<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಬೀದಿ ನಾಯಿಗಳನ್ನು ಸೆರೆ ಹಿಡಿಯಲು ಗ್ರಾಮ ಪಂಚಾಯಿತಿ ಶನಿವಾರ ಕಾರ್ಯಾಚರಣೆ ನಡೆಸಿತು.</p>.<p>ಭದ್ರಾವತಿಯಿಂದ ಕರೆಸಿದ್ದ ನಾಯಿ ಹಿಡಿಯುವ ವ್ಯಕ್ತಿಗಳು 166 ಬೀದಿನಾಯಿಗಳನ್ನು ಸೆರೆಹಿಡಿದರು. ಪ್ರತಿ ನಾಯಿ ಸೆರೆಗೆ ₹350 ನಂತೆ ಹಣ ಪಾವತಿ ಮಾಡಲಾಗಿದೆ. ಹಿಡಿದ ನಾಯಿಗಳನ್ನು ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಗ್ರಾಮಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಈಚೆಗೆ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ತೀವ್ರವಾಗಿರುವ ಜತೆಗೆ ಕೆಲವರಿಗೆ ಅವು ಕಡಿದಿರುವ ಘಟನೆಗಳೂ ವರದಿಯಾಗಿದ್ದವು. ಕಳೆದ ವಾರ ಯುವಕನೊಬ್ಬ ನಾಯಿ ಕಡಿತದಿಂದ ಮೃತಪಟ್ಟಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುವ ಜತೆಗೆ ಆರೋಗ್ಯ ಇಲಾಖೆಯು ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿತ್ತು. ಅಧಿಕಾರಿಗಳು ತಕ್ಷಣವೇ ಎಚ್ಚೆತ್ತು ಕ್ರಮ ಕೈಗೊಂಡಿರುವುದನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.</p>.<p>ಗ್ರಾಮದ ಚಿಕನ್ ಅಂಗಡಿಗಳ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಬೇಕು ಎಂದು ಮನವಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಕೊಂಡ್ಲಹಳ್ಳಿಯಲ್ಲಿ ಬೀದಿ ನಾಯಿಗಳನ್ನು ಸೆರೆ ಹಿಡಿಯಲು ಗ್ರಾಮ ಪಂಚಾಯಿತಿ ಶನಿವಾರ ಕಾರ್ಯಾಚರಣೆ ನಡೆಸಿತು.</p>.<p>ಭದ್ರಾವತಿಯಿಂದ ಕರೆಸಿದ್ದ ನಾಯಿ ಹಿಡಿಯುವ ವ್ಯಕ್ತಿಗಳು 166 ಬೀದಿನಾಯಿಗಳನ್ನು ಸೆರೆಹಿಡಿದರು. ಪ್ರತಿ ನಾಯಿ ಸೆರೆಗೆ ₹350 ನಂತೆ ಹಣ ಪಾವತಿ ಮಾಡಲಾಗಿದೆ. ಹಿಡಿದ ನಾಯಿಗಳನ್ನು ದೂರದ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಗ್ರಾಮಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಈಚೆಗೆ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ತೀವ್ರವಾಗಿರುವ ಜತೆಗೆ ಕೆಲವರಿಗೆ ಅವು ಕಡಿದಿರುವ ಘಟನೆಗಳೂ ವರದಿಯಾಗಿದ್ದವು. ಕಳೆದ ವಾರ ಯುವಕನೊಬ್ಬ ನಾಯಿ ಕಡಿತದಿಂದ ಮೃತಪಟ್ಟಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುವ ಜತೆಗೆ ಆರೋಗ್ಯ ಇಲಾಖೆಯು ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿತ್ತು. ಅಧಿಕಾರಿಗಳು ತಕ್ಷಣವೇ ಎಚ್ಚೆತ್ತು ಕ್ರಮ ಕೈಗೊಂಡಿರುವುದನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.</p>.<p>ಗ್ರಾಮದ ಚಿಕನ್ ಅಂಗಡಿಗಳ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಬೇಕು ಎಂದು ಮನವಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>