ಈ ಬಗ್ಗೆ ಶಾಲೆಗೆ ಭೇಟಿ ನೀಡುವ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಅವರಿಂದ ಬರೀ ಆಶ್ವಾಸನೆಗಳೆ ಸಿಕ್ಕಿವೆ ವಿನಃ ಫಲಪ್ರದ ದೊರೆತಿಲ್ಲ. ಕಳೆದ ಐದಾರು ತಿಂಗಳ ಹಿಂದೆ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಕಾರ್ಯಕ್ರಮ ನಿಮಿತ್ತ ಸೂಗೂರು ಗ್ರಾಮಕ್ಕೆ ಹೋಗಿದ್ದಾಗ ಈ ಶಾಲೆಗೆ ಭೇಟಿ ನೀಡಿ. ಮರದಡಿ ಕುಳಿತುಕೊಂಡಿದ್ದ ವಿದ್ಯಾರ್ಥಿಗಳಿಗೆ ಅವರೂ ಪಾಠ ಮಾಡಿದ್ದ ಸುದ್ದಿ ಪ್ರಕಟವಾಗಿತ್ತು. ತುರ್ತಾಗಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆಯನ್ನೂ ನೀಡಿದ್ದರು. ಆದರೆ ಈತನಕ ಯಾವುದೇ ಪ್ರಯೋಜನವಾಗಿಲ್ಲ. ಎಂಬ ನೋವು ಪೋಷಕರು ಮತ್ತು ವಿದ್ಯಾರ್ಥಿಗಳದ್ದು.