್ಲಿನವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರನ್ನುಬುಧವಾರ ಸಂಜೆ ತಾಲ್ಲೂಕಿನ ಸರ್ಕಾರಿ<br />ವಿದ್ಯಾರ್ಥಿನಿಲಯಗಳಿಗೆ ಸ್ಥಳಾಂತರಿಸಲಾಗಿದೆ.</p>.<p>ಪ್ರಕರಣ ಸಂಬಂಧ ಮಠ ಹಾಗೂ ವಿದ್ಯಾರ್ಥಿನಿಲಯದಲ್ಲಿ ತನಿಖಾ ತಂಡ ಸ್ಥಳ ಮಹಜರು ನಡೆಸುತ್ತಿದೆ. ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆಮಕ್ಕಳ ಕಲ್ಯಾಣ ಸಮಿತಿ ಶಿಫಾರಸಿನ ಮೇರೆಗೆ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ<br />ಸ್ಥಳಾಂತರಿಸಲಾಯಿತು.</p>.<p>ಪ್ರಕರಣದ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಕೆಲ ಪಾಲಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ನಿಲಯಕ್ಕೆ ಭೇಟಿ ನೀಡಿದ್ದ ರಾಜ್ಯ ಮಕ್ಕಳ ಆಯೋಗದ ಹಂಗಾಮಿ ಅಧ್ಯಕ್ಷೆ ಜಯಶ್ರೀ ಬಳಿ ವಿದ್ಯಾರ್ಥಿನಿಯರು ಆತಂಕ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಬೆಂಗಳೂರಿನ ಕಾಟನ್ಪೇಟೆ ಪೊಲೀಸ್ ಠಾಣೆಯಿಂದ ಮಕ್ಕಳನ್ನು ಕರೆತಂದ ಬಳಿಕ ಪಾಲಕರ ಸುಪರ್ದಿಗೆ ಒಪ್ಪಿಸಲಾಗಿದೆ. ಮಕ್ಕಳು ಪಾಲಕರ ಜೊತೆಗೆ ಇದ್ದರು’ ಎಂದು ಮಾಜಿ ಶಾಸಕ ಎಸ್.ಕೆ. ಬಸವರಾಜನ್ ತಿಳಿಸಿದರು.</p>.<p>ಜಾಮೀನು ಪಡೆದು ನ್ಯಾಯಾಲಯದಿಂದ ಹೊರಬಂದ ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳ ಎದುರು ಮಾತನಾಡಿದರು.</p>.<p>‘ಆಪತ್ತಿನಲ್ಲಿದ್ದ ಮಕ್ಕಳನ್ನು ರಕ್ಷಣೆ ಮಾಡಿದ್ದೇನೆ. ಮಠ ಹಾಗೂ ಮುರುಘಾಶ್ರೀ ವಿರುದ್ಧ ಪಿತೂರಿ ಮಾಡಿಲ್ಲ. ಅಂತಹ ಉದ್ದೇಶ ಇದ್ದಿದ್ದರೆ 14 ವರ್ಷಗಳ ಹಿಂದೆಯೇ ಮಾಡುತ್ತಿದ್ದೆ’ ಎಂದು ಹೇಳಿದರು.</p>.<p>‘ಮಕ್ಕಳಿಬ್ಬರು ಹಾಸ್ಟೆಲ್ನಿಂದ ಹೊರಬಂದು ಬೆಂಗಳೂರು ತಲುಪಿದ್ದರು. ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿರುವ ಮಾಹಿತಿ ಲಭ್ಯವಾಗಿತ್ತು. ಆಡಳಿತಾಧಿಕಾರಿ ಹಾಗೂ ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿದ್ದರಿಂದ ಅವರನ್ನು ಕರೆತರಲು ತೆರಳಿದ್ದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಸುಳ್ಳು ಪ್ರಕರಣ ದಾಖಲಿಸಲು ಮಕ್ಕಳನ್ನು ಬಳಸಿಕೊಳ್ಳುವ ವ್ಯಕ್ತಿತ್ವ ನನ್ನದಲ್ಲ. ಮಕ್ಕಳು ದಾಖಲಿಸಿದ ಪ್ರಕರಣದಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಲಾಗಿದೆ. ತಿಂಗಳು ಕಾಲ ಪಿತೂರಿ ನಡೆಸಿ ನನ್ನ ವಿರುದ್ಧ ದೂರು ದಾಖಲಿಸಲಾಗಿದೆ’ ಎಂದು ಆರೋಪಿಸಿದರು.</p>.<p>ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಕಿತ್ತು ಹಾಕಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಬದಲಾವಣೆ ಮಾಡುವ ಅಧಿಕಾರ ಅವರಿಗಿದೆ. ಇದನ್ನು ಪ್ರಶ್ನಿಸುವುದಿಲ್ಲ’ ಎಂದರು.</p>.<p class="Subhead">‘ತಪ್ಪು ಮಾಡಿದ್ದರೆ ಪತಿಗೂ ಶಿಕ್ಷೆಯಾಗಲಿ’: ‘ಮಕ್ಕಳು ಮಾಡಿರುವ ಆಪಾದನೆ ಕೇಳಿ ನೋವಾಗಿದೆ. ಮಕ್ಕಳಿಗೆ ನ್ಯಾಯ ಸಿಗಬೇಕು. ಪತಿ ಬಸವರಾಜನ್ ತಪ್ಪು ಮಾಡಿದ್ದರೆ ಅವರಿಗೂ ಶಿಕ್ಷೆಯಾಗಲಿ’ ಎಂದು ಸೌಭಾಗ್ಯ ಬಸವರಾಜನ್ ತಿಳಿಸಿದರು.</p>.<p>ಜಾಮೀನು ಪಡೆದು ನ್ಯಾಯಾಲಯದಿಂದ ಹೊರಬಂದ ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳ ಎದುರು ಮಾತನಾಡಿದರು.</p>.<p>‘ಮಕ್ಕಳು ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿದ್ದಾಗ ಪತಿ ಜೊತೆ ತೆರಳಿದ್ದೆ. ಅದರಹೊರತಾಗಿ ಮಠದ ಯಾವ ವ್ಯವಹಾರಗಳೂ ಗೊತ್ತಿಲ್ಲ. ಮುರುಘಾಶ್ರೀ ಪ್ರಕರಣದಲ್ಲಿ ನಿರಪರಾಧಿಯಾಗಿ ಹೊರಬಂದರೆ ಸಂತೋಷವಾಗಲಿದೆ. ಸತ್ಯಕ್ಕೆ ಎಂದಿಗೂ ಜಯ ಸಿಗಬೇಕು’ ಎಂದು ತಿಳಿಸಿದರು.</p>.<p>‘ಹಿರಿಯ ಗುರುಗಳ ಗದ್ದುಗೆ ಪೂಜೆಗೆ ಪ್ರತಿ ಸೋಮವಾರ ಮುರುಘಾ ಮಠಕ್ಕೆ ಭೇಟಿ ನೀಡುತ್ತಿದ್ದೆ. ಗದ್ದುಗೆ ಪೂಜೆ ಮುಗಿಸಿ ಮರಳುತ್ತಿದ್ದ ನನಗೆ ಹಾಸ್ಟೆಲ್ ವಾರ್ಡನ್ ರಶ್ಮಿ ಅವರ ಪರಿಚಯ ಇಲ್ಲ’ ಎಂದು ತಿಳಿಸಿದರು.</p>.<p class="Briefhead">‘ಮುರುಘಾಶ್ರೀ ತಪ್ಪು ಮಾಡಿಲ್ಲ’</p>.<p>ಚಿತ್ರದುರ್ಗ: ‘ಭವ್ಯ ಪರಂಪರೆಯ ಮಠದ ಪೀಠಾಧ್ಯಕ್ಷರಾದ ಶಿವಮೂರ್ತಿ ಮುರುಘಾ ಶರಣರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ನಂಬಿಕೆ ನಮಗಿಲ್ಲ’ ಎಂದು ಜೆಡಿಎಸ್ ಮುಖಂಡ ಕೆ.