<p><strong>ಚಳ್ಳಕೆರೆ:</strong> ವೃದ್ಧರನ್ನು ಮಕ್ಕಳ ರೀತಿಯಲ್ಲಿ ಪೋಷಣೆ ಮಾಡಬೇಕು ಎಂದು ಇನ್ನರ್ ವ್ಹೀಲ್ ಮಹಿಳಾ ಘಟಕದ ಅಧ್ಯಕ್ಷೆ ಸುಧಾ ಪ್ರಹ್ಲಾದ್ ಹೇಳಿದರು.</p>.<p>ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಇನ್ನರ್ ವ್ಹೀಲ್ ಸಂಸ್ಥೆ ಸೋಮವಾರ ಹಮ್ಮಿಕೊಂಡಿದ್ದ ವೃದ್ಧ ಮಹಿಳೆಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಕಿ, ಸಲುಹಿದ ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ತಳ್ಳದೇ, ಅವರನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು ಎಂದು ಯುವಜನತೆಗೆ ಕಿವಿಮಾತು ಹೇಳಿದರು.</p>.<p>ಸಂಘ-ಸಂಸ್ಥೆಗಳು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕಿ ನಾಗಶ್ರೀ ಹೇಳಿದರು.</p>.<p>ಸಂಸ್ಥೆಯ ನಿರ್ದೇಶಕಿ ಶ್ರೀನಿಧಿ, ಅರುಣ ಸುಬ್ಬುರಾಜ್, ವೈದ್ಯೆ ವಿದ್ಯಾ ಮಾತನಾಡಿದರು. ಸೂಲಗಿತ್ತಿ ಶತಾಯುಷಿ ತಳಕು ತಿಮ್ಮಜ್ಜಿ ಅವರನ್ನು ಸನ್ಮಾನಿಸಿ ಉಡುಪು, ಹೊದಿಕೆ ಹಾಗೂ ಆಹಾರ ಧಾನ್ಯಗಳ ಕಿಟ್ ವಿತರಿಸಿದರು.</p>.<p>ಚಂದ್ರಕಲಾ, ಹನುಮಂತಪ್ಪ, ಮೀರಾ ರಮೇಶ್, ಸುಜಾತಾ, ಅನಿತಾ, ಶಶಿಧರ್, ಸುರಭಿ, ಮಲ್ಲಿಕಾರ್ಜುನ, ಮಂಜುಳಾ ಜಯಪಾಲಯ್ಯ, ಗೌತಮಿ, ಮೌನಶ್ರೀ, ಬೋರಣ್ಣ, ಯತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ವೃದ್ಧರನ್ನು ಮಕ್ಕಳ ರೀತಿಯಲ್ಲಿ ಪೋಷಣೆ ಮಾಡಬೇಕು ಎಂದು ಇನ್ನರ್ ವ್ಹೀಲ್ ಮಹಿಳಾ ಘಟಕದ ಅಧ್ಯಕ್ಷೆ ಸುಧಾ ಪ್ರಹ್ಲಾದ್ ಹೇಳಿದರು.</p>.<p>ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಇನ್ನರ್ ವ್ಹೀಲ್ ಸಂಸ್ಥೆ ಸೋಮವಾರ ಹಮ್ಮಿಕೊಂಡಿದ್ದ ವೃದ್ಧ ಮಹಿಳೆಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಕಿ, ಸಲುಹಿದ ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ತಳ್ಳದೇ, ಅವರನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು ಎಂದು ಯುವಜನತೆಗೆ ಕಿವಿಮಾತು ಹೇಳಿದರು.</p>.<p>ಸಂಘ-ಸಂಸ್ಥೆಗಳು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕಿ ನಾಗಶ್ರೀ ಹೇಳಿದರು.</p>.<p>ಸಂಸ್ಥೆಯ ನಿರ್ದೇಶಕಿ ಶ್ರೀನಿಧಿ, ಅರುಣ ಸುಬ್ಬುರಾಜ್, ವೈದ್ಯೆ ವಿದ್ಯಾ ಮಾತನಾಡಿದರು. ಸೂಲಗಿತ್ತಿ ಶತಾಯುಷಿ ತಳಕು ತಿಮ್ಮಜ್ಜಿ ಅವರನ್ನು ಸನ್ಮಾನಿಸಿ ಉಡುಪು, ಹೊದಿಕೆ ಹಾಗೂ ಆಹಾರ ಧಾನ್ಯಗಳ ಕಿಟ್ ವಿತರಿಸಿದರು.</p>.<p>ಚಂದ್ರಕಲಾ, ಹನುಮಂತಪ್ಪ, ಮೀರಾ ರಮೇಶ್, ಸುಜಾತಾ, ಅನಿತಾ, ಶಶಿಧರ್, ಸುರಭಿ, ಮಲ್ಲಿಕಾರ್ಜುನ, ಮಂಜುಳಾ ಜಯಪಾಲಯ್ಯ, ಗೌತಮಿ, ಮೌನಶ್ರೀ, ಬೋರಣ್ಣ, ಯತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>