ನಿಗೂಢ ಸಾವಿನ ತನಿಖೆಯಾಗಲಿ: ‘ಸೆವೆನ್ ಹಿಲ್ಸ್ ಕ್ವಾರ್ಟಸ್ನಲ್ಲಿ ಶ್ರೀರಾಮುಲು ಆಪ್ತ ಸಹಾಯಕ ಮಹೇಶ್ ರೆಡ್ಡಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಇದು ಸಹಜ ಸಾವಲ್ಲ. ಶವದ ಮರಣೋತ್ತರ ಪರೀಕ್ಷೆ ನಡೆಸದೆ, ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಶವವನ್ನು ಬಳ್ಳಾರಿಗೆ ತೆಗೆದುಕೊಂಡು ಹೋಗಿ ಕಾನೂನು ಬಾಹಿರವಾಗಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ಮಹೇಶ್ ರೆಡ್ಡಿ ಪತ್ನಿಗೆ ಸರ್ಕಾರಿ ನೌಕರಿ, ಬಂಗಲೆ, ₹ 50 ಲಕ್ಷ ನೀಡುವುದಾಗಿ ಪ್ರಕರಣ ಮುಚ್ಚಿ ಹಾಕಲಾಗುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.