<p>ಮೊಳಕಾಲ್ಮುರು: ಸಾರ್ವಜನಿಕ ಸ್ಥಳಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ಕಳ್ಳನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. </p>.<p>ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕುವೆಂಪು ನಗರದ ಎನ್. ಸೂರ್ಯ ಬಂಧಿತ. ಈತನಿಂದ ₹4 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.</p>.<p>ಈಚೆಗೆ ಇಲ್ಲಿನ ಎಸ್ಬಿಎಂನಲ್ಲಿ ಹಣ ಬಿಡಿಸಿಕೊಂಡು ಹೋಗುತ್ತಿದ್ದ ಮೆಹಬೂಬ್ ಮತ್ತು ಸೋಮಶೇಖರ್ ಎಂಬುವವರ ಗಮನ ಬೇರೆಡೆ ಸೆಳೆದು ಹಣ ಲಪಟಾಯಿಸಲಾಗಿತ್ತು. ಪ್ರತ್ಯೇಕ ಘಟನೆಗಳಲ್ಲಿ ಕ್ರಮವಾಗಿ ₹1 ಲಕ್ಷ ಮತ್ತು ₹5 ಲಕ್ಷ ನಗದು ಕದಿಯಲಾಗಿತ್ತು. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಹೆಚ್ಚುವರಿ ಎಸ್ಪಿ ಶಿವಕುಮಾರ್, ಡಿವೈಎಸ್ಪಿ ಸತ್ಯನಾರಾಯಣ, ಸಿಪಿಐ ಆರ್. ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಪಿಎಸ್ಐ ಮಹೇಶ್ ಹೊಸಪೇಟೆ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಸಿಬ್ಬಂದಿ ಸತೀಶ್, ಖಾದರ್ ಭಾಷಾ, ಶಿವಾನಂದ್, ಪ್ರಭುದೇವ್, ಹುಲುಗಪ್ಪ ಕಾರ್ಯಾಚರಣೆ ತಂಡದಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೊಳಕಾಲ್ಮುರು: ಸಾರ್ವಜನಿಕ ಸ್ಥಳಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಹಣ ದೋಚುತ್ತಿದ್ದ ಕಳ್ಳನನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. </p>.<p>ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕುವೆಂಪು ನಗರದ ಎನ್. ಸೂರ್ಯ ಬಂಧಿತ. ಈತನಿಂದ ₹4 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ.</p>.<p>ಈಚೆಗೆ ಇಲ್ಲಿನ ಎಸ್ಬಿಎಂನಲ್ಲಿ ಹಣ ಬಿಡಿಸಿಕೊಂಡು ಹೋಗುತ್ತಿದ್ದ ಮೆಹಬೂಬ್ ಮತ್ತು ಸೋಮಶೇಖರ್ ಎಂಬುವವರ ಗಮನ ಬೇರೆಡೆ ಸೆಳೆದು ಹಣ ಲಪಟಾಯಿಸಲಾಗಿತ್ತು. ಪ್ರತ್ಯೇಕ ಘಟನೆಗಳಲ್ಲಿ ಕ್ರಮವಾಗಿ ₹1 ಲಕ್ಷ ಮತ್ತು ₹5 ಲಕ್ಷ ನಗದು ಕದಿಯಲಾಗಿತ್ತು. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಹೆಚ್ಚುವರಿ ಎಸ್ಪಿ ಶಿವಕುಮಾರ್, ಡಿವೈಎಸ್ಪಿ ಸತ್ಯನಾರಾಯಣ, ಸಿಪಿಐ ಆರ್. ನಾಗರಾಜ್ ಮಾರ್ಗದರ್ಶನದಲ್ಲಿ ತಂಡ ರಚಿಸಲಾಗಿತ್ತು. ಪಿಎಸ್ಐ ಮಹೇಶ್ ಹೊಸಪೇಟೆ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಸಿಬ್ಬಂದಿ ಸತೀಶ್, ಖಾದರ್ ಭಾಷಾ, ಶಿವಾನಂದ್, ಪ್ರಭುದೇವ್, ಹುಲುಗಪ್ಪ ಕಾರ್ಯಾಚರಣೆ ತಂಡದಲ್ಲಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>