<p>ಪರಶುರಾಂಪುರ: ಹಾಲಿಗೊಂಡನಹಳ್ಳಿ ಸಮೀಪ ವೇದಾವತಿ ನದಿಗೆ ನಿರ್ಮಿಸಿದ ಬ್ಯಾರೇಜ್ನಲ್ಲಿ ನೀರಿಗೆ ಇಳಿದ ಇಬ್ಬರು ಬುಧವಾರ ಕಣ್ಮರೆಯಾಗಿದ್ದಾರೆ. ಅಗ್ನಿಶಾಮಕ ದಳ ಮತ್ತು ತುರ್ತುಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಾತ್ರಿವರೆಗೆ ಶೋಧ ಕಾರ್ಯ ನಡೆಸಿದರು.</p>.<p>ಚಳ್ಳಕೆರೆಯ ಮಂಜುನಾಥ್ (37) ಮತ್ತು ಮೋನಿಷಾ (8) ಎಂಬುವರು ಕಣ್ಮರೆಯಾದವರು. ಮಂಜುನಾಥ್ ಅವರು ಹಾಲಿಗೊಂಡನಹಳ್ಳಿಯಲ್ಲಿ ವಿವಾಹವಾಗಿದ್ದರು.</p>.<p>ಮಂಜುನಾಥ್ ಅವರು ಕುಟುಂಬ ಸಹಿತ ಬ್ಯಾರೇಜ್ ನೋಡಲು ಹೋಗಿದ್ದರು. ಮೋನಿಷಾ ಅವರು ಸಂಬಂಧಿಕರೊಂದಿಗೆ ಇಲ್ಲಿಗೆ ಬಂದಿದ್ದರು. ಈಜಲು ನೀರಿಗೆ ಇಳಿದಾಗ ಕಣ್ಮರೆಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಮಾಹಿತಿ ಅರಿತು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನಲ್ಲಿ ಇಬ್ಬರಿಗೂ ಹುಡುಕಾಟ ನಡೆಸಿದರು. ಮುಳುಗುತಜ್ಞರನ್ನು ಕರೆಸಿ ಪರಿಶೀಲನೆ ನಡೆಸಲಾಯಿತು. ನೀರಿನಲ್ಲಿ ಇಬ್ಬರೂ ಪತ್ತೆಯಾಗಿಲ್ಲ. ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪರಶುರಾಂಪುರ: ಹಾಲಿಗೊಂಡನಹಳ್ಳಿ ಸಮೀಪ ವೇದಾವತಿ ನದಿಗೆ ನಿರ್ಮಿಸಿದ ಬ್ಯಾರೇಜ್ನಲ್ಲಿ ನೀರಿಗೆ ಇಳಿದ ಇಬ್ಬರು ಬುಧವಾರ ಕಣ್ಮರೆಯಾಗಿದ್ದಾರೆ. ಅಗ್ನಿಶಾಮಕ ದಳ ಮತ್ತು ತುರ್ತುಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಾತ್ರಿವರೆಗೆ ಶೋಧ ಕಾರ್ಯ ನಡೆಸಿದರು.</p>.<p>ಚಳ್ಳಕೆರೆಯ ಮಂಜುನಾಥ್ (37) ಮತ್ತು ಮೋನಿಷಾ (8) ಎಂಬುವರು ಕಣ್ಮರೆಯಾದವರು. ಮಂಜುನಾಥ್ ಅವರು ಹಾಲಿಗೊಂಡನಹಳ್ಳಿಯಲ್ಲಿ ವಿವಾಹವಾಗಿದ್ದರು.</p>.<p>ಮಂಜುನಾಥ್ ಅವರು ಕುಟುಂಬ ಸಹಿತ ಬ್ಯಾರೇಜ್ ನೋಡಲು ಹೋಗಿದ್ದರು. ಮೋನಿಷಾ ಅವರು ಸಂಬಂಧಿಕರೊಂದಿಗೆ ಇಲ್ಲಿಗೆ ಬಂದಿದ್ದರು. ಈಜಲು ನೀರಿಗೆ ಇಳಿದಾಗ ಕಣ್ಮರೆಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.</p>.<p>ಮಾಹಿತಿ ಅರಿತು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಿನಲ್ಲಿ ಇಬ್ಬರಿಗೂ ಹುಡುಕಾಟ ನಡೆಸಿದರು. ಮುಳುಗುತಜ್ಞರನ್ನು ಕರೆಸಿ ಪರಿಶೀಲನೆ ನಡೆಸಲಾಯಿತು. ನೀರಿನಲ್ಲಿ ಇಬ್ಬರೂ ಪತ್ತೆಯಾಗಿಲ್ಲ. ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>