<p><strong>ಸಿರಿಗೆರೆ:</strong> ಭದ್ರಾ ಮೇಲ್ಡಂಡೆ ನೀರಾವರಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಭದ್ರಾ ಮೇಲ್ಡಂಡೆ ಯೋಜನಾ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ವೀಕ್ಷಿಸಿದರು.</p>.<p>ಅಜ್ಜಂಪುರ ರೈಲ್ವೆ ಬ್ರಿಡ್ಜ್ ಬಳಿಯ ಚಿತ್ರದುರ್ಗ ಶಾಖಾ ಕಾಲುವೆ ವೈ ಜಂಕ್ಷನ್ ವೀಕ್ಷಿಸಿದ ನಂತರ ಅಬ್ಬಿನಹೊಳಲು ಗ್ರಾಮದ ಸಮೀಪ ನಿಂತಿರುವ 100 ಮೀಟರ್ ಕಾಮಗಾರಿ ವೀಕ್ಷಿಸಿದರು. </p>.<p>ಕಾಮಗಾರಿಗೆ ಭೂಮಿ ನೀಡಿದ್ದಕ್ಕೆ ಅತ್ಯಂತ ಕಡಿಮೆ ಪರಿಹಾರ ನಿಗದಿಪಡಿಸಲಾಗಿದೆ ಎಂದು ಭೂ ಮಾಲೀಕರು ಕಾಮಗಾರಿಗೆ ತಡೆವೊಡ್ಡಿದ್ದಾರೆ. ಜೂನ್ 4ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮದ ರೈತರು, ಎಂಜಿನಿಯರ್ಗಳ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ರೈತರು ಒಪ್ಪಿಗೆ ಸೂಚಿಸಿದರೆ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಯೋಜನಾ ಪ್ರದೇಶದ ವ್ಯವಸ್ಥಾಪಕ ಅನಿಲ್ ಕುಮಾರ್ ಹೇಳಿದರು.</p>.<p>ತಂಡವು ನಂತರ ಮುಗಳಿ, ಹೆಬ್ಬೂರು ಗ್ರಾಮದ ಬಳಿ ಪ್ರಗತಿಯಲ್ಲಿರುವ ಕಾಮಗಾರಿ ವೀಕ್ಷಿಸಿತು.</p>.<p>ಈ ವೇಳೆ ಸಮಿತಿಯ ಮುಖಂಡರಾದ ಚಿಕ್ಕಬ್ಬಿಗೆರೆ ನಾಗರಾಜ್, ಡಿ.ಎಸ್. ಹಳ್ಳಿ ಮಲ್ಲಿಕಾರ್ಜುನ್, ಲವಕುಮಾರ್, ತಿಮ್ಮಯ್ಯ, ಸುರೇಶ್, ಆಡನೂರು ಶಿವಕುಮಾರ್, ರಾಜಶೇಖರ್, ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಿದ್ದರಾಮಪ್ಪ, ಅಜಯ್, ರಾಮರೆಡ್ಡಿ, ಮಲ್ಲಿಕಾರ್ಜುನ್, ಸಿದ್ದಪ್ಪ, ನಾಗಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ಭದ್ರಾ ಮೇಲ್ಡಂಡೆ ನೀರಾವರಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಭದ್ರಾ ಮೇಲ್ಡಂಡೆ ಯೋಜನಾ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ವೀಕ್ಷಿಸಿದರು.</p>.<p>ಅಜ್ಜಂಪುರ ರೈಲ್ವೆ ಬ್ರಿಡ್ಜ್ ಬಳಿಯ ಚಿತ್ರದುರ್ಗ ಶಾಖಾ ಕಾಲುವೆ ವೈ ಜಂಕ್ಷನ್ ವೀಕ್ಷಿಸಿದ ನಂತರ ಅಬ್ಬಿನಹೊಳಲು ಗ್ರಾಮದ ಸಮೀಪ ನಿಂತಿರುವ 100 ಮೀಟರ್ ಕಾಮಗಾರಿ ವೀಕ್ಷಿಸಿದರು. </p>.<p>ಕಾಮಗಾರಿಗೆ ಭೂಮಿ ನೀಡಿದ್ದಕ್ಕೆ ಅತ್ಯಂತ ಕಡಿಮೆ ಪರಿಹಾರ ನಿಗದಿಪಡಿಸಲಾಗಿದೆ ಎಂದು ಭೂ ಮಾಲೀಕರು ಕಾಮಗಾರಿಗೆ ತಡೆವೊಡ್ಡಿದ್ದಾರೆ. ಜೂನ್ 4ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮದ ರೈತರು, ಎಂಜಿನಿಯರ್ಗಳ ಸಭೆ ಕರೆಯಲಾಗಿದೆ. ಆ ಸಭೆಯಲ್ಲಿ ರೈತರು ಒಪ್ಪಿಗೆ ಸೂಚಿಸಿದರೆ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಯೋಜನಾ ಪ್ರದೇಶದ ವ್ಯವಸ್ಥಾಪಕ ಅನಿಲ್ ಕುಮಾರ್ ಹೇಳಿದರು.</p>.<p>ತಂಡವು ನಂತರ ಮುಗಳಿ, ಹೆಬ್ಬೂರು ಗ್ರಾಮದ ಬಳಿ ಪ್ರಗತಿಯಲ್ಲಿರುವ ಕಾಮಗಾರಿ ವೀಕ್ಷಿಸಿತು.</p>.<p>ಈ ವೇಳೆ ಸಮಿತಿಯ ಮುಖಂಡರಾದ ಚಿಕ್ಕಬ್ಬಿಗೆರೆ ನಾಗರಾಜ್, ಡಿ.ಎಸ್. ಹಳ್ಳಿ ಮಲ್ಲಿಕಾರ್ಜುನ್, ಲವಕುಮಾರ್, ತಿಮ್ಮಯ್ಯ, ಸುರೇಶ್, ಆಡನೂರು ಶಿವಕುಮಾರ್, ರಾಜಶೇಖರ್, ಹೊಳಲ್ಕೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಿದ್ದರಾಮಪ್ಪ, ಅಜಯ್, ರಾಮರೆಡ್ಡಿ, ಮಲ್ಲಿಕಾರ್ಜುನ್, ಸಿದ್ದಪ್ಪ, ನಾಗಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>