<p><strong>ಮೊಳಕಾಲ್ಮುರು:</strong> ‘ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಅಧಿಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳನ್ನು ಮೊದಲು ಬಹಿರಂಗ ಪಡಿಸಲಿ’ ಎಂದು ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಸವಾಲು ಹಾಕಿದರು.</p><p>ತಾಲ್ಲೂಕಿನ ಕಸಬಾ ಹೋಬಳಿ ಗ್ರಾಮಗಳಲ್ಲಿ ಶನಿವಾರ ನಡೆದ ಬಿಜೆಪಿ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು.</p>.<p>‘4 ಬಾರಿ ಮೊಳಕಾಲ್ಮುರು ಕ್ಷೇತ್ರದ ಶಾಸಕರಾಗಿ ಗೋಪಾಲಕೃಷ್ಣ ಕೆಲಸ ಮಾಡಿದ್ದಾರೆ. ಯಾವುದೇ ಗುರುತರ ಸಾಧನೆಗಳನ್ನು ಮಾಡಿಲ್ಲ. 2013ರಲ್ಲಿ ಈ ಕ್ಷೇತ್ರದಿಂದ ಗೋಪಾಲಕೃಷ್ಣ ವಿರುದ್ಧ ನಾನು ಗೆದ್ದು ಶಾಸಕನಾಗಿದ್ದಾಗ ಸರ್ಕಾರದ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಿಸಿಕೊಂಡು ಬರಲು ಅಡ್ಡಿಪಡಿಸಿದರು. ಕ್ಷೇತ್ರ ಮತ್ತು ಪಕ್ಷಗಳನ್ನು ಬದಲಾವಣೆ ಮಾಡಿ ಮತ್ತೆ ಈ ಕ್ಷೇತ್ರದಿಂದ ಸ್ಪರ್ಧಿಸಿರುವ ಅವರಿಗೆ ನಿಮ್ಮ ಸಾಧನೆ ಏನು ಎಂಬುದನ್ನು ಮತದಾರರು ಪ್ರಶ್ನೆ ಮಾಡಬೇಕು’ ಎಂದರು.</p>.<p>ಗುಂಡ್ಲೂರು, ಕುಂಟೋಬಯ್ಯನಹಟ್ಟಿ, ಮೇಗಲ ಮರ್ಲಹಳ್ಳಿ, ಕೆಳಗಿನ ಮರ್ಲಹಳ್ಳಿ, ನೇರ್ಲಹಳ್ಳಿ, ಓದೋಬಯ್ಯನಹಟ್ಟಿ, ಬೆಳವಿನ ಮರದಹಟ್ಟಿ, ನೇತ್ರನಹಳ್ಳಿ, ಕೋನಸಾಗರ, ಊಡೇವು, ಮಾರಮ್ಮನಹಳ್ಳಿ, ಕೊಂಡ್ಲಹಳ್ಳಿಯಲ್ಲಿ ಪ್ರಚಾರ ಸಭೆಗಳನ್ನು ನಡೆಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷರಾದ ಡಾ.ಪಿ.ಎಂ. ಮಂಜುನಾಥ್, ರಾಮರೆಡ್ಡಿ, ಜಿಂಕಲು ಬಸವರಾಜ್, ಕಿರಣ್ ಗಾಯಕ್ ವಾಡ್, ಟಿ. ರೇವಣ್ಣ, ಸಿದ್ದಾರ್ಥ್, ಪಿ. ಪಾಲಯ್ಯ, ಕೆ.ಆರ್. ರಾಮರೆಡ್ಡಿ, ಶ್ರೀರಾಮರೆಡ್ಡಿ, ಕೆ.ಆರ್. ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ‘ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಅಧಿಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳನ್ನು ಮೊದಲು ಬಹಿರಂಗ ಪಡಿಸಲಿ’ ಎಂದು ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಸವಾಲು ಹಾಕಿದರು.</p><p>ತಾಲ್ಲೂಕಿನ ಕಸಬಾ ಹೋಬಳಿ ಗ್ರಾಮಗಳಲ್ಲಿ ಶನಿವಾರ ನಡೆದ ಬಿಜೆಪಿ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು.</p>.<p>‘4 ಬಾರಿ ಮೊಳಕಾಲ್ಮುರು ಕ್ಷೇತ್ರದ ಶಾಸಕರಾಗಿ ಗೋಪಾಲಕೃಷ್ಣ ಕೆಲಸ ಮಾಡಿದ್ದಾರೆ. ಯಾವುದೇ ಗುರುತರ ಸಾಧನೆಗಳನ್ನು ಮಾಡಿಲ್ಲ. 2013ರಲ್ಲಿ ಈ ಕ್ಷೇತ್ರದಿಂದ ಗೋಪಾಲಕೃಷ್ಣ ವಿರುದ್ಧ ನಾನು ಗೆದ್ದು ಶಾಸಕನಾಗಿದ್ದಾಗ ಸರ್ಕಾರದ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಿಸಿಕೊಂಡು ಬರಲು ಅಡ್ಡಿಪಡಿಸಿದರು. ಕ್ಷೇತ್ರ ಮತ್ತು ಪಕ್ಷಗಳನ್ನು ಬದಲಾವಣೆ ಮಾಡಿ ಮತ್ತೆ ಈ ಕ್ಷೇತ್ರದಿಂದ ಸ್ಪರ್ಧಿಸಿರುವ ಅವರಿಗೆ ನಿಮ್ಮ ಸಾಧನೆ ಏನು ಎಂಬುದನ್ನು ಮತದಾರರು ಪ್ರಶ್ನೆ ಮಾಡಬೇಕು’ ಎಂದರು.</p>.<p>ಗುಂಡ್ಲೂರು, ಕುಂಟೋಬಯ್ಯನಹಟ್ಟಿ, ಮೇಗಲ ಮರ್ಲಹಳ್ಳಿ, ಕೆಳಗಿನ ಮರ್ಲಹಳ್ಳಿ, ನೇರ್ಲಹಳ್ಳಿ, ಓದೋಬಯ್ಯನಹಟ್ಟಿ, ಬೆಳವಿನ ಮರದಹಟ್ಟಿ, ನೇತ್ರನಹಳ್ಳಿ, ಕೋನಸಾಗರ, ಊಡೇವು, ಮಾರಮ್ಮನಹಳ್ಳಿ, ಕೊಂಡ್ಲಹಳ್ಳಿಯಲ್ಲಿ ಪ್ರಚಾರ ಸಭೆಗಳನ್ನು ನಡೆಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷರಾದ ಡಾ.ಪಿ.ಎಂ. ಮಂಜುನಾಥ್, ರಾಮರೆಡ್ಡಿ, ಜಿಂಕಲು ಬಸವರಾಜ್, ಕಿರಣ್ ಗಾಯಕ್ ವಾಡ್, ಟಿ. ರೇವಣ್ಣ, ಸಿದ್ದಾರ್ಥ್, ಪಿ. ಪಾಲಯ್ಯ, ಕೆ.ಆರ್. ರಾಮರೆಡ್ಡಿ, ಶ್ರೀರಾಮರೆಡ್ಡಿ, ಕೆ.ಆರ್. ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>