<p><strong>ಚಿತ್ರದುರ್ಗ:</strong> ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಆವರಣದಲ್ಲಿ ಶ್ರೀಗಂಧ ಕಳವು ಮಾಡಿದ್ದ ಆರೋಪಿಗಳನ್ನು ಪತ್ತೆ ಮಾಡಿದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.</p>.<p>ಹೊಸದುರ್ಗ ತಾಲ್ಲೂಕಿನ ಕಪ್ಪಗೆರೆ ಗ್ರಾಮದ ಲೊಕೇಶ (22), ಕೆಂಚಪ್ಪ (24) ಹಾಗೂ ಬಸವರಾಜ (36) ಬಂಧಿತರು. ಆರೋಪಿಗಳಿಂದ ₹ 15 ಸಾವಿರ ಮೌಲ್ಯದ ಮೂರೂವರೆ ಕೆ.ಜಿ ಶ್ರೀಗಂಧ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.</p>.<p>ಫೆ.8ರಂದು ನಸುಕಿನಲ್ಲಿ ಆರೋಪಿಗಳು ಅನುಮಾನಸ್ಪದವಾಗಿ ಸಂಚರಿಸುತ್ತಿದ್ದ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೂವರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಶ್ರೀಗಂಧ ಪತ್ತೆಯಾಗಿದೆ. ವಿಚಾರಣೆ ನಡೆಸಿದಾಗ ಸಾಣೇಹಳ್ಳಿಯಲ್ಲಿ ನಡೆದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಸಾಣೇಹಳ್ಳಿ ಮಠದಲ್ಲಿ ಡಿ.24ರಂದು ರಾತ್ರಿ ಶ್ರೀಗಂಧ ಕಳವು ಮಾಡಲಾಗಿತ್ತು. ಪ್ರಕರಣ ಪತ್ತೆಗೆ ಸಿಪಿಐ ಫೈಜುಲ್ಲಾ ಹಾಗೂ ಎಸ್ಐ ಶಿವಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಆವರಣದಲ್ಲಿ ಶ್ರೀಗಂಧ ಕಳವು ಮಾಡಿದ್ದ ಆರೋಪಿಗಳನ್ನು ಪತ್ತೆ ಮಾಡಿದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.</p>.<p>ಹೊಸದುರ್ಗ ತಾಲ್ಲೂಕಿನ ಕಪ್ಪಗೆರೆ ಗ್ರಾಮದ ಲೊಕೇಶ (22), ಕೆಂಚಪ್ಪ (24) ಹಾಗೂ ಬಸವರಾಜ (36) ಬಂಧಿತರು. ಆರೋಪಿಗಳಿಂದ ₹ 15 ಸಾವಿರ ಮೌಲ್ಯದ ಮೂರೂವರೆ ಕೆ.ಜಿ ಶ್ರೀಗಂಧ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.</p>.<p>ಫೆ.8ರಂದು ನಸುಕಿನಲ್ಲಿ ಆರೋಪಿಗಳು ಅನುಮಾನಸ್ಪದವಾಗಿ ಸಂಚರಿಸುತ್ತಿದ್ದ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೂವರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಶ್ರೀಗಂಧ ಪತ್ತೆಯಾಗಿದೆ. ವಿಚಾರಣೆ ನಡೆಸಿದಾಗ ಸಾಣೇಹಳ್ಳಿಯಲ್ಲಿ ನಡೆದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಸಾಣೇಹಳ್ಳಿ ಮಠದಲ್ಲಿ ಡಿ.24ರಂದು ರಾತ್ರಿ ಶ್ರೀಗಂಧ ಕಳವು ಮಾಡಲಾಗಿತ್ತು. ಪ್ರಕರಣ ಪತ್ತೆಗೆ ಸಿಪಿಐ ಫೈಜುಲ್ಲಾ ಹಾಗೂ ಎಸ್ಐ ಶಿವಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>