<p><strong>ಮೊಳಕಾಲ್ಮುರು:</strong> ನಾಶವಾಗುತ್ತಿರುವ ಪರಿಸರ ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಪೊಲೀಸರು ಸಹ ಇದಕ್ಕೆ ಹೊರತಾಗಿಲ್ಲ ಎಂದು ಸಿಪಿಐ ವಸಂತ್ ವಿ. ಆಸೋದೆ ಹೇಳಿದರು.</p>.<p>ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಳಿ ಪೊಲೀಸ್ ವಸತಿಗೆ ಕಾಯ್ದಿರಿಸಿದ ಸ್ಥಳದಲ್ಲಿ ಭಾನುವಾರ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶಕ್ಕೆ ಹೋಲಿಕೆ ಮಾಡಿದಲ್ಲಿ ಪಟ್ಟಣಗಳಲ್ಲಿ ಹಸಿರು ಕಾಣೆಯಾಗುತ್ತಿದೆ. ಕಟ್ಟಡಗಳ ನಿರ್ಮಾಣ ಭರಾಟೆಯಲ್ಲಿ ಗಿಡ, ಮರಗಳನ್ನು ಕಡಿಯುತ್ತಿದ್ದಾರೆ. ಪ್ರತಿ ಮನೆಯಲ್ಲೂ ಸಸಿ ನೆಡಲು ಕ್ರಮ ಕೈಗೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಹಲವು ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುವುದು ಅನಿವಾರ್ಯವಾಗಲಿದೆ ಎಂದರು.</p>.<p>ಪಿಎಸ್ಐ ಜಿ. ಪಾಂಡುರಂಗಪ್ಪ, ಅರಣ್ಯ ಇಲಾಖೆಯ ಶಿವರಾಜ್, ಸಂತೋಷ್, ಪೊಲೀಸ್ ಸಿಬ್ಬಂದಿಗಳಾದ ರಾಘವೇಂದ್ರರೆಡ್ಡಿ, ಶ್ರೀಧರ್, ಸತೀಶ್, ಪ್ರಭು, ಶಿವಾನಂದ್, ಸುಧೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ನಾಶವಾಗುತ್ತಿರುವ ಪರಿಸರ ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಪೊಲೀಸರು ಸಹ ಇದಕ್ಕೆ ಹೊರತಾಗಿಲ್ಲ ಎಂದು ಸಿಪಿಐ ವಸಂತ್ ವಿ. ಆಸೋದೆ ಹೇಳಿದರು.</p>.<p>ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಳಿ ಪೊಲೀಸ್ ವಸತಿಗೆ ಕಾಯ್ದಿರಿಸಿದ ಸ್ಥಳದಲ್ಲಿ ಭಾನುವಾರ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶಕ್ಕೆ ಹೋಲಿಕೆ ಮಾಡಿದಲ್ಲಿ ಪಟ್ಟಣಗಳಲ್ಲಿ ಹಸಿರು ಕಾಣೆಯಾಗುತ್ತಿದೆ. ಕಟ್ಟಡಗಳ ನಿರ್ಮಾಣ ಭರಾಟೆಯಲ್ಲಿ ಗಿಡ, ಮರಗಳನ್ನು ಕಡಿಯುತ್ತಿದ್ದಾರೆ. ಪ್ರತಿ ಮನೆಯಲ್ಲೂ ಸಸಿ ನೆಡಲು ಕ್ರಮ ಕೈಗೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಹಲವು ಅನಾರೋಗ್ಯ ಸಮಸ್ಯೆಗಳನ್ನು ಎದುರಿಸುವುದು ಅನಿವಾರ್ಯವಾಗಲಿದೆ ಎಂದರು.</p>.<p>ಪಿಎಸ್ಐ ಜಿ. ಪಾಂಡುರಂಗಪ್ಪ, ಅರಣ್ಯ ಇಲಾಖೆಯ ಶಿವರಾಜ್, ಸಂತೋಷ್, ಪೊಲೀಸ್ ಸಿಬ್ಬಂದಿಗಳಾದ ರಾಘವೇಂದ್ರರೆಡ್ಡಿ, ಶ್ರೀಧರ್, ಸತೀಶ್, ಪ್ರಭು, ಶಿವಾನಂದ್, ಸುಧೀರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>