ವಿದ್ಯಾರ್ಥಿನಿಲಯದ ಆವರಣದ ಕನಕ ಭವನದ ಬಳಿ ಯುವಕನ ತಲೆಗೆ ದೊಣ್ಣೆಯಿಂದ ಭೀಕರವಾಗಿ ಹೊಡೆಯಲಾಗಿದ್ದು, ತಲೆಯಿಂದ ಹೆಚ್ಚು ರಕ್ತಸ್ರಾವವಾಗಿದೆ. ಮುಖವನ್ನು ಕಲ್ಲಿನಿಂದ ಜಜ್ಜಲಾಗಿದೆ. ಯುವಕ ಕೆಂಪು ಬಣ್ಣದ ಟೀ ಶರ್ಟ್ ಹಾಗೂ ಕಪ್ಪುಬಣ್ಣದ ಪ್ಯಾಂಟ್ ಧರಿಸಿದ್ದು, ಹೆಸರು ಮತ್ತು ಹತ್ಯೆ ಮಾಡಿದ ಆರೋಪಿಗಳ ಸುಳಿವು ಸಿಕ್ಕಿಲ್ಲ.