ಸಿ.ವೀರೇಂದ್ರ (ಪಪ್ಪಿ) ತಿಳಿಸಿದರು.</p>.<p>ಬುಧವಾರ ಮಠಕ್ಕೆ ಬಂದ ಅವರು ಮುರುಘಾ ಶರಣರನ್ನು ಭೇಟಿ ಮಾಡಿ ಸುದ್ದಿಗಾರರ ಜತೆ ಮಾತನಾಡಿದರು.</p>.<p>‘ವಿದ್ಯಾಪೀಠದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು ಅನ್ಯಾಯವಾದವರಿಗೆ ನ್ಯಾಯ ಸಿಗುತ್ತದೆ’ ಎಂದರು.</p>.<p>‘ವಿದ್ಯಾಪೀಠದ ನಿರ್ದೇಶಕನಾಗಿರುವ ನಾನು ಕಳೆದ ಐದು ದಿನದಿಂದ ನಿತ್ಯವು ಶರಣರನ್ನು ಭೇಟಿಯಾಗುತ್ತಿದ್ದೇನೆ. ಇಂದು ಸಹ ಶರಣರು ನಿತ್ಯದ ಚಟುವಟಿಕೆಯಲ್ಲಿದ್ದಾರೆ. ಕಾನೂನು ಬಲಿಷ್ಠವಾಗಿದ್ದು ತಪ್ಪಿಸ್ಥರಿಗೆ ಶಿಕ್ಷೆಯಾಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ’ ಎಂದರು.</p>.<p class="Briefhead">ವಿದ್ಯಾರ್ಥಿನಿಯರ ಸ್ಥಳಾಂತರ</p>.<p>ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಶಿವಮೂರ್ತಿಮುರುಘಾ ಶರಣರ ವಿರುದ್ಧ ಪೋಕ್ಸೊ ಪ್ರಕರಣ<br />ದಾಖಲಾದ ಕಾರಣ ಮಠದ ಆವರಣದಲ್ಲಿನವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರನ್ನುಬುಧವಾರ ಸಂಜೆ ತಾಲ್ಲೂಕಿನ ಸರ್ಕಾರಿ<br />ವಿದ್ಯಾರ್ಥಿನಿಲಯಗಳಿಗೆ ಸ್ಥಳಾಂತರಿಸಲಾಗಿದೆ.</p>.<p>ಪ್ರಕರಣ ಸಂಬಂಧ ಮಠ ಹಾಗೂ ವಿದ್ಯಾರ್ಥಿನಿಲಯದಲ್ಲಿ ತನಿಖಾ ತಂಡ ಸ್ಥಳ ಮಹಜರು ನಡೆಸುತ್ತಿದೆ. ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆಮಕ್ಕಳ ಕಲ್ಯಾಣ ಸಮಿತಿ ಶಿಫಾರಸಿನ ಮೇರೆಗೆ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ<br />ಸ್ಥಳಾಂತರಿಸಲಾಯಿತು.</p>.<p>ಪ್ರಕರಣದ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಕೆಲ ಪಾಲಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ನಿಲಯಕ್ಕೆ ಭೇಟಿ ನೀಡಿದ್ದ ರಾಜ್ಯ ಮಕ್ಕಳ ಆಯೋಗದ ಹಂಗಾಮಿ ಅಧ್ಯಕ್ಷೆ ಜಯಶ್ರೀ ಬಳಿ ವಿದ್ಯಾರ್ಥಿನಿಯರು ಆತಂಕ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>