ಹೊಳಲ್ಕೆರೆ (ಚಿತ್ರದುರ್ಗ): ಪಟ್ಟಣದ ಹೊರವಲಯದ ಕುಕ್ವಾಡೇಶ್ವರಿ ದೇವಸ್ಥಾನದ ಸಮೀಪ ಕೆಎಸ್ಆರ್ಟಿಸಿ ಬಸ್ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ತಾಲ್ಲೂಕಿನ ರಂಗಾಪುರ ಗ್ರಾಮದ ಚಂದ್ರಪ್ಪ (24), ಮಾಳೇನಹಳ್ಳಿಯ ಸತೀಶ (24) ಹಾಗೂ ಮನು (26) ಮೃತರು. ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಬಸ್, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